ಕಲಬುರಗಿ | ರಾಜ್ಯ ಸರ್ಕಾರದ ನೀತಿಯನ್ನು ಎಐಕೆಕೆಎಂಎಸ್ ಖಂಡಿಸುತ್ತದೆ; ಮಹೇಶ್ ಎಸ್ ಬಿ

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದೆ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯ ಸರ್ಕಾರದ ಈ ನೀತಿಯನ್ನು ಎಐಕೆಕೆಎಂಎಸ್ ಖಂಡಿಸುತ್ತದೆ ಎಂದು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್ ಬಿ ತಿಳಿಸಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ದೆಹಲಿಯ ಗಡಿಭಾಗದಲ್ಲಿ ಒಂದು ವರ್ಷಗಳ ಕಾಲ ಚಳಿ, ಮಳೆ ಬಿಸಿಲೆನ್ನದೆ ಲಕ್ಷಾಂತರ ರೈತರು ಹೋರಾಡಿದ, 750 ಕ್ಕೂ ಹೆಚ್ಚು ರೈತರು ಜೀವ ತೆತ್ತು ಹೋರಾಡಿದ ಫಲವಾಗಿ ಕೇಂದ್ರ ಬಿ ಜೆ ಪಿ ಸರ್ಕಾರ ತಲೆಬಾಗಿ ವಾಪಸ್ ತೆಗೆದುಕೊಂಡ ಮೂರು ಕರಾಳ ಕೃಷಿ ಕಾಯ್ದೆಗಳನ್ನೇ ಆಧರಿಸಿ ಆದಾಯ ಹೆಚ್ಚಿಸಲು ಶಿಫಾರಸು ಮಾಡಬೇಕೆಂದು ಆದೇಶಿಸಿರುವ ರಾಜ್ಯ ಸರ್ಕಾರದ ನೀತಿಯನ್ನು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು (ಎಐಕೆಕೆಎಂಎಸ್) ಉಗ್ರವಾಗಿ ಖಂಡಿಸುತ್ತದೆ” ಎಂದು ತಿಳಿಸಿದರು.

“ಇದು ಹುತಾತ್ಮ ರೈತರಿಗೆ ಮಾಡಿರುವ ಅಪಮಾನ. ಕಾಂಗ್ರೆಸ್ ಸರ್ಕಾರದ ವಚನಭ್ರಷ್ಟತೆ ಮತ್ತು ಬೆಲೆ ಕುಸಿತದಿಂದ ಕುಸಿದಿರುವ ರೈತರಿಗೆ ಮಾಡಿದ ಅನ್ಯಾಯ. ಮೂರು ಕರಾಳ ಕೃಷಿ ಕಾಯ್ದೆಯ ವಿರುದ್ಧ ಹೋರಾಟ ಮಾಡಿದ್ದೆ. ಅವುಗಳು ರೈತರ ಹಿತ ಕಾಪಾಡುವುದಿಲ್ಲವೆಂದು. ಜೊತೆಗೆ ಕಾರ್ಪೊರೇಟ್ ದೈತ್ಯರು ಕೃಷಿ ಕ್ಷೇತ್ರಕ್ಕೆ ಬರುವುದರಿಂದ ರೈತರಿಗೆ ಎಪಿಎಂಸಿಯ ರಕ್ಷಣೆಯು ಇಲ್ಲದೆ ಕಡಿಮೆ ಬೆಲೆಗೆ ತಮ್ಮ ಬೆಳೆಯನ್ನು ಮಾರುವ ಸ್ಥಿತಿ ಬರುತ್ತದೆ. ಹೀಗಿರುವಾಗ ಅದೇ ಕಾಯ್ದೆಗಳನ್ನು ಆಧರಿಸಿ ಆದಾಯ ಹೆಚ್ಚಿಸಲು ಹೇಗೆ ಸಾಧ್ಯ? ದೆಹಲಿ ಚಳುವಳಿಯಲ್ಲಿ ರೈತರು ಎಲ್ಲಾ ಬೆಳೆಗಳಿಗೂ ಕಾನೂನು ಬದ್ಧವಾದ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕೆಂದು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಾಗ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಅದಕ್ಕೆ ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿದ ಮೇಲೆಯೇ ಚಳುವಳಿಯನ್ನು ನಿಲ್ಲಿಸಿದ್ದು. ಆದರೆ ಬಿಜೆಪಿ ಸರ್ಕಾರ ವಚನಭ್ರಷ್ಟವಾಗಿ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ಧ ಮಾಡಲಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಸಮಯದಲ್ಲಿ ರೈತಪರ ಸೋಗು ಹಾಕಿಕೊಂಡು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುತ್ತೇನೆಂದು ಪ್ರಣಾಳಿಕೆಯಲ್ಲಿ ಘೋಷಿಸಿ ಮತಯಾಚನೆ ಮಾಡಿತು. ಆದರೆ ಅಧಿಕಾರಕ್ಕೆ ಬಂದಮೇಲೆ ತನ್ನ ಮೂಲ ಗುಣವಾದ ಕಾರ್ಪೊರೇಟ್ ಪರ ನೀತಿಯನ್ನು, ಬಿಜೆಪಿ ಸರ್ಕಾರ ಜಾರಿಗೆ ತಂದ ನೀತಿಯನ್ನು ಅನುಸರಿಸುತ್ತಿದೆ, ರೈತರಿಗೆ ಕೊಟ್ಟ ಮಾತು ತಪ್ಪಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ನಾಯಕರು ಕೋಮುವಾದದ ಪರವೋ, ವಿರುದ್ಧವೋ?

“ರೈತರು ಬೆಳೆದ ಎಲ್ಲ ಬೆಳೆಗಳ ಬೆಲೆಯೂ ತೀವ್ರವಾಗಿ ಕುಸಿದು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಕಡೆ ಮುಖ ಹಾಕಿ ಕುಳಿತಿರುವಾಗ ಕಾಂಗ್ರೆಸ್ ಸರ್ಕಾರ ಅವರನ್ನು ಸಾವಿನ ಕೂಪಕ್ಕೆ ತಳ್ಳುವ ಆದೇಶವನ್ನು ಹೊರಡಿಸಿದೆ. ಸರ್ಕಾರ ಖರೀದಿ ಕೇಂದ್ರಗಳಲ್ಲಿ ರೈತರ ಬೆಳೆಯನ್ನು ಸ್ವಾಮಿನಾಥನ್ ವರದಿಯಂತೆ ಸಿ2+50% ಸೂತ್ರದಲ್ಲಿ ಖರೀದಿ ಮಾಡಿದ್ದರೆ ರೈತರ ಆದಾಯ ನಿಜಕ್ಕೂ ಹೆಚ್ಚುತ್ತಿತ್ತು. ಆದರೆ ರೈತರಿಗೆ ಆದಾಯ ಮರೀಚಿಕೆಯಾಗುವಂತೆ ಮಾಡುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಆದ್ದರಿಂದ ಸರ್ಕಾರ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು, ರೈತರಿಗೆ ನಿಜವಾದ ಆದಾಯ ತರುವಂತಹ ಸಂಪೂರ್ಣ ಸರ್ಕಾರಿ ವ್ಯಾಪಾರ ಮತ್ತು ಸಿ2+50% ಸೂತ್ರದಲ್ಲಿ ಕನಿಷ್ಠ ಬೆಂಬಲಿಯೊಂದಿಗೆ ಖರೀದಿ” ಮಾಡಬೇಕೆಂದು ಎಐಕೆಕೆಎಂಎಸ್ ಒತ್ತಾಯಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...