ಕಲಬುರಗಿ | ಬಿಜೆಪಿಯಿಂದ ಮಹಿಳಾ ವಿರೋಧಿ ಜಾಹೀರಾತು; ಸಿಪಿಐ ಖಂಡನೆ

Date:

ಬಿಜೆಪಿಯು ಚುನಾವಣಾ ಪ್ರಚಾರಕ್ಕಾಗಿ ಮಾಡಿರುವ ಜಾಹೀರಾತೊಂದು ಮಹಿಳಾ ವಿರೋಧಿಯಾಗಿದೆ ಎಂದು ಖಂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಮುಖಂಡರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

ಈ ವೇಳೆ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಮಾತನಾಡಿ, “ಬಿಜೆಪಿಯು ಚುನಾವಣಾ ಪ್ರಚಾರಕ್ಕಾಗಿ ಜಾಹೀರಾತೊಂದನ್ನು ಮಾಡಿದೆ. ಅದು ಮಹಿಳಾ ವಿರೋಧಿಯಾಗಿದೆ. ವಧು ವೇಷದ ಮಹಿಳೆಯನ್ನು ಸುತ್ತುವರಿದು ವರನಾಗುವ ಸ್ಪರ್ಧೆ ನಡೆಯುವಂತಹ ಕಿತ್ತಾಡುವ ದೃಶ್ಯಗಳು ಇದ್ದು ಮತ್ತು ಕೊನೆಯಲ್ಲಿ ಮೋದಿಯವರನ್ನು ತೋರಿಸಲಾಗಿದೆ. ಬಿಜೆಪಿಯು ಚುನಾವಣೆಯಲ್ಲಿ ಗೆಲ್ಲಲು ಮಹಿಳೆಯರಿಗೆ ಅಪಮಾನ ಮಾಡುವಂತಹ ಜಾಹಿರಾತು ಬಳಸಿರುವುದು ಆ ಪಕ್ಷದ ಮಹಿಳಾ ವಿರೋಧಿ ನಡೆಯನ್ನು ಜಗಜ್ಜಾಹಿರುಗೊಳಿಸಿದಂತಾಗಿದೆ” ಎಂದರು.

ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವ ಸಂವಿಧಾನದ ಆಶಯವನ್ನು ಉಲ್ಲಂಘಿಸಿದೆ ಬಿಜೆಪಿ, ಸಿಪಿಐಎಂ ಪಕ್ಷ ಕಲಬುರಗಿ ಜಿಲ್ಲಾ ಸಮಿತಿಯು ಇದನ್ನು ತೀವ್ರವಾಗಿ ಖಂಡಿಸುತ್ತದೆ. ಮಾತ್ರವಲ್ಲ ಈ ಜಾಹೀರಾತನ್ನು ಕೂಡಲೇ ರದ್ದುಗೊಳಿಸಿ ದೇಶದ ಜನತೆಯಲ್ಲಿ ಬಿಜೆಪಿಯು ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಕಮಿಷನ್ ಕೂಡಲೇ ದೇಶದ ಮಹಿಳೆಯರನ್ನು ಹೀಗೆ ಅಪಮಾನಿಗೊಳಿಸಿದ ಮತ್ತು ಮಹಿಳೆಯರ ಆಯ್ಕೆಯ ಹಕ್ಕಿನ ಧಾಳಿ ಮಾಡಿದ್ದರಿಂದ ಬಿಜೆಪಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮದುವೆಯು ಸಂಪೂರ್ಣ ವೈಯಕ್ತಿಕವಾದ ಸಾಂಸ್ಕೃತಿಕ ವಿಷಯವಾಗಿದೆ. ಆದರೆ, ಬಿಜೆಪಿಯು ಒಬ್ಬ ವಧುವಿಗೋಸ್ಕರ ಎಲ್ಲರೂ ಕಿತ್ತಾಡುವ ದೃಶ್ಯವನ್ನು ವರ್ಣರಂಜತವಾಗಿ ತೋರಿಸಿ ಮಹಿಳೆಯ ಅಸ್ತಿತ್ವ, ಅಸ್ಮಿತೆಗೆ ಧಕ್ಕೆ ಉಂಟು ಮಾಡಿದೆ. ಇಂತಹ ಮಹಿಳಾ ವಿರೋಧಿ ಮತ್ತು ಸಂವಿಧಾನದ ಮೌಲ್ಯದ ವಿರೋಧಿ ಜಾಹೀರಾತು ತರುವ ಮೂಲಕ ಮನುಸ್ಮೃತಿಯ ಕಣ್ಣೋಟವನ್ನು ಜನಮಾನಸದಲ್ಲಿ ತುಂಬಲು ಹೊರಟಿದೆ ಎಂದರು.

ಇಂತಹ ದೃಶ್ಯಗಳ ಮೂಲಕ ಮಹಿಳೆಯರ ಘನತೆಗೆ ದಕ್ಕೆ ತಂದಿರುವುದಲ್ಲದೆ, ಈ ಜಾಹೀರಾತು ವೀಕ್ಷಕರ ಮನದಲ್ಲಿ ಮನುಸ್ಮೃತಿಯ ಮೌಲ್ಯಗಳನ್ನು ತುಂಬಿ ಸಂವಿಧಾನದ ದೃಢ ನಿಲುವಾದ ವರ್ಣ-ವರ್ಣ-ಲಿಂಗ-ಜಾತಿಯ ತಾರತಮ್ಯವನ್ನು ಅಳಿಸಿ ಹಾಕುವ ಸಮಾನತೆಯ ಸಮಾಜವಾದಿ ನಾಡು ಕಟ್ಟುವ ಆಶಯವನ್ನು ಮಣ್ಣುಪಾಲು ಮಾಡಲು ಹೊರಟಿದೆ. ಇದು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹತ್ತಿಕ್ಕುವ ಹುನ್ನಾರವಾಗಿದೆ ಎಂದರು.

ಈ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿಯು ಅತ್ಯಂತ ಕೀಳು ಮಟ್ಟದ ಜಾಹೀರಾತುಗಳನ್ನು ಮಾಡುವ, ಸುಳ್ಳನ್ನು ಪ್ರಚಾರಗೊಳಿಸುವ, ಜನರನ್ನು ಭಾವೋದ್ರೇಕಗೊಳಿಸುವ, ಮತೀಯ ಪ್ರಚೋದನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರುವ ಮುಂತಾದ ಅಸಂವಿಧಾನಿಕ ಕೃತ್ಯಕ್ಕೆ ಇಳಿದಿದೆ. ಹೀಗೆ ಮಾಡುವ ಮೂಲಕ ತಾನೊಂದು ಮಹಿಳಾ ವಿರೋಧಿ, ಜನವಿರೋಧಿ ಪಕ್ಷ ಎಂಬುದನ್ನು ಜಾಹೀರುಗೊಳಿಸುತ್ತಿದೆ. ದೇಶದ ಜನತೆಯು ಇದನ್ನು ಅರಿಯಬೇಕಿದೆ ಎಂದು ಸಿಪಿಐಎಂ ಪಕ್ಷವು ವಿನಂತಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...