ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

Date:

ಕಲಬುರಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಸೇಡಂ  ಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಮಾಜಿ ಪ್ರಧಾನ ಮಂತ್ರಿ ದೇವೆಗೌಡರ ಬೆಂಗಳೂರಿನ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, “ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದ ಬೆಳೆ ಬಾರದೆ ರೈತರು ತೊಂದರೆ ಅನುಭವಿಸುವಂತಾಗಿದೆ. ಬರ ಘೋಷಣೆಯಾದರೂ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಲು ಮುಂದೆ ಬರುತ್ತಿಲ್ಲ. ಹಾಗಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದು ಒತ್ತಾಯಿಸಿದರು.

“ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರ ಇದ್ದು, 195 ತಾಲೂಕುಗಳನ್ನು ಬರಪೀಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ ಒಂದು ತಿಂಗಳು ಕಳೆದಿದೆ. ಬರಗಾಲ ಪೀಡಿತ ಪ್ರದೇಶಗಳಲ್ಲಿ ಕೇಂದ್ರದ ತಂಡ ಸಮೀಕ್ಷೆ ಮಾಡುತ್ತಿದೆ. ಆದರೆ ಇದು ವಿಳಂಬಕ್ಕೆ ಕಾರಣವಾಗಿದೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಿದರೆ ನಮ್ಮ ಭಾಗದ ರೈತರಿಗೆ ಅನೂಕೂಲವಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಈಗಾಗಲೇ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು, ಕೃಷಿ ಸಚಿವರೂ ಕೂಡ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಜತೆಗೆ ಸಚಿವರೂ ಕೂಡ ಬೆಳೆ ವೀಕ್ಷಿಸಿದ್ದಾರೆ. ಹೆಸರು, ಉದ್ದು, ಎಳ್ಳು, ಸೋಯಾಬೀನ್ ಮುಂತಾದ ಮುಂಗಾರು ಬೆಳೆಗಳು ಮಳೆ ಬಾರದೆ ಹಾಳಾಗಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ಈವರೆಗೆ ಬೆಳೆಯಿಂದ ಒಂದು ರೂಪಾಯಿ ಕೂಡ ಕಂಡಿಲ್ಲ. ಸಾಲ ಮಾಡಿ ಬಿತ್ತನೆ ಬೀಜ ಮತ್ತು ಗೊಬ್ಬರ ಖರೀದಿಸಿದ್ದಾರೆ. ಸಾಲ ಮರುಪಾವತಿಗೆ ಹಣವಿಲ್ಲ. ಮಳೆ ಬಂದಿದ್ದರೆ ಈಗಾಗಲೇ ರೈತರ ಕೈಗೆ ಹಣ ಬರುತ್ತಿತ್ತು. ಪರಿಸ್ಥಿತಿ ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರದ ಖಜಾನೆ ಖಾಲಿ ಮಾಡುತ್ತಿದ್ದಾರೆ. ಆದರೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ತೋರುತ್ತಿಲ್ಲ” ಎಂದು ಆರೋಪಿಸಿದರು.

“ರೈತರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಬರ ಪರಿಹಾರ ನೀಡುವಂತೆ ತಾವು ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ಅನೂಕುಲ ಮಾಡಿಕೊಡಬೇಕು” ಎಂದು ಅವರು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ರೈತನ ಮೇಲೆ ಕರಡಿಗಳ ದಾಳಿ; ಅರಣ್ಯ ಇಲಾಖೆಯೇ ಚಿಕಿತ್ಸೆ ವೆಚ್ಚ ಭರಿಸುವಂತೆ ಒತ್ತಾಯ

“ಕಲಬುರಗಿ ಜಿಲ್ಲೆ ಸೇರಿದಂತೆ ಸೇಡಂ ಮತಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಇಂದರಿಂದ ರಾತ್ರಿಯ ತುರ್ತು ಪರಿಸ್ಥಿತಿ ವೇಳೆ ಚಿಕಿತ್ಸೆ ಸಿಗದೆ ಸಾವುಗಳಾಗುತ್ತಿವೆ. ಈ ಹಿನ್ನೆಲೆಯಲ್ಲಿ ವೈದ್ಯ ಹುದ್ದೆಗಳ ಭರ್ತಿಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...