ಕಲಬುರಗಿ | ಬಾಂಗ್ಲಾ ಘಟನೆ ಖಂಡಿಸಿ ಸೇಡಂ ಬಂದ್

Date:

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ಕೊಲೆ, ದೌರ್ಜ್ಯನ್ಯ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಚಾರ ಹಾಗೂ ಸೇಡಂನಲ್ಲಿ ಹಿಂದೂ ಯುವಕರ ಮೇಲೆ ನಡೆದ ಗುಂಪು ಹಲ್ಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆ ಮುಖಂಡರು ಹಾಗೂ ಸ್ಥಳೀಯರು ನಡೆಸಿದ್ದ ಸೇಡಂ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ ಬಂದ್ ಕರೆಗೆ ವ್ಯಾಪಾರಸ್ಥರು ಸಂಪೂರ್ಣ ಬೆಂಬಲ ನೀಡಿದ್ದು ತಮ್ಮ ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚುವ ಮೂಲಕ ಬಂದ್‌ ಯಶಸ್ವಿಗೆ ಕಾರಣರಾಗಿದ್ದಾರೆ. ಇನ್ನೂ ಈ ಬಂದ್‌ಗೆ ಆಟೋ ಚಾಲಕರೂ ಕೂಡ ಬೆಂಬಲ‌ ನೀಡಿದ್ದು, ಕೇಲವ ತುರ್ತು ಅವಶ್ಯಕತೆ ಹಾಗೂ ರೋಗಿಗಳಿಗೆ ಮಾತ್ರ ಸಂಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕರುಣೇಶ್ವರ ಮಠದ ಆಂದೋಲಾ ಶ್ರೀಗಳು ಮಾತನಾಡಿ, “ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆದಿದ್ದು, ಇಲ್ಲಿನ ಹಿಂದೂ ಬಾಂಧವರು ಸೇರಿಕೊಂಡು ಒಗ್ಗಟ್ಟಿನಿಂದ ಅಣ್ಣ ತಮ್ಮಂದಿರಂತೆ ಸೇಡಂ ಬಂದ್ ಮಾಡಿರುವುದು ಶ್ಲಾಘನೀಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವದಲ್ಲಿ ಹಿಂದೂಗಳ ಮೇಲೆ‌ ನಡೆಯುವ‌ ದೌರ್ಜನ್ಯ ಸಣ್ಣ ಸಮಸ್ಯೆಯಲ್ಲ. ಬಹಳ ದೊಡ್ಡ ಸಮಸ್ಯೆ, ಬೇರೆ ಬೇರೆ ದೇಶಗಳ‌ ಮೇಲೆ ಹಿಂದೂಗಳ ಪರಿಸ್ಥಿತಿ ಶೋಚನಿಯವಾಗಿದೆ. ಹೀಗಾಗಿ ನಾವೆಲ್ಲ ಹಿಂದೂಗಳು ಜಾತಿ-ಜಾತಿ‌ ಎನ್ನದೇ ಎಲ್ಲ ಹಿಂದೂಗಳೂ ಒಗ್ಗಟ್ಟಿನಿಂದ ಜೀವನ‌ ಸಾಗಿಸುವುದು ಅವಶ್ಯಕವಾಗಿದೆ. ಇಲ್ಲದಿದ್ದರೆ ಮುಂದೊಂದು ದಿನ ಜಿಹಾದಿ‌ ಮನಸ್ಥಿತಿ ಮತಾಂಧರಿಂದ ಅಪಾಯ ತಪ್ಪಿದ್ದಲ್ಲ” ಎಂದು ಕಿವಿಮಾತು ಹೇಳಿದರು.

“ಸೇಡಂನಲ್ಲಿ ಹಿಂದೂ ಯುವಕರ ಮೇಲೆ ಜಿಹಾದಿಗಳು ಹಲ್ಲೆ‌ ಮಾಡಿರುವುದು ಖಂಡನೀಯವಾಗಿದೆ. ಈವರೆಗೂ ಹಲ್ಲೆ ಮಾಡಿರುವ ಪ್ರಮುಖ ಆರೋಪಿಯನ್ನು ಬಂಧಿಸಿಲ್ಲ. ಸ್ಥಳೀಯ ಸಚಿವರು ಆರೋಪಿಗೆ ರಕ್ಷಣೆಗೆ ನಿಂತಂತೆ ಕಾಣುತ್ತಿದೆ. ಹಲ್ಲೆ ನಡೆಸಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಸಚಿವ ಎಂ ಬಿ ಪಾಟೀಲ್

ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ‌ ರಾಜಕುಮಾರ ಪಾಟೀಲ್, ವಿವಿಧ ಹಿಂದೂಪರ‌ ಸಂಘಟನೆಗಳ ಮುಖಂಡರಾದ ರಾಜು ನಿಲಂಗಿ, ಶಿವುಕುಮಾರ ಬೊಳಶೆಟ್ಟಿ, ಶಿವುಕುಮಾರ ಪಾಟೀಲ್ ತೆಲ್ಕೂರ್, ಶಿವಲಿಂಗರೆಡ್ಡಿ ಬೆನಕನಳ್ಳಿ, ಶಿವಾನಂದ ಸ್ವಾಮಿ, ಕಾಶಿನಾಥ ನಿಡುಗುಂದಾ, ಬಸವರಾಜ‌ ಕೊಸಗಿ, ಸಚಿನ್ ಮೀನಕೇರಿ, ಯಮುನಾ, ಶ್ರೀಮಂತ ಆವಂಟಿ ಸೇರಿದಂತೆ ಇತರರು ಇದ್ದರು.

ವರದಿ : ವಾಲೆಂಟಿಯರ್- ಸುನಿಲ್ ಕುಮಾರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...