ಕಲಬುರಗಿ | ಯುವ ಜನಾಂಗಕ್ಕೆ ಭಗತ್ ಸಿಂಗ್ ವಿಚಾರಧಾರೆ ಆದರ್ಶ : ಲಕ್ಷ್ಮಣ ಮಂಡಲಗೇರಾ

Date:

ಕ್ರಾಂತಿಕಾರಿ ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ವಿಚಾರಧಾರೆ ಪ್ರಸ್ತುತ ಸಮಾಜಕ್ಕೆ ಆದರ್ಶವಾಗಿವೆ ಎಂದು ದೇಶಪ್ರೇಮಿ ಯುವಾಂದೋಲನ ಸಂಘಟನೆ ವಿಭಾಗೀಯ ಸಂಚಾಲಕ ಲಕ್ಷ್ಮಣ್ ಮಂಡಲಗೇರಾ ತಿಳಿಸಿದರು.

ಕಲಬುರಗಿ ನಗರದ ಜಿಡಿಎ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ದೇಶಪ್ರೇಮಿ ಯುವಾಂದೋಲನ ಸಂಘಟನೆ ಆಯೋಜಿಸಿದ್ದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಹುತಾತ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜವಾಳ ಮಾತನಾಡಿ, ʼದೇಶಾದ್ಯಂತ ಭಗತ್‌ ಸಿಂಗ್‌, ರಾಜ್‌ಗುರು, ಸುಖದೇವ್ ಅವರ ಹುತಾತ್ಮ ದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಈ ಮೂವರು ಹೋರಾಟಗಾರರು ದೇಶದ ಸ್ವಾತಂತ್ರ್ಯ ಹಾಗೂ ಭವಿಷ್ಯದ ಪರಿಕಲ್ಪನೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದರುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 24 at 6.52.53 PM

ʼದೇಶದಲ್ಲಿ ಸಾಮಾಜಿಕ, ಆರ್ಥಿಕ ಅಸಮಾನತೆ ತಾಂಡವಾಡುತ್ತಿದೆ. ಹೀಗಾಗಿ ಬಡವರಿಗೆ ಸಮರ್ಪಕ ಶಿಕ್ಷಣ, ಉದ್ಯೋಗ ಸಿಗದೆ ಯುವಜನರು ಜೀವನ ನಡೆಸಲು ಹೋರಾಟ ನಡೆಸಬೇಕಾಗಿದೆ. ಇಂತಹ ಮಹಾತ್ಮರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಯುವ ಜನತೆ ಜಾತಿ, ಮತ ಬೇಧವಿಲ್ಲದೆ ದೇಶದ ಸುಸ್ಥಿರ ಭವಿಷ್ಯದ ಕಡೆಗೆ ಗಮನ ಹರಿಸಬೇಕುʼ ಎಂದರು.

ದೇಶಪ್ರೇಮಿ ಯುವಾಂದೋಲನ ಜಿಲ್ಲಾ ಸಂಚಾಲಕ ಮೈಲಾರಿ ದೊಡಮನಿ, ವಸತಿ ನಿಲಯದ ಮೇಲ್ವಿಚಾರಕ ನೀಲಕಂಟ ಸಿಂಗೆ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.

ಬೀದರ್‌ನಲ್ಲಿ ಭಗತ್‌ ಸಿಂಗ್ ಹುತಾತ್ಮ ದಿನಾಚರಣೆ :

ದೇಶಕ್ಕಾಗಿ ಹುತಾತ್ಮರಾದ ಕ್ರಾಂತಿಕಾರಿಗಳಾಗಿದ್ದ ಭಗತ್‌ ಸಿಂಗ್‌, ರಾಜಗುರು ಹಾಗೂ ಸುಖದೇವ್‌ ಅವರ 94ನೇ ಹುತಾತ್ಮ ದಿನ ಬೀದರ್ ನಗರದ ಭಗತ್‌ ಸಿಂಗ್‌ ವೃತ್ತದಲ್ಲಿ ಭಾನುವಾರ ಬೆಳಿಗ್ಗೆ ಆಚರಿಸಲಾಯಿತು.

WhatsApp Image 2025 03 24 at 6.58.52 PM

ಕರ್ನಾಟಕ ರಕ್ಷಣಾ ವೇದಿಕೆ, ಯುವ ಜನಾಂದೋಲನ ಸಂಘಟನೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇಶಪ್ರೇಮಿ ಯುವಾಂದೋಲನ ಸಂಘಟನೆಯ ಪ್ರಮುಖರಾದ ಓಂಪ್ರಕಾಶ ರೊಟ್ಟೆ, ಮುಹಮ್ಮದ್‌ ನಿಜಾಮುದ್ದೀನ್‌ ಹಾಗೂ ಕರವೇ ಜಿಲ್ಲಾಧ್ಯಕ್ಷ ಅರುಣ ಕೋಡಗೆ, ಜಿಲ್ಲಾ ಉಪಾಧ್ಯಕ್ಷ ಅಮರ್‌ ಗಾದಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಾಥ ಮಡಕೆ, ಜಿಲ್ಲಾ ಕಾರ್ಯಾಧ್ಯಕ್ಷ ಪ್ರಭು ಮದರಗಿಕರ್, ಶ್ರೀಮಂತ ಸಪಾಟೆ, ಸುನೀಲ, ರಾಜು ಗಂದಗೆ, ರಾಜು ಗುಬ್ಬೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...