ಕಲಬುರಗಿ | ಪಿಡಿಒ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ರದ್ದತಿಗೆ ಆಗ್ರಹ

Date:

ನವೆಂಬರ್ 17 ರಂದು ಕೆಪಿಎಸ್ಸಿ ನಡೆಸಿದ್ದ ಕಲ್ಯಾಣ ಕರ್ನಾಟಕ ವೃಂದದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಕೂಡಲೇ ಮರುಪರೀಕ್ಷೆ ನಡೆಸಬೇಕೆಂದು ಎಸ್‌ಎಫ್‌ಐ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಎಸ್‌ಎಫ್‌ಐ ಸೇರಿದಂತೆ ಇತರೆ ಸಂಘಟನೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸುಜಾತಾ ಮಾತನಾಡಿ, ʼನ.17ರಂದು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ನಡೆಸಿದ್ದ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ರಾಯಚೂರಿನ ಪರೀಕ್ಷೆ ಕೇಂದ್ರವೊಂದರಲ್ಲಿ ಇದ್ದ 24 ಅಭ್ಯರ್ಥಿಗಳಲ್ಲಿ 12 ಅಭ್ಯರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಕೊಟ್ಟಿದ್ದು, ಉಳಿದ 12 ಅಭ್ಯರ್ಥಿಗಳಿಗೆ ಒಂದು ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಸದೆ, ಪ್ರತಿಯಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನೇಮಕಾತಿ ಪರೀಕ್ಷೆಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ಸರ್ಕಾರ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ ಪರಿಣಾಮವಾಗಿ ನೂರಾರು ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ. ಈ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಕುರಿತು ಸೂಕ್ತ ತನಿಖೆಯಾಗಬೇಕು, ಮರುಪರೀಕ್ಷೆ ಮಾಡಬೇಕು. ಅಕ್ರಮ ಎಸಗಿದ ತಪ್ಪಿಸ್ಥರನ್ನು ಅಮಾನತುಗೊಳಿಸಿ ಬಂಧಿಸಬೇಕು. ಪರೀಕ್ಷೆ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣ ಕೂಡಲೇ ರದ್ದುಗೊಳಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಪ್ರಮುಖರಾದ ಮೇಘಾ, ಲವಿತ್ರಾ, ಪ್ರೇಮ್, ಭರತ್, ನಾಗಮ್ಮ, ಹುಲಿಗಮ್ಮ, ಮಾಲಾಶ್ರೀ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...