ಕಲಬುರಗಿ | ಅಕ್ಷರ ದಾಸೋಹ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ. 20ರಂದು ಪ್ರತಿಭಟನೆ

Date:

ಹಲವಾರು ವರ್ಷಗಳಿಂದ ಅಕ್ಷರ ದಾಸೋಹ ನೌಕರರು ಕಡಿಮೆ ಸಂಭಳದಲ್ಲಿ ದುಡಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರೂ ಯಾವ ಬೇಡಿಕೆಗಳನ್ನು ಕೂಡ ಸರ್ಕಾರ ಈಡೇರಿಸಿಲ್ಲ. ಹೀಗಾಗಿ, ಸೆ.20ರಂದು ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ತಿಳಿಸಿದ್ದಾರೆ.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿ ನಡೆಯಬೇಕು, ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡಿಗೆ ನೌಕರರಿಂದ ಎಸ್.ಡಿ.ಎಮ್.ಸಿ.ಗೆ ವರ್ಗಾವಣೆ ಮಾಡಿರುವ ಕ್ರಮ ವಾಪಸ್ಸು ಅಗಬೇಕು. ಅಂದರೆ ಸಾದಿಲ್ವಾರು ಖಾತೆ ಮೊದಲಿನಂತೆ ಮುಂದುವರೆಯಬೇಕು ಎಂದು ಆಗ್ರಹಿಸಿದರು.

“2022 ರಿಂದ 60 ವರ್ಷ ಮುಗಿದ ನೌಕರುದಾರರಿಗೆ ಕೆಲಸದಿಂದ ತೆಗೆದಿರುವ ಎಲ್ಲರಿಗೂ ಒಂದು ಲಕ್ಷದಿಂದ ಎರಡು ಲಕ್ಷದವರೆಗೂ ಇಡಿಗಂಟು ಕೊಡುವ ಯೋಜನೆಗೆ ಹಣಕಾಸು ಇಲಾಖೆಯಿಂದ ಜಾರಿಯಾಗಬೇಕು, ಕೆಲಸದ ಸ್ಥಳದಲ್ಲಿ ಮರಣ ಹೊಂದಿದ ಬಿಸಿ ಊಟ ನೌಕರರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡಿಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
klb 4

“ಹಲವಾರು ವರ್ಷಗಳಿಂದ ಅಕ್ಷರ ದಾಸೋಹ ನೌಕರರು ಕಡಿಮೆ ಸಂಭಳದಲ್ಲಿ ದುಡಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಈ ಹಿಂದೆ ಅನೇಕ ಹೋರಾಟಗಳನ್ನು ಮಾಡಿಕೊಂಡು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಮಧ್ಯಾಹ್ನ ಬಿಸಿಯೂಟದ ನಿರ್ದೇಶಕರು ಮುಖಂಡರೊಂದಿಗೆ ನವೆಂಬರ್ 04 2023ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆಸಿದ್ದು, ಮತ್ತು ನವೆಂಬರ್ 15, 2023ರಂದು ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು. ಆದರೆ ಇಲ್ಲಿಯವರೆಗೂ ಇತ್ಯಾರ್ಥವಾಗಿರುವುದಿಲ್ಲ. ನಮ್ಮ ಬೇಡಿಕೆಗಳು ಕೂಡಲೇ ಬಗೆಹರಿಸಲು ಮತ್ತೊಮ್ಮೆ ಸರ್ಕಾರದ ಗಮನಕ್ಕೆ ಮೂಲಕ ತರಬಯಸುತ್ತಿದ್ದೇವೆ” ಎಂದರು.

ಇದನ್ನು ಓದಿದ್ದೀರಾ? ದಾವಣಗೆರೆ | ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಮುಖ್ಯ ಶಿಕ್ಷಕಿ ಸೇರಿ ಇಬ್ಬರ ಅಮಾನತು

ಆದ್ದರಿಂದ ಅಖಿಲ ಕರ್ನಾಟಕ ಅಕ್ಷರ ದಾಸೋಹ ನೌಕರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯು ಇದೆ ತಿಂಗಳು ಸೆಪ್ಟೆಂಬರ್ 20ರಂದು ಕಲಬುರಗಿ ನಗರದ ಜಗತ್ ವೃತ್ತದಿಂದ ವಿಧಾನಸೌಧ ಮಾರ್ಗವಾಗಿ ಡಿ.ಡಿ.ಪಿ.ಐ. ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು, ಮುಖಂಡರು ಹಾಗೂ ಬಿಸಿಯೂಟ ನೌಕರರುದಾರರು, ಪ್ರಗತಿಪರ ವಿಚಾರವಂತರು ಈ ಪ್ರತಿಭಟನೆ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಸಹಕಾರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮರೆಪ್ಪ ಮೈತ್ರಿ, ಉದಯಕುಮಾರ ಸಾಗರ್, ಮಹಾದೇವಿ ನಿಂಬಾಳ, ಸುನೀತಾ ಎಮ್, ಕುಂಬಾರ್, ಮುಕ್ತಾ ಸಿ. ಚಂದಾ, ಕಲ್ಪನಾ ಎ, ಜ್ಯೋತಿ, ಸುವರ್ಣ, ಅಂಬುಜಾ ಡೋಣಗಾಂವ್ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...