ಕಲಬುರಗಿ | ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಿ : ಸಚಿವ ಪ್ರಿಯಾಂಕ್‌ ಖರ್ಗೆ

Date:

ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೆರೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಸೂಚಿಸಿದರು.

ʼನೆರೆ ಹಾವಳಿಯಿಂದ ಯಾವುದೇ ರೀತಿಯ ಜನ, ಜಾನುವಾರು ಪ್ರಾಣ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯಿಂದ ಮನೆ ಕುಸಿದು ಬಿದ್ದಲ್ಲಿ, ಭಾಗಶಃ ಹಾನಿಯಾದಲ್ಲಿ ಎನ್‌ಡಿಆರ್‌ಎಫ್‌/ ಎಸ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ತಕ್ಷಣವೇ ಪರಿಹಾರ ಒದಗಿಸಬೇಕುʼ ಎಂದು ತಿಳಿಸಿದರು.

ʼನೋಡಲ್ ಅಧಿಕಾರಿಗಳು ನದಿ ದಂಡೆ ಪ್ರದೇಶದಲ್ಲಿ ನೆರೆ ಹಾವಳಿಗೆ ತುತ್ತಾಗುವ ಸಂಭಾವ್ಯ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರ ಎಲ್ಲ ರೀತಿಯ ಸುರಕ್ಷತೆಯ ಬಗ್ಗೆ ಖಾತ್ರಿಪಡಿಸಬೇಕು. ನದಿ, ಜಲಾಶಯ, ಕೆರೆ, ಕಟ್ಟೆಯತ್ತ ಬಟ್ಟೆ ಒಗೆಯಲು, ದನ-ಕರು ಮೇಯಿಸಲು ಹೋಗದಂತೆ ಜನತೆಗೆ ತಿಳಿವಳಿಕೆ ಮೂಡಿಸಬೇಕು. ವಿಶೇಷವಾಗಿ ಯುವ ಸಮುದಾಯ ಇಂತಹ ಸಂದರ್ಭದಲ್ಲಿ ಸೆಲ್ಫಿ, ನೀರಿನಲ್ಲಿ ಈಜುವಂತಹ ದುಸ್ಸಾಹಸಗಳಿಗೆ ಮುಂದಾಗುವುದನ್ನು ಪೊಲೀಸ್ ಇಲಾಖೆ ತಡೆಯಬೇಕುʼ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಗಾಣಗಾಪೂರ ಮತ್ತು ಘತ್ತರಗಾ ಮುಂತಾದ ಧಾರ್ಮಿಕ ಸ್ಥಳಗಳಿಗೆ ಬರುವ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಶೇಷ ಗಮನ ಹರಿಸಬೇಕು. ಸತತ ಮಳೆಯಾಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಕಾಟ ಹೆಚ್ಚಲಿದ್ದು, ಆರೋಗ್ಯ ಇಲಾಖೆ ಇದರ ನಿಯಂತ್ರಣಕ್ಕೆ ಮುಂದಾಗಬೇಕು. ನೀರಿನ ಲ್ಯಾಬ್ ಟೆಸ್ಟ್ ಹೆಚ್ಚಿಸಿ ಶುದ್ಧ ನೀರಿನ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಬೇಕು. ಬೆಳೆ ಹಾನಿ ಕುರಿತು ಕಂದಾಯ, ಕೃಷಿ, ತೋಟಗಾರಿಕೆ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಬೇಕುʼ ಎಂದು ನಿರ್ದೇಶಿಸಿದರು.

ಸಭೆಯಲ್ಲಿ ನೀಡಲಾದ ಈ ಸಲಹೆ ಸೂಚನೆಗಳನ್ನು ಅಧಿಕಾರಿ ವರ್ಗವು ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು. ಜನಜೀವನವನ್ನು ರಕ್ಷಿಸುವುದನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ : ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಸಭೆಯಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಹಾಗೂ ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...