ಕಲಬುರಗಿ | ತುರ್ತಾಗಿ ಬರಪರಿಹಾರ ಒದಿಗಿಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘ ಆಗ್ರಹ

Date:

ತುರ್ತಾಗಿ ಬರಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್‌) ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಉಪಾಧ್ಯಕ್ಷ ಗಣಪತ್ ರಾವ್ ಕೆ ಮಾನೆ ಮಾತನಾಡಿ, “ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು” ಎಂದು ಆಗ್ರಹಿಸಿದರು.

ರಾಜ್ಯದ 223 ತಾಲೂಕುಗಳಲ್ಲಿ ಬರವಿದ್ದು ಜನ-ಜಾನುವಾರುಗಳಿಗೆ ನೀರು, ಮೇವಿಗಾಗಿ ಹಾಹಾಕಾರ ಆರಂಭವಾಗಿದೆ. ಪತ್ರಿಕೆಗಳ ವರದಿಯ ಪ್ರಕಾರ 29 ಜಿಲ್ಲೆಗಳ 149 ತಾಲೂಕುಗಳ 1,920 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೊಳವೆ ಬಾವಿಗಳು ಬತ್ತಿ ಹೋಗಿವೆ. ಕೆರೆಗಳಲ್ಲಿ ನೀರಿಲ್ಲ. ಜಿಲ್ಲಾಡಳಿತದಿಂದ ನೀರಿನ ಸರಬರಾಜು ಸಮರ್ಪಕವಾಗಿ ನಡೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷವೂ ಕೂಡ ಸರಿಯಾದ ಬೆಳೆಯಾಗದೆ ರೈತರಿಗೆ ಮೇವು ಸಂಗ್ರಹಿಸಿಕೊಳ್ಳಲೂ ಸಾಧ್ಯವಾಗಿಲ್ಲ. ಮೇವಿನ ಲಭ್ಯತೆಯ ಕೊರತೆಯ ಜತೆಗೆ ವಿಪರೀತ ಬೆಲೆಯಾಗುತ್ತಿದೆ. ಇದರಿಂದ ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟವಾಗಿದೆ. ಮೇವಿನ ಅಭಾವಕ್ಕೆ ಹೋಲಿಸಿಕೊಂಡರೆ ಮೇವು ಬ್ಯಾಂಕುಗಳು ಅಗತ್ಯವಿರುವಷ್ಟಿಲ್ಲ. ಜೊತೆಗೆ ರೈತರಿಗೆ ಸರಿಯಾಗಿ ವಿತರಣೆಯಾಗುತ್ತಿಲ್ಲ. ಜಾನುವಾರುಗಳಿಗೆ ಪಶು ಆಹಾರ ನೀಡುವುದಕ್ಕೂ ಹಣಕಾಸಿನ ತೊಂದರೆಯಿದೆ. ಬರವಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕೆಲಸಗಳು ನಡೆಯುತ್ತಿಲ್ಲ. ಆದ್ದರಿಂದ ಕೃಷಿ ಕಾರ್ಮಿಕರು ಮತ್ತು ಕೃಷಿ ಚಟುವಟಿಕೆಗಳನ್ನು ನೆಚ್ಚಿಕೊಂಡಿರುವವರಿಗೆ ಉದ್ಯೋಗವಿಲ್ಲದೆ ಊರೂರು ಅಲೆಯುವ, ಗುಳೆ ಹೋಗುವ ಪ್ರಮೇಯ ಬಂದಿದೆ. ಮನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವುದರಲ್ಲಿ ಮತ್ತು ಹಣ ಬಿಡುಗಡೆ ಮಾಡುವುದರಲ್ಲಿ ವ್ಯತ್ಯಯವಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಆದಾಯವಿಲ್ಲದೆ ಸಂಕಷ್ಟದಲ್ಲಿದ್ದಾರೆ” ಎಂದರು.

“ಒಂದು ಕಡೆ, ನೀರು, ಮೇವಿನ ಸಮಸ್ಯೆಯಾದರೆ, ಇನ್ನೊಂದು ಕಡೆ ಕೊಳವೆ ಬಾವಿಗಳು ಬತ್ತಿಹೋಗಿರುವುದರಿಂದ ರೈತರು ತಮ್ಮ ತೋಟದ ಬೆಳೆಗಳನ್ನು ಕಾಪಾಡಿಕೊಳ್ಳುವುದರಲ್ಲಿ ಹೈರಾಣಾಗಿದ್ದಾರೆ. ಕೊಳವೆ ಬಾವಿ ಕೊರೆಯುವ ಏಜೆನ್ಸಿಗಳು ದುರಿತ ಸಮಯದ ಲಾಭ ಪಡೆದುಕೊಳ್ಳಲು ಕೊಳವೆ ಬಾವಿ ಕೊರೆಯುವ ದರಗಳನ್ನು ಏರಿಸಿ ಉರಿಯುವ ಗಾಯಕ್ಕೆ ಉಪ್ಪು ಸವರಿದ್ದಾರೆ” ಎಂದು ಹೇಳಿದರು.

“ಒಂದು ಕೊಳವೆ ಬಾವಿಗೆ ಹಲವು ಲಕ್ಷ ಖರ್ಚು ಮಾಡಬೇಕು ಮತ್ತು ನೀರು ಬರುತ್ತದೆಯೆಂಬ ಖಚಿತತೆಯೂ ಇಲ್ಲ. ಎಷ್ಟೋ ಕಡೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿ ಟ್ಯಾಂಕರ್‌ಗಳಿಂದ ತೋಟಕ್ಕೆ ನೀರು ಹಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ರೈತರು ಬೆಳೆಹಾನಿ, ಆದಾಯ ಕಡಿತ, ನಿರುದ್ಯೋಗ, ಒಟ್ಟಾರೆ ಬರಗಾಲದಲ್ಲಿರುವಾಗ ಮೈಕ್ರೊ ಫೈನಾನ್ಸ್‌ನವರು ಸಾಲ ವಸೂಲಾತಿಗೆ ನಿಂತಿರುವುದು ಅತ್ಯಂತ ಖಂಡನೀಯ” ಎಂದರು.

“ಆರ್ಥಿಕ ಸಂಕಷ್ಟದ ಸಮಯದಲ್ಲಿ ಮನೆ ನಡೆಸಿಕೊಂಡು ಹೋಗಲು ಮತ್ತು ಕೃಷಿ ಕೆಲಸಗಳಿಗಾಗಿ ಗ್ರಾಮೀಣ ಜನರು ಮುಖ್ಯವಾಗಿ ರೈತ ಮಹಿಳೆಯರು ವಿಶೇಷವಾಗಿ ಮೈಕ್ರೊ ಫೈನಾನ್ಸ್‌ನವರಿಂದ ಸಾಲ ತೆಗೆದುಕೊಳ್ಳುತ್ತಾರೆ. ಮೈಕ್ರೊ ಫೈನಾನ್ಸ್‌ನವರು ವಿಪರೀತ ಬಡ್ಡಿಯ ಜತೆ ಅಪಮಾನಕಾರಿ ರೀತಿಯಲ್ಲಿ ಸಾಲ ವಸೂಲಾತಿಗೆ ಇಳಿದಿರುವುದರಿಂದ ಅಪಮಾನ ತಾಳಲಾಗದ ರೈತರು, ಮುಖ್ಯವಾಗಿ ಮಹಿಳೆಯರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರಪರಿಹಾರ ಹಣದ ಬಿಡುಗಡೆ ವಿಷಯದಲ್ಲಿ ಪರಸ್ಪರ ದೋಷಾರೋಪ ಮಾಡಿಕೊಂಡು ಚುನಾವಣಾ ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ. ಇವರ ಮಧ್ಯೆ ರೈತರು ಸತ್ತು ಸುಣ್ಣವಾಗುತ್ತಿದ್ದಾರೆ. ಇದಂತೂ ಅಕ್ಷಮ್ಯ ಮತ್ತು ಅಮಾನವೀಯ. ಆದ್ದರಿಂದ ಬರದಿಂದ ಮುಖ್ಯವಾಗಿ ರೈತ ಸಮುದಾಯವನ್ನು ಕಾಪಾಡಲು ಕೆಳಗಿನ ಕ್ರಮಗಳನ್ನು ಕೂಡಲೇ ತೆಗೆದುಕೊಳ್ಳಬೇಕು” ಎಂದು ಎಐಕೆಕೆಎಂಎಸ್ ಆಗ್ರಹಿಸುತ್ತದೆ.

ಎಐಕೆಕೆಎಸ್‌ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಬಿ ಭಗವಾನ್ ರೆಡ್ಡಿ ಅವರು ಉಪಸ್ಥಿತರಿದ್ದರು. ಇವರೊಂದಿಗೆ ಜಿಲ್ಲಾಧ್ಯಕ್ಷ ಗಣಪತ್ ರಾವ್ ಕೆ ಮಾನೆ, ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ್ ಸಿಂಗ್ ಸದಸ್ಯರುಗಳಾದ ಹರೀಶ್ ಸಂಗಾಣಿ, ಭೀಮಶಂಕರ ಆಂದೋಲ, ಗುಂಡೇರಾಯ್ ಪಾಟೀಲ್, ಶರಣಬಸಪ್ಪ ಬಾಬನಗೋಳ್, ಅಮೃತ್ ಚೌಹಾನ್,ಜಿಲ್ಲಾ ಕಾರ್ಯದರ್ಶಿ  ಮಹೇಶ್ ಎಸ್ ಬಿ
ಜಿಲ್ಲಾ ಕಾರ್ಯದರ್ಶಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...