ಕಲಬುರಗಿ | ಏಳು ತಿಂಗಳು ಕಳೆದರೂ ಬಾರದ ಬಿ.ಇಡಿ ಫಲಿತಾಂಶ : ವಿದ್ಯಾರ್ಥಿಗಳ ಪ್ರತಿಭಟನೆ

Date:

2024–25ನೇ ಸಾಲಿನ ಬಿ.ಇಡಿ ಅಂತಿಮ ವರ್ಷದ ನಾಲ್ಕನೇ ಸೆಮಿಸ್ಟರ್ ಫಲಿತಾಂಶಗಳನ್ನು ತಕ್ಷಣವೇ ಪ್ರಕಟಿಸಬೇಕು ಹಾಗೂ ಮೂಲ ಅಂಕಪಟ್ಟಿಗಳನ್ನು ನೀಡಬೇಕು ಎಂದು ಒತ್ತಾಯಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಇಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿ.ವಿ.ಯ ಕುಲಪತಿಗಳ ಕಚೇರಿ ಎದುರು ಶುಕ್ರವಾರ ಎರಡು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದರು.

ಈ ಸಂಬಂಧ ಪ್ರಭಾರ ಕುಲಪತಿ ಪ್ರೊ.ಗೂರು ಶ್ರೀರಾಮುಲು ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು. ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್ ಹಾಜರಿದ್ದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಿಮ ವರ್ಷದ ಬಿ.ಇಡಿ ನಾಲ್ಕನೇ ವರ್ಷದ ಸೆಮಿಸ್ಟರ್ ಪರೀಕ್ಷೆ ಬರೆದು ಏಳು ತಿಂಗಳು ಕಳೆದರೂ ಫಲಿತಾಂಶ ಪ್ರಕಟಿಸಿಲ್ಲ. ಇದರಿಂದಾಗಿ ಬಿ.ಇಡಿ ವೃತ್ತಿ ಶಿಕ್ಷಣ ಪಡೆದು ಶಿಕ್ಷಕರಾಗುವ ಆಕಾಂಕ್ಷೆಯನ್ನು ಹೊತ್ತಿರುವ ಪ್ರಶಿಕ್ಷಣಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ದೂರಿದರು.

1003911151

‘ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶ ಮತ್ತು ಅಂಕಪಟ್ಟಿಗಾಗಿ ಚಾತಕ ಪಕ್ಷಿಯಂತೆ ಕಾಯುವ ಸ್ಥಿತಿ ಬಂದಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ವೃತ್ತಿ ಪರೀಕ್ಷೆ ತೆಗೆದುಕೊಂಡರೂ 45 ದಿನಗಳ ಒಳಗೆ ಫಲಿತಾಂಶ ಪ್ರಕಟಿಸಬೇಕೆಂಬ ನಿಯಮವಿದೆ. ಆದರೆ, ಗುಲಬರ್ಗಾ ವಿಶ್ವವಿದ್ಯಾಲಯವು ಈ ನಿಯಮವನ್ನು ಕಡೆಗಣಿಸಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು 2024–25ನೇ ಸಾಲಿನ ನಾಲ್ಕನೇ ಮತ್ತು ಎರಡನೇ ಸೆಮಿಸ್ಟರ್ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

‘ಎಲ್ಲಾ ಸೆಮಿಸ್ಟರ್‌ಗಳ ಮೂಲ ಅಂಕಪಟ್ಟಿ ವಿತರಿಸಬೇಕು. ಘಟಿಕೋತ್ಸವ ಪ್ರಮಾಣಪತ್ರ ನೀಡಬೇಕು. ಅಕ್ರಮ ಅಂಕಪಟ್ಟಿ ನೀಡುವ ಮತ್ತು ಅಂಕಪಟ್ಟಿ ತಿದ್ದುವ ದಂಧೆಗೆ ಕಡಿವಾಣ ಹಾಕಬೇಕು. ಕರ್ತವ್ಯ ಲೋಪ ಎಸಗಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು, ಘಟಿಕೋತ್ಸವ ಪ್ರಮಾಣಪತ್ರವನ್ನೂ ಶೀಘ್ರ ನೀಡಬೇಕು’ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಬೆರಗು ಹುಟ್ಟಿಸುವ ಕಲ್ಯಾಣದ ಅನುಭವ ಮಂಟಪ : ಕಥೆಗಾರ ಮಹಾಂತೇಶ ನವಲಕಲ್

ಬಿ.ಇಡಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಸಂಚಾಲಕ ತೇಜಸ್ ಆರ್. ಇಬ್ರಾಹಿಂಪುರ, ವಿದ್ಯಾರ್ಥಿಗಳಾದ ಪ್ರಭಾಕರ ಚಿಂಚೋಳಿ, ಗಣೇಶ ಯಾದವ್, ಜೈಭೀಮ, ಪೂಜಾ ಡೊಮನಾಳ, ಸಚಿನ್, ನಾಗೇಶ್, ಯುವ ಹೋರಾಟಗಾರರಾದ ಜಗನ್ನಾಥ ಎಚ್.ಎಸ್, ಈಶ್ವರ ಕುಂಬಾರ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...