ಕಲಬುರಗಿ | ಅನೈತಿಕ ಚಟುವಟಿಕೆಯ ತಾಣವಾದ ಆಂದೋಲಾ ಗ್ರಾಮದ ಶಿಕ್ಷಕರ ವಸತಿ ಗೃಹ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಿಕ್ಷಕರ ವಸತಿ ಇನ್ನೂ ಉದ್ಘಾಟನೆಯನ್ನೂ ಕಾಣಲಾಗಿಲ್ಲ. ಸರಿಯಾದ ನಿರ್ವಹಣೆಯೂ ಇಲ್ಲದೆ, ಅನೃತಿಕ ಚಟುವಟಿಕೆಗಳ ಅಡ್ಡೆಯಾಗಿ ಮಾರ್ಪಟ್ಟಿದೆ. 8 ಕೊಠಡಿಗಳು ಇರುವ ಈ ವಸತಿ ಗೃಹವನ್ನು 2018-19ರಲ್ಲಿ ನಿರ್ಮಾಣ ಮಾಡಲಾಗಿತ್ತು. ನಿರ್ಮಾಣಗೊಂಡ ಬಳಿಕ ಕಟ್ಟಡ ಸರ್ಕಾರದ್ದು ಎಂಬುದನ್ನು ಅಧಿಕಾರಗಳು ಮರೆತೇ ಬಿಟ್ಟಿದ್ದಾರೆ. ಅಲ್ಲದೆ, ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಕಾರಿ ನಡೆಸಲಾಗಿದೆ ಎಂಬ ಆರೋಪಗಳೂ ಇವೆ.

ಶಿಕ್ಷಕರ ವಸತಿ ಗೃಹವನ್ನು ಸುಮಾರು 80-90 ಲಕ್ಷ ರೂಪಾಯಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಟ್ಟಡದ ಕಿಟಕಿ, ಬಾಗಿಲು, ಮೇಲ್ಛಾವಣಿಗಳು ಕಳಪೆ ಕಾಮಗಾರಿಯನ್ನು ಪ್ರದರ್ಶಿಸುತ್ತಿವೆ. ಅವೆರಲ್ಲವೂ ಕುಸಿದು ಬೀಡುವ ಅವಸ್ಥೆಗೆ ತಲುಪಿವೆ. ಕಿಡಿಗೇಡಿಗಳು ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ವಿದ್ಯುತ್ ಸಂಪರ್ಕ ಕೂಡ ಇಲ್ಲ. ಸುತ್ತಮುತ್ತ ಜಾಲಿ ಕಂಟಿ ಬೆಳೆದು ನಿಂತಿವೆ. ಹಂದಿಗಳು ತಮ್ಮ ವಾಸಸ್ಥಾನ ಮಾಡಿಕೊಂಡಿವೆ. ಕಟ್ಟಡ ಸಮಸ್ಯೆ ಮತ್ತು ಬಳಕೆಯ ಬಗ್ಗೆ ‘ದಲಿತ ಸೇನೆ’ ಮುಖಂಡರು ಹಲವಾರು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ಅದರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ.

WhatsApp Image 2023 09 03 at 5.51.23 PM

ಕತ್ತಲಾಗುತ್ತಿದ್ದಂತೆ ಇಲ್ಲಿ ಕುಡುಕರ ದಂಡೇ ಸೇರುತ್ತದೆ. ಜೂಜು ಸೇರಿದಂತೆ ಅನೈತಿಕ ಚಟುವಟಿಗಳು ನಡೆಯುತ್ತವೆ. ಇದರಿಂದಾಗಿ, ಸುತ್ತಮುತ್ತಲ ಜನರು, ವಿದ್ಯಾರ್ಥಿಗಳು, ಶಿಕ್ಷಕರು ಅಸಮಾಧಾನಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಹಣ ಅನಾವಶ್ಯಕವಾಗಿ ಪೋಲಾಗುತ್ತಿದೆ. ಇದನ್ನು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಕಟ್ಟಡವನ್ನು ದುರಸ್ತಿಗೊಳಿಸಿ, ಶಿಕ್ಷಕರ ಬಳಕೆಗೆ ಒದಗಿಸಬೆಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಶಿಕ್ಷಕ ವಸತಿ ಗೃಹ ಉದ್ಘಾಟನೆಗೊಳ್ಳದೇ, ಹೊಸ ಕಟ್ಟಡ ಪಾಳು ಬಿದ್ದಿರುವ ಕುರಿತು ಈದಿನ.ಕಾಮ್ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಗಳಿಗೆ ಸುಮಾರು ಬಾರಿ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದೆ. ಆದರೆ, ಅವರು ಕರೆ ಸ್ವೀಕರಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...