ಕಲಬುರಗಿ | ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ

Date:

ಕಲಬುರಗಿ ಜಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಕುಮಾರ್ ಹೇಳಿದರು.

ತಾಲೂಕಿನ ದಂಡೋತಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಅಜೀಮ್ ಪ್ರೇಮ್ ಜೀ ಫೌಂಡೇಶನ್ ಜಿಲ್ಲಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಲ ಮೇಳ, ಚಿಣ್ಣರ ಚಿಲಿಪಿಲಿ ಅಂಗನವಾಡಿ ಮಕ್ಕಳ ಹಬ್ಬ ಕಾರ್ಯಕ್ರಮದ ಭಾಗವಾಗಿದ್ದ ಅವರು ಮಾತನಾಡಿದರು.

ತಾಲೂಕಿನ ಅಂಗನವಾಡಿ ಶಾಲೆಗಳಲ್ಲಿನ ವ್ಯವಸ್ಥೆ ಮತ್ತು ಕಾರ್ಯಕರ್ತೆಯರು ಮಕ್ಕಳಿಗೆ ಕಲಿಸುವ ಪಾಠ ಹಾಗೂ ಮಕ್ಕಳೊಂದಿಗೆ ಮಕ್ಕಳಾಗಿ, ಮಕ್ಕಳಿಂದ ಮಾಡಿಸುವ ವಿವಿಧ ಚಟುವಟಿಕೆಗಳನ್ನು ನೋಡಿದರೆ ಸಾವಿರಾರು ರೂಪಾಯಿ ಖರ್ಚು ಮಾಡಿ ನಮ್ಮ ಮಕ್ಕಳನ್ನು ಸೇರಿಸುವ ಕಾನ್ವೆಂಟ್ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರಗಳು ಮೇಲಾಗಿವೆ. ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ವಲಯ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಂಡೋತಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಬೂಬ್ ಪಟೇಲ್ ಮಾತನಾಡಿ, ಬೇರೆ ಕಡೆಗಳಲ್ಲಿ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿಗಳಿಂದ ಅಂಗನವಾಡಿ ಶಾಲೆಗಳಿಗೆ ಅದೇಷ್ಟೋ ಅನುದಾನ ನೀಡಿದರು ಸಹ, ಮಕ್ಕಳಿಗೆ ಕಲಿಸುವ ಉತ್ಸಾಹ ಇರುವುದಿಲ್ಲ. ಅಥಹದರಲ್ಲಿ ದಂಡೋತಿ ವಲಯದಲ್ಲಿ ಬರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಉತ್ತಮ ಕಾರ್ಯಕರ್ತೆಯರಿಂದಲೇ ನಮ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ ಎಂದರು.

ಅಜೀಮ್ ಪ್ರೇಮ್ ಜೀ ಫೌಂಡೇಶನ್ನಿನ ಶೃತಿ, ರವಿಚಂದ್ರ, ರೇಣುಕಾ, ತರುಣ ಅವರು ಮಕ್ಕಳಿಗೆ ಮತ್ತು ಮಕ್ಕಳ ಪಾಲಕರಿಗೆ ವಿವಿಧ ಚಟುವಟಿಕೆಗಳನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಲೀಲಾ ಪಾಳೇದಕರ್, ಉಪಾಧ್ಯಕ್ಷೆ ಶರಣಬಸ್ಸಮ್ಮ ಕವಡೆ, ಶಾಲೆಯ ಸಹ ಶಿಕ್ಷಕರಾದ ಮಲ್ಲಣ್ಣ, ಶಿವಲೀಲಾ, ಸಷಿಯುನ್ನಿಸಾ, ಮೌನೇಶ್ ವಿಶ್ವಕರ್ಮ ಸೇಡಂ, ವೈದ್ಯರಾದ ರಜಿವುಲ್ ಖಾದ್ರಿ, ಮೇಲ್ವಿಚಾರಕಿಯರಾದ ಶೀಲಾ ದೇವಿ, ಕವಿತಾ ಪಾಟೀಲ್, ಶೋಭಾ, ಸುನಿತಾ, ಗೀತಾ ಯಡ್ರಾಮಿ, ಗ್ರಾಮದ ಮುಖಂಡರಾದ ದಾವೂದ್ ಪಟೇಲ್, ರಷೀದ್ ಪಠಾಣ್, ರಮೇಶ್ ಕವಡೆ, ಅಂಗನವಾಡಿ ಶಿಕ್ಷಕಿಯರಾದ ವಿದ್ಯಾನಿಧಿ ಕವಡೆ, ಅಕ್ಕಮಹಾದೇವಿ ಬೃಂಗಿಮಠ, ಸರಸ್ವತಿ, ರಾಧಾಬಾಯಿ, ಬಸಮ್ಮ, ಆಲಿಯಾ, ರೇಖಾ, ದೇವಿಂದ್ರಮ್ಮಾ ಪಾಟೀಲ್, ಸುಮಲತಾ ಬಟಿಗೇರಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು ಗ್ರಾಮದ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...