ಕಲಬುರಗಿ | ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ಬೇರೆಡೆ ಬಳಕೆಯಾದರೆ ಬಿಜೆಪಿ ದಾಖಲೆ ನೀಡಲಿ : ಪ್ರಿಯಾಂಕ್‌ ಖರ್ಗೆ

Date:

ನಮ್ಮ ಸರ್ಕಾರ ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನ ನಿಯಮ ಬದ್ಧವಾಗಿಯೇ ಬಳಕೆ ಮಾಡುತ್ತಿದೆ. ಬೇರೆಡೆ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ. ಆಗ ಅದರ ಬಗ್ಗೆ ಕ್ರಮ‌ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಮಾಜಿ ಪ್ರಧಾನಿ ಇಂದಿರಾಗಾಂಧಿ ಮಾಡಿದ ಕೆಲಸದಲ್ಲಿ ಅರ್ಧದಷ್ಟಾದರೂ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿ ತೋರಿಸಲಿ. ಇಂದಿರಾ ಗಾಂಧಿ ಬ್ಯಾಂಕ್‌ಗಳ ರಾಷ್ಟ್ರೀಕರಣ, ಭೂಮಿ ಉಳುಮೆಗೆ ತಂದ ಸುಧಾರಣೆ ಹಾಗೂ ಪಾಕಿಸ್ತಾನ ಇಬ್ಬಾಗ ಮಾಡಿದ್ದು ಸೇರಿದಂತೆ ಹಲವಾರು‌‌ ಕ್ರಾಂತಿಕಾರಿ ಬದಲಾವಣೆ ಮಾಡಿದ್ದಾರೆ. ಇಂದಿರಾ ಗಾಂಧಿ‌ ಅವರು 44 ಬಾರಿ ಪತ್ರಿಕಾಗೋಷ್ಠಿ ಮಾಡಿದ್ದಾರೆ, ಇವರೇನು ಮಾಡಿದ್ದಾರೆʼ ಎಂದು ಪ್ರಶ್ನಿಸಿದರು.

ಕೇಂದ್ರಿಯ ವಿವಿಗಳು ಆರ್‌ಎಸ್‌ಎಸ್ ಶಾಖೆಗಳಾಗಿವೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೇಂದ್ರಿಯ ವಿಶ್ವವಿದ್ಯಾಲಯಗಳು ಆರೆಸ್ಸೆಸ್‌ ಶಾಖೆಗಳಾಂತಾಗಿವೆ ಎಂದು ಆರೋಪಿಸಿದ ಖರ್ಗೆ, ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ಲಾಿಖೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಸಲು ನಮಗೆ ಅನುಮತಿ ನಿರಾಕರಿಸಲಾಗಿದೆ. ಮಲ್ಲಿಕಾರ್ಜು ಖರ್ಗೆ ಅವರು ಈ ಭಾಗಕ್ಕೆ ಅನುಕೂಲ ಆಗಲಿ ಎಂದು ಜಿಲ್ಲೆಗೆ ಕೇಂದ್ರೀಯ ವಿವಿ ತಂದರು. ಆದರೆ, ಅದು ಆರ್‌ಎಸ್‌ಎಸ್ ಶಾಖೆ ಮಾಡಲು ಅನುಕೂಲ ಮಾಡಿಕೊಟ್ಟಂತಾಗಿದೆʼ ಎಂದು ಟೀಕಿಸಿದರು.

ಮೋದಿ ಕೊಡುಗೆ ನೀಡಿ ಮನ್ ಕಿ ಬಾತ್ ಮಾತಾಡಲಿ:

ʼಪ್ರಧಾನಿ ಮೋದಿ ಅವರ ʼಮನ್ ಕಿ ಬಾತ್‌’ ಕೇಳಿ ಕೇಳಿ ಸಾಕಾಗಿದೆ. ಏನಾದರೂ ಕೊಡುಗೆ ಕೊಟ್ಟು ಮೋದಿ ಮಾತನಾಡಲಿ. ಈ ಹಿಂದೆ ಕಲಬುರಗಿ ರೊಟ್ಟಿ ಬಗ್ಗೆ ಮಾತನಾಡಿದ್ದಾರೆ. ಮುಂದಿನ ದಿನ ಮತ್ತೊಂದು‌ ವಿಷಯದ‌ ಬಗ್ಗೆ ಮಾತನಾಡುತ್ತಾರೆ. ಕೊಡುಗೆ ನೀಡಿ ಆಮೇಲೆ ಮಾತನಾಡಲಿʼ ಎಂದು ಕುಟುಕಿದರು.

ಬಾಡಿಗೆ ಭಾಷಣಕಾರರ‌ ಬಗ್ಗೆ ಏನು ಹೇಳಲಿ?:

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಯೋಗ್ಯ ಪದ ಬಳಸಿದ್ದಕ್ಕೆ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದಾಖಲಾದ ಎಫ್‌ಐಆರ್‌ಅನ್ನು ಸುಪ್ರೀಂ ಕೊರ್ಟ್ ರದ್ದು ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಾಡಿಗೆ ಭಾಷಣಕಾರರ ಬಗ್ಗೆಯಾಗಲಿ, ಅವರ ಬಾಸ್ ಗಳ ಬಗ್ಗೆಯಾಗಲಿ ನಾನೇನು ಉತ್ತರಿಸಲಿ. ನಾನು ಯಾವುದಾದರೂ ಎಫ್‌ಐಆರ್ ಹಾಕಿದ್ದರೆ ತೋರಿಸಲಿ. ಯಾರೋ ಒಬ್ಬರು ಅಲ್ಲಿನ ಸ್ಥಳೀಯ ನಾಯಕರು ಹಾಕಿದ್ದರೆ, ಅದಕ್ಕೆ‌ ನಾನೇನು ಹೇಳಲಿ? ಎಂದು ಪ್ರತಿಕ್ರಿಯಿಸಿದರು.

ಯೂರಿಯಾ ಸರಬರಾಜಿಗೆ ಕೇಂದ್ರಕ್ಕೆ ಮನವಿ :

ʼಯೂರಿಯಾ ಕೊರತೆ ಅಷ್ಟೊಂದು ಕಾಣಿಸುತ್ತಿಲ್ಲ. ಕಳೆದ ಒಂದೂವರೆ ತಿಂಗಳ ಹಿಂದೆ ಕೇಂದ್ರ ಕೃಷಿ‌ ಸಚಿವರನ್ನು ಭೇಟಿ ಮಾಡಿ‌ದ ಕೃಷಿ‌ ಸಚಿವ ಚೆಲುವರಾಯಸ್ವಾಮಿ‌ ಯೂರಿಯಾ ಗೊಬ್ಬರ ಸರಬರಾಜಿಗೆ ಆದ್ಯತೆ ನೀಡುವಂತೆ ಮನವಿ‌ ಸಲ್ಲಿಸಿದ್ದರು. ಈ ಸಲ ನಮಗೆ ಅಗತ್ಯವಿರುವ ಗೊಬ್ಬರ ಸರಬರಾಜು ಮಾಡಿಲ್ಲ. ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್‌ ಅನ್ನು‌ ಬೇಡಿಕೆಯಲ್ಲಿ ಕಡಿತಗೊಳಿಸಿದ ಕೇಂದ್ರ ಸರಕಾರ ಉಳಿದ ರಸಗೊಬ್ಬರ ಸರಬರಾಜು‌ ಮಾಡಿದೆ. ಈ ಹಿಂದೆ ರಾಜ್ಯದ ಓಪಿನಿಂಗ್ ಬ್ಯಾಲೆನ್ಸ್ ನ್ನು‌ ಪರಿಗಣಿಸುತ್ತಿರಲಿಲ್ಲʼ ಎಂದರು.

ಇದನ್ನೂ ಓದಿ : ಆನೆ ದಾಳಿಗೆ ಇಬ್ಬರ ಸಾವು | ಉನ್ನತಾಧಿಕಾರಿಗಳೊಂದಿಗೆ ಸಭೆ, ಆನೆ ಸೆರೆ ಹಿಡಿಯಲು ಸಚಿವ ಈಶ್ವರ ಖಂಡ್ರೆ ಸೂಚನೆ

ʼಕಲಬುರಗಿ ಜಿಲ್ಲೆಯಲ್ಲಿ ಈ ಸಲ ಶೇ100 ರಷ್ಟು ಬಿತ್ತನೆಯಾಗಿದೆ. 500 ಟನ್ ಗೊಬ್ಬರ ಬೇಡಿಕೆ ಇದ್ದು, 200 ಟನ್ ಗೊಬ್ಬರವನ್ನು ಬಾಗಲಕೋಟೆಯಿಂದ ತರಿಸಲಾಗುತ್ತಿದೆ. ಉಳಿದ 300 ಟನ್ ರಸಗೊಬ್ಬರವನ್ನು ಆದಷ್ಟು ಬೇಗ ತರಿಸಲಾಗುವುದು. ರಸಗೊಬ್ಬರ ವಿಚಾರದಲ್ಲಿ ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಗರು ದಿಲ್ಲಿಯಲ್ಲಿ ಪ್ರತಿಭಟನೆ ಮಾಡಿ ರಾಜ್ಯಕ್ಕೆ ಗೊಬ್ಬರ ತರಿಸಿಕೊಡಲಿʼ ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...