ಕಲಬುರಗಿ | ಸ್ವಚ್ಛತಾ ಭಾಗ್ಯ ಕಾಣದ ಅಂಕಲಗಾ ಗ್ರಾಮ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮ ಪಂಚಾಯತಿ ಇರುವ ಗ್ರಾಮವೇ ಮೂಲಸೌಕರ್ಯ ಕೊರತೆಯಿಂದ ನಲುಗಿತ್ತಿದೆ.

ಗ್ರಾಮದ ನಡು ರಸ್ತೆಯಲ್ಲೇ ಚರಂಡಿ ನೀರು ಕೆರೆಯಂತೆ ನಿಂತಿದ್ದರೂ ಈವರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಸದಸ್ಯರು ತಿರುಗಿ ನೋಡಿತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಕರೆಪ್ಪ ಕರಗೊಂಡ್ ಈ ದಿನ.ಕಾನೊಂದಿಗೆ ಮಾತನಾಡಿ, “ವರ್ಷ ತುಂಬುವುದರೊಳಗಾಗಿ ₹21 ಲಕ್ಷಕ್ಕೂ ಹೆಚ್ಚು ಹಣ ಖರ್ಚು ಮಾಡಿದ ಅಂಕಲಗಾ ಗ್ರಾಮ ಪಂಚಾಯಿತಿ ಅಧಿಕಾರಿ ಅಂಕಲಗಾ ಗ್ರಾಮಕ್ಕೆ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಮುಂದಾಗದೇ ಇರುವುದರಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚರಂಡಿಯ ನೀರು ರಸ್ತೆಯಲ್ಲಿ ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟದಿಂದ ಮಲೇರಿಯಾ, ಡೆಂಘಿಯಂತಹ ರೋಗಗಳು ಹರಡುತ್ತಿದ್ದು, ಸುರಕ್ಷತಾ ಕ್ರಮವಾಗಿ ಯಾವುದೇ ಕ್ರಮ ಜರುಗಿಸುತ್ತಿಲ್ಲ” ಎಂದು ಅಂಕಲಗಿ ಗ್ರಾಮಸ್ಥರು ತಮ್ಮ ಅಳಲು ಹೇಳಿಕೊಂಡಿದ್ದಾರೆ.

ಈ ಸುದ್ದಿಓದಿದ್ದೀರಾ? ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

“ಗ್ರಾಮದಲ್ಲಿ ಪ್ರತಿ ವಠಾರದಲ್ಲಿ ಚರಂಡಿಗಳು ಸ್ವಚ್ಛತೆಯಿಲ್ಲದೆ ಗಬ್ಬೆದ್ದು ನಾರುತ್ತಿವೆ. ಎಲ್ಲಿಯೂ ಬ್ಲೀಚಿಂಗ ಪೌಡರ್ ಸಿಂಪಡಣೆಯಾಗಿಲ್ಲ. ಪ್ರತಿ ಶನಿವಾರ ಅಂಕಲಗಾ ಗ್ರಾಮದಲ್ಲಿ ಸಂತೆ ನಡೆಯುತ್ತದೆ. ಆದರೂ ಮೂಲ ಸೌಕರ್ಯಗಳು ಕಣ್ಮರೆಯಾಗಿವೆ” ಎಂದು ರೈತ ಮುಖಂಡ ಕರೆಪ್ಪ ಕರಗೊಂಡ್ ಕಳವಳ ವ್ಯಕ್ತಪಡಿಸಿದರು.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...