ಕಲಬುರಗಿ | ಹೊಟ್ಟೆನೋವು, ತಲೆನೋವಿನಿಂದ 33 ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ಹೊಟ್ಟೆನೋವು, ತಲೆನೋವು ಮತ್ತು ವಾಂತಿಯಿಂದಾಗಿ 33 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಕೋಡ್ಲಾ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 33 ವಿದ್ಯಾರ್ಥಿನಿಯರು ಭಾನುವಾರ ರಾತ್ರಿ ಹೊಟ್ಟೆ ನೋವು, ವಾಂತಿಯಿಂದಾಗಿ ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ತಲೆನೋವು ಕಾಣಿಸಿಕೊಂಡಿದೆ. ಕೆಲ ವಿದ್ಯಾರ್ಥಿನಿಯರಿಗೆ ವಾಂತಿಯಾಗಿದೆ. ಬಳಿಕ ವಾಹನದಲ್ಲಿ ಸೇಡಂ ತಾಲೂಕು ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿನಿಯರಲ್ಲಿ ವಾಂತಿ, ತಲೆನೋವು ಮತ್ತು ಹೊಟ್ಟೆನೋವು ಕಾಣಿಸಿಕೊಂಡಿದೆ. ಗಂಭೀರವಾಗಿರುವಂತಹದ್ದೇನೂ ಇಲ್ಲ” ಎಂದು ಆಸ್ಪತ್ರೆಯ ವೈದ್ಯ ಡಾ ನಾಗನಾಥ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಜಂಟಿ‌ ನಿರ್ದೇಶಕಿ ಪಿ.ಶುಭ ಸೋಮವಾರ ಬೆಳಿಗ್ಗೆ ಸೇಡಂನ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಶಾಲೆಯ ಪ್ರಾಧ್ಯಾಪಕಿ ಪ್ರಮಿಳಾ ಹಾಗೂ ಪಾಲಕರು ಇದ್ದರು.

ಕಲುಷಿತ ಆಹಾರ ಸೇವನೆ ಶಂಕೆ: ವಸತಿ ನಿಲಯದಲ್ಲಿ 176 ವಿದ್ಯಾರ್ಥಿನಿಯರಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿನಿಯರಿಗೆ ಮಾತ್ರ ಆರೋಗ್ಯದಲ್ಲಿ ಏರುಪೇರಾಗಿದೆ. ವಿದ್ಯಾರ್ಥಿನಿಯರು ಸೇವಿಸಿದ ನೀರು ಮತ್ತು ಆಹಾರ ಕಲುಷಿತಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನೀರು ಉಳಿಸಲು ‘ಸೆಕ್ಷನ್ 144’ ಜಾರಿ

“ಕೆಲವು ದಿನಗಳಿಂದ ಶ್ರೀ ಸಿಮೆಂಟ್ ಕಂಪನಿಯು ರಾಸಾಯನಿಕ ಪದಾರ್ಥ ಹೊರ ಬಿಡುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ತಲೆನೋವು, ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ನಿಖರ ಕಾರಣವನ್ನು ಪತ್ತೆ ಮಾಡಬೇಕು” ಎಂದು ಪಾಲಕರು ಆಗ್ರಹಿಸಿದ್ದಾರೆ.

“ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಲಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ನಿಖರ ಕಾರಣ ತಿಳಿದುಬಂದಿಲ್ಲ. ಸೋಮವಾರ ಸಂಜೆಯ ವೇಳೆಗೆ ಕಾರಣ ತಿಳಿಯಬಹುದು” ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ‌ ನಿರ್ದೇಶಕಿ ಪಿ.ಶುಭ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...