ಕಲಬುರಗಿ | ಸೌಹಾರ್ದ ಕರ್ನಾಟಕಕ್ಕಾಗಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವʼ ಕಾರ್ಯಕ್ರಮ

Date:

ರಾಜ್ಯದ 40ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ಜನವರಿ 17, 18 ಮತ್ತು 19ರಂದು ಮೂರು ದಿನಗಳ ಕಾಲ ಭಾರತದ ಬಹುತ್ವ ಸಂಸ್ಕೃತಿ ಪ್ರತಿಪಾದನೆ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ-2025ರ ಕಲಬುರಗಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವದ ಸಂಚಾಲಕಿ ಮೀನಾಕ್ಷಿ ಬಾಳಿ ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಜ. 17 ರಂದು ಬೆಳಗ್ಗೆ 10.30ಕ್ಕೆ ನಗರದ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಾತೋಶ್ರೀ ದ್ರಾಕ್ಷಾಯಿಣಿ ಶರಣಬಸಪ್ಪ ಅಪ್ಪ ಅವರು ವಾಹನ ಜಾಥಾಕ್ಕೇ ಚಾಲನೆ ನೀಡಲಿದ್ದಾರೆ. ಈ ವೇಳೆ ನಿವೃತ್ತ ಕುಲಪತಿ ಪ್ರೊ.ಸಬೀಹಾ ಭೂಮಿಗೌಡ ಮತ್ತಿತರರು ಉಪಸ್ಥಿತರಿರಲಿದ್ದಾರೆ. ಶರಣಬಸವೇಶ್ವರ ದೇವಸ್ಥಾನದಿಂದ ಆರಂಭವಾಗುವ ಜಾಥಾವು ಸೆಂಟ್ ಮೇರಿ ಚರ್ಚ್ ಮಾರ್ಗವಾಗಿ ಸಾಗಿ ಸರ್ದಾರ ವಲ್ಲಭಾಯಿ ಪಟೇಲ್ ಮಾರ್ಗದಿಂದ ಜಗತ್ ವೃತದಿಂದ ಹಾಯ್ದು ಖ್ವಾಜಾ ಬಂದೇನವಾಜ್ ದರ್ಗಾದಲ್ಲಿ ಮುಕ್ತಾಯವಾಗಲಿದೆ.

ಜ.18 ರಂದು ಬೆ.10 ಗಂಟೆಯಿಂದ ನಗರದ ಪಂಡಿತ್ ರಂಗಮಂದರಿರದಲ್ಲಿ ‘ಭಾವೈಕ್ಯದ ಸಮನ್ವಯ ಗಾಯನ ಗಮಲು’ ಘೋಷಣೆಯಡಿ ದಿನವಿಡೀ ತತ್ವಪದ, ಸೂಫಿಪದ, ವಚನ ಗಾಯನ ಮತ್ತು ಖವ್ವಾಲಿ ಕಾರ್ಯಕ್ರಮಗಳು ನಡೆಯಲಿವೆ.
ಕೊನೆ ಜ.19 ರಂದು ಬೆ.10 ರಿಂದ ಕನ್ನಡ ಭವನದಿಂದ ಮೆರವಣಿಗೆ ನಡೆಸಿ ಜಗತ್ ವೃತದಲ್ಲಿ ಸೌಹಾರ್ದತೆಯ ಉತ್ಸವದ ಬಹಿರಂಗ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಬೆಂಗಳೂರು, ಮಂಗಳೂರು, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲಬುರಗಿಯಲ್ಲಿ ಇತ್ತೀಚೆಗೆ ಕೋಮು ದಳ್ಳುರಿ ಹೆಚ್ಚಾಗುತ್ತಿದೆ, ನವಯುವಕರಲ್ಲಿ ಕೋಮು ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಕೆಲವರು ಭಾರತೀಯ ಸಂಸ್ಕೃತಿ ಎಂದರೆ ಒಂದೇ ಜನಾಂಗದ ಸಂಸ್ಕೃತಿ ಎಂದು ಬಿಂಬಿಸಲು ಹೊರಟಿದ್ದಾರೆ, ಭಾವೈಕ್ಯತೆಯ ಭಾರತದಲ್ಲಿ ಇಂತಹವುಗಳಿಗೆ ನೆಲೆ ಇಲ್ಲ. ಇದು ಸೂಫಿ, ಸಂತರ ನಾಡಾಗಿದೆ. ನಮ್ಮ ದೇಶ ಬಹುತ್ವ ಸಂಸ್ಕೃತಿಯಿಂದ ಕೂಡಿದೆ, ಹಾಗಾಗಿ ನಾವು ಕಾರ್ಯಕ್ರಮಕ್ಕೆ ಬಹುತ್ವ ಸಂಸ್ಕೃತಿ ಭಾರತೋತ್ಸವ ಎಂದೇ ಹೆಸರಿಟ್ಟಿದ್ದೇವೆʼ ಎಂದರು.

ಈ ಸಮಾವೇಶದಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿಗಳು, ಗದಗದ ಮನಿಪ್ರ ಸಿದ್ದರಾಮ ಶಿವಯೋಗಿಗಳು, ಮಘಚ ಬಸವಲಿಂಗ ಪಟ್ಟದ್ದೇವರು, ಭಾಲ್ಕಿ, ಇಲಕಲ್ ಗುರುಮಹಾಂತ ಸ್ವಾಮಿಗಳು, ಮೈಸೂರಿನ ಜ್ಞಾನಪ್ರಕಾಶ ಸ್ವಾಮಿಗಳು, ಬೈಲೂರು ನಿಜಗುಣಾನಂದ ಸ್ವಾಮಿಗಳು, ಮಾತೆ ಗಂಗಾoಬಿಕೆ ಪಾಟೀಲ, ಖಾದ್ರಿ ಮುಸ್ತಾಫ್, ಮಳಖೇಡ ದರ್ಗಾ ಫಾದರ್ ಲೋಬೋ, ಸೇಂಟ್ ಮೇರಿ ಚರ್ಚ್, ಗುರುಮೀತ್ ಸಿಂಗ್ , ಪೂಜ್ಯ ಜ್ಞಾನಜ್ಯೋತಿ ಭಂತೇಜಿ, ಚೆನ್ನಬಸವ ಸ್ವಾಮಿಜಿ ಸೇರಿದಂತೆ ಮುಂತಾದವರು ಭಾಗವಹಿಸುವುದಲ್ಲದೆ ನೂರಾರು ಚಿಂತಕರು ಈ ಉತ್ಸವಕ್ಕೆ ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುರೇಶ್ ಹಾದಿಮನಿ, ಮಹಮ್ಮದ್ ಅಫಜಲ್, ಕಾಶಿನಾಥ್ ಅಂಬಲಗೆ, ಪ್ರಭು ಖಾನಾಪುರೆ, ಧನರಾಜ ತಂಬೋಳೆ, ಮಹಾಂತೇಶ್ ಕೌಲಗಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...