ಕಲಬುರಗಿ | ತಹಶೀಲ್ದಾರ್‌ ಕಚೇರಿಯಲ್ಲಿ ಲಂಚ ಆರೋಪ; ಆದರ್ಶ ಗ್ರಾಮ ಸಮಿತಿ ಖಂಡನೆ

Date:

ತಹಶೀಲ್ದಾರ್‌ ಕಚೇರಿಯ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯ ಮಾಡಲು ಕೆಲವು ಅಧಿಕಾರಿಗಳು ಲಂಚಪಡೆಯುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿ(ಯಾಳವಾರ) ಕಾರ್ಯಕರ್ತರು ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

“ಜೇವರ್ಗಿ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭಷ್ಟಾಚಾರವನ್ನು ತಡೆಯಬೇಕು. ಅಲ್ಲಿನ ಅಧಿಕಾರಿಗಳು ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಮನಬಂದಂತೆ ಲಂಚ ಪಡೆಯುತ್ತಿದ್ದು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ವಿಧವಾ ವೇತನ, ಸಂಧ್ಯಾ ಸುರಕ್ಷಾ, ಜಾತಿ ಮತ್ತು ಆದಾಯ, ರಿಜಿಸ್ಟರ್, ಇಸಿ, ಸರ್ವೇ ಕಾರ್ಯ ಸೇರಿದಂತೆ ಹಲವಾರು ಕಚೇರಿ ಕೆಲಸಗಳನ್ನು ಮಾಡಿಕೊಡಲು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದು, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭ್ರಷ್ಟಾಚಾರ ಕುರಿತು ಪ್ರಶ್ನಿಸಿದರೆ ಅಂತಹವರ ಕೆಲಸಗಳನ್ನು ಮಾಡದೆ, ನಾಳೆ ಬಾ, ನಾಡಿದ್ದು ಬಾ ಎಂದು ಕಾಲಹರಣ ಮಾಡುತ್ತಿದ್ದು, ರೈತರಿಗೆ ವಂಚನೆ ಮಾಡುತ್ತಿರುವುದು ನಮ್ಮ ಸಮಿತಿಯ ಗಮನಕ್ಕೆ ತಿಳಿದುಬಂದಿದೆ. ಹಾಗಾಗಿ ನಿಮಗೆ ಮನವಿ ಮಾಡುತ್ತಿದ್ದೇವೆ. ತಾವು ಮಧ್ಯ ಪ್ರವೇಶಿಸಬೇಕು” ಎಂದು ತಹಶೀಲ್ದಾರರಲ್ಲಿ ವಿನಂತಿಸಿದ್ದಾರೆ.

“ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಎಲ್ಲ ಅವ್ಯವಹಾರ, ಭ್ರಷ್ಟಾಚಾರ, ಲಂಚಾವತಾರವನ್ನು ತಡೆಹಿಡಿದು ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಕಾಲ ಮಿತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲು ಅಧಿಕಾರಿಗಳಿಗೆ ತಿಳಿಹೇಳುವುದರ ಮುಖಾಂತರ ತಾಲೂಕಿನ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಈ ಮೂಲಕ ಸಾರ್ವಜನಿಕರಿಗೆ ನ್ಯಾಯ ಕೊಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

“ಒಂದುವೇಳೆ ಭ್ರಷ್ಟಾಚಾರ, ಲಂಚಾವತಾರ ಮತ್ತೆ ಮುಂದುವರೆದಿದ್ದೇ ಆದಲ್ಲಿ ನಾವು ಇದನ್ನು ಸರ್ಕಾರ ಮತ್ತು ಲೋಕಾಯುಕ್ತ ಇಲಾಖೆಯ ಗಮನಕ್ಕೆ ತಂದು ದೂರು ನೀಡುವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಆದರ್ಶ ಗ್ರಾಮ ಸಮಿತಿಯ ಅಧ್ಯಕ್ಷ ಇಬ್ರಾಹಿಂಪಟೇಲ ಸೇರಿದಂತೆ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...