ಕಲಬುರಗಿ | ಹೊರಗುತ್ತಿಗೆ ಕಾರ್ಮಿಕರಿಗೆ ಸೌಲಭ್ಯ ವಂಚನೆ ಖಂಡಿಸಿ ಭಾರತ್ ಏಕತಾ ಮಿಷನ್ ಪ್ರತಿಭಟನೆ

Date:

ಅಲ್ಟ್ರಾಟೆಕ್ (ರಾಜೇಶ್ರೀ ) ಸಿಮೆಂಟ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಪಿಎಫ್, ಇಎಸ್‌ಐ ಹಾಗೂ ಇತರ ಸೌಲಭ್ಯಗಳನ್ನು ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ ಭಾರತ್ ಏಕತಾ ಮಿಷನ್ ಜಿಲ್ಲಾ ಸಮಿತಿ ಪ್ರತಿಭಟನೆ ಮಾಡಿದ್ದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಸೂರ್ಯಕಾಂತ ನಿಂಬಳಕರ್ ಮಾತನಾಡಿ, ಸೇಡಂ ತಾಲೂಕಿನ ಮಳಖೇಡ  ಗ್ರಾಮದಲ್ಲಿನ ರಾಜೇಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಪಿಎಫ್, ಇಎಸ್ಐ ಮತ್ತು ಇತರ ಸೌಲಭ್ಯಗಳನ್ನು ನೀಡದೆ ವಂಚಿಸುತ್ತಿರುವುದು ಖಂಡನೀಯ.

ಸುಮಾರು 300ಜನರು 17ವರ್ಷಗಳಿಂದ ಸದರಿ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುವ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವವರಿಗೆ. ಸಮಯದಲ್ಲಿ ಇತಿ ಮಿತಿ ಇಲ್ಲದೆ ಕಾಲಿಂಗ್ ಡ್ಯೂಟಿ ಪದ್ದತಿಯಿಂದ ದುಡಿಸಿಕೊಳ್ಳುತ್ತಿದ್ದಾರೆ. ಇದರಿಂದ ಕಾರ್ಮಿಕರಿಗೆ ಆರೋಗ್ಯದಲ್ಲಿ ಉಸಿರಾಟ ತೋಂದರೆ, ನಿದ್ರಾಹಿನತೆಯಿಂದ ಬಳಲುತ್ತಿದ್ದಾರೆ. ಅಲ್ಲದೇ ಕಾರ್ಮಿಕ ಕಾಯ್ದೆಯಂತೆ ಸದರಿ ಕಾರ್ಖಾನೆಯಲ್ಲಿ ಫ್ಯಾಕರ್ಸ್ ವಿಭಾಗಲ್ಲಿ ಸೇವೆಗೆ ಹಾಜರಾಗುವ ಮುನ್ನು ಸೇವೆಯಿಂದ ಹೊರಗಡೆ ವಾಪಸ ಮುನ್ನ ಸಮಯ ನೀಗದಿ ಪಡಿಸುವುದಕ್ಕಾಗಿ ಪಂಜಿಕರಣ ಇಲ್ಲದಿರುವ ಕಾರಣ ಕಾರ್ಮಿಕರಿಗೆ ಬೇಕಾ ಬಿಟ್ಟಿಯಾಗಿ ದುಡಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ಯಾಕರ್ಸ್ ಮತ್ತು ಲೋಡರ್ಸ್ ವಿಭಾಗದಲ್ಲಿ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೀಡಾದಾಗ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಕಾರ್ಮಿಕರಿಗೆ ಫ್ಯಾಕ್ಸಿಯಲ್ಲಿ ಆಸ್ಪತ್ರೆಗೆ ದಾಖಲಿಸದೇ ಹೊರಗಡೆ ಚಿಕತ್ಸೆ ಪಡೆಯುಲು ತಿಳಿಸುತ್ತಾರೆ.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದಿಲ್ಲ. ಸಧ್ಯ (ಬೋರ್ಡ್ ಆಫ್ ವೆಜೆಸ್) ನಿಯಮದಂತೆ ಪ್ರತಿ ಕಾರ್ಮಿಕರಿಗೆ 1,565 ರೂಪಾಯಿಗಳು ಪ್ರತಿ ದಿನಕ್ಕೆ ನೀಡಬೇಕು. ಆದರೆ, ಕೇವಲ 800ರೂ. ಗಳು ಮಾತ್ರ ನೀಡಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದರಿಂದ ಸದರಿ ಕಾರ್ಖಾನೆಯಲ್ಲಿ ಪ್ಯಾಕರ್ಸ್ ಮತ್ತು ಲೋಡರ್ಸ್ ವಿಭಾಗದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಅನ್ಯಾಯವಾಗಿರುತ್ತದೆ. ಸದರಿ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ಅನ್ಯಾಯ ನಡೆಯುತ್ತಿದ್ದು, ರಾಜ್ಯ ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಈ ಅನ್ಯಾಯ, ಅವವ್ಯಹಾರ ತಡೆಯಲು ಮುಂದಾಗುತ್ತಿಲ್ಲ.

ಆದ್ದರಿಂದ, ದಯಾಮಾಡಿ ಕಾರ್ಮಿಕರ ಹಿತಾಶಕ್ತಿ ಕಾಪಾಡಲು ಅಸಂಘಟಿತ ಕಾರ್ಮಿಕಾರದ ಪ್ಯಾಕರ್ಸ್ ಮತ್ತು ಲೋಡರ್ಸ್ ವಿಭಾಗದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಮತ್ತು ಸೌಲಭ್ಯವನ್ನು ಕಾರ್ಮಿಕ ಇಲಾಖೆ ಕಾಯ್ದೆಯಂತೆ ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಕಾರ್ಮಿಕ ಅಧಿಕಾರಿಗಳು ಮತ್ತು ಫ್ಯಾಕ್ಟರೀಯ ಕಾರ್ಮಿಕರ ಕಲ್ಯಾಣ ಅಧಿಕಾರಿಗಳ ತಮ್ಮ ಅಧ್ಯಕ್ಷತೆಯಲ್ಲಿ ಜಂಟಿ ಸಭೆಯನ್ನು ನಡೆಸಲು ಜಿಲ್ಲಾ ಭೀಮ ಆರ್ಮಿ ಒತ್ತಾಯಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸೂರ್ಯಕಾಂತ ಜಿಡಾಗ, ಸೋಮಶೇಖರ್ ಬಂಗರಗಿ, ಸೂರ್ಯಕಾಂತ ನಿಂಬಳಕರ, ಮೌಲಾ ಮುಲ್ಲಾ, ಸಿಪಿಐ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

ಬೇಡಿಕೆಗಳು

1) (ಬೋರ್ಡ್ ಆಫ್ ವಜೆಸ್ ) ಪದ್ದತಿಯಂತೆ ಪ್ರತಿದಿನ 1565 ರೂ. ವೇತನ ಪಾವತಿ ಮಾಡಬೇಕು.

2) ಶಿಪ್‌ನಂತೆ ದಿನದಲ್ಲಿ 3 ಪಾಳಿಗಳಲ್ಲಿ ದುಡಿಸಿಕೊಳ್ಳಲು ಕ್ರಮವಹಿಸುವುದು.

3) ಕಾರ್ಮಿಕರು ತಮ್ಮ ವೇತನಕ್ಕಾಗಿ ಒತ್ತಾಯಿಸಿ ನಡೆಸಿರುವ ಹೋರಾಟದಲ್ಲಿ ಪಲ್ಗೊಂಡ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದವರನ್ನು ಪುನಃ ನೇಮಿಸಕೊಳ್ಳಬೇಕು.

4) ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಆರೋಗ್ಯ ಸರಿಯಿಲ್ಲದಾಗ ಅಥವಾ ಅಪಘಾತವಾದಾಗ ಆಸ್ಪತ್ರೆಯಲ್ಲಿ ಪೂರ್ಣ ಬಿಲ್ ಪಾವತಿಸುವ ಕ್ರಮ ಜರುಗಿಸಬೇಕು.‌

5) ಪ್ರತಿ ತಿಂಗಳು ವೇತನ ಮತ್ತು ಹಾಜರಾತಿ ಚೀಟಿ ನೀಡುವುದು.

6) ಪಿಎಫ್‌ ಮತ್ತು ಇಎಸ್‌ಐ ಕಡ್ಡಾಯವಾಗಿ ಜಾರಿ ಮಾಡಬೇಕು.

7) ಬೊನಸ್ ಪ್ರತಿವರ್ಷ ನೀಡಬೇಕು.

8) ರಜೆ ದಿನದಲ್ಲಿ ದುಡಿದ ಕಾರ್ಮಿಕರಿಗೆ ಡಬಲ್ ವೇತನ ನಿಯಮದಂತೆ ನೀಡಬೇಕು.

9) ಪ್ಯಾಕಿಂಗ್ ಮತ್ತು ಲೋಡಿಂಗ್ ವಿಭಾಗದಲ್ಲಿ ನಿಯಮದಂತೆ ಒಂದು ಬೆಲ್‌ಗೆ 8 ಜನರನ್ನು ಮಾತ್ರ ನೇಮಿಸಬೇಕು.

10) ಸದರಿ ದುಡಿಯುವ ಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು ಅಥವಾ ಅದರ ಬದಲಾಗಿ ಮನೆಯ ಬಾಡಿಗೆ ನೀಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...