ಕಲಬುರಗಿ | ಡ್ರಾಪ್‌ ಕೊಟ್ಟ ಯುವಕನ ಮೇಲೆ ಹಲ್ಲೆ ಪ್ರಕರಣ : ಸೌಹಾರ್ದ ಕರ್ನಾಟಕ ಖಂಡನೆ

Date:

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಮಹಿಳೆಯನ್ನು ಅದೇ ಆಸ್ಪತ್ರೆಯ ಸಿಬ್ಬಂದಿ ಬೈಲಪ್ಪ ಎಂಬುವವರು ಅವಳ ಕೋರಿಕೆಯ ಮೇರೆಗೆ ಮನೆಗೆ ಡ್ರಾಪ್ ಮಾಡಲು ತೆರಳುವಾಗ ಹದಿನೈದರಿಂದ ಇಪ್ಪತ್ತು ಜನರಿರುವ ಮುಸ್ಲಿಂ ತಂಡವು ಬೈಲಪ್ಪ ಅವರ ಮೇಲೆ ಹಲ್ಲೆ ಮಾಡಿರುವುದನ್ನು ಸೌಹಾರ್ದ ಕರ್ನಾಟಕ ಸಂಘಟನೆಯ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ʼಮುಸ್ಲಿಂ ಅಲ್ಲದ ವ್ಯಕ್ತಿಯು ತಮ್ಮ ಸಮುದಾಯದ ಮುಸ್ಲಿಂ ಯುವತಿಯನ್ನು ಯಾಕೆ ಡ್ರಾಪ್ ಮಾಡುತ್ತಿರುವಿ ಎಂಬುದು ಹಲ್ಲೆಗೈದ ಮುಸ್ಲಿಂ ಗಂಡಸರ ಪ್ರಶ್ನೆಯಾಗಿದೆ. ಮತೀಯ ಭಾವನೆಯ ಕಾರಣದಿಂದ ಹಲ್ಲೆ ನಡೆದಿರುವುದು ತೀವ್ರ ಖಂಡನಾರ್ಹವಾದುದ್ದಾಗಿದೆʼ ಎಂದು ಸಂಘಟನೆಯ ಡಾ.ಮೀನಾಕ್ಷಿ ಬಾಳಿ, ಡಾ.ಪ್ರಭು ಖಾನಾಪುರೆ, ಆರ್ ಕೆ ಹುಡಗಿ,
ಮಾರುತಿ ಗೋಖಲೆ, ದತ್ತಾತ್ರೇಯ ಇಕ್ಕಳಕಿ ಹಾಗೂ ಪ್ರಮೋದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಕೋಮು ಭಾವನೆ ಎಂಬುದೇ ಅಪಾಯಕಾರಿಯಾದದ್ದು. ಬಹುಸಂಖ್ಯಾತ ಸಮುದಾಯದ ಕೋಮುವಾದ ಮತ್ತು ಅಲ್ಪಸಂಖ್ಯಾತ ಸಮುದಾಯದ ಕೋಮುವಾದ ಎರಡರಿಂದಲೂ ಭಾವೈಕ್ಯತೆಗೆ ಸೌಹಾರ್ದತೆಗೆ ಧಕ್ಕೆಯಾಗುವುದು. ಈಗಾಗಲೇ ಕರಾವಳಿ ಪ್ರದೇಶದಲ್ಲಿ ಹೋಯ್ಕೈ ಮಾದರಿಯಲ್ಲಿ ಎರಡೂ ಸಮುದಾಯದ ಕೋಮುವಾದಿಗಳು ದ್ವೇಷವನ್ನು ಹರಡಿಸುತ್ತಿದ್ದಾರೆ. ಇಂತಹ ವಿಷಮಯ ಪ್ರವೃತ್ತಿಯಿಂದ ಸಮಾಜದ ಸ್ವಾಸ್ಥ್ಯಕ್ಕೆ ಅಪಾಯ ಉಂಟಾಗುವುದು. ಎಲ್ಲ ತೆರನ ಅಭಿವೃದ್ಧಿಗೆ ಇದು ಮಾರಕವಾಗಿ ಪರಿಣಮಿಸುವುದುʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಲ್ಯಾಣ ಕರ್ನಾಟಕವು ಭಾವೈಕ್ಯ ಪರಂಪರೆಯ ನಾಡಾಗಿದೆ. ರಾಜ್ಯದಲ್ಲಿಯೇ ಕೂಡುಸಂಸ್ಕೃತಿಗೆ ಹೆಸರುವಾಸಿಯಾಗಿದೆ. ಬಹುಸಂಖ್ಯಾತ ಕೋಮುವಾದದ ಪ್ರಚೋದನೆಯು ಅಲ್ಪಸಂಖ್ಯಾತ ಕೋಮುವಾದಿ ಚಟುವಟಿಕೆಗೆ ಕಾರಣವಾಗುತ್ತಿದೆ. ಆದರೆ ಕಲ್ಯಾಣ ಕರ್ನಾಟಕವು ಈವರೆಗೆ ಎಲ್ಲ ಜನಸಮುದಾಯವು ಸೌಹಾರ್ದತೆಯಿಂದ ಬಾಳು ಸವೆಸಿದ್ದಾರೆ. ಸೂಫಿ-ಸಂತ ಪರಂಪರೆಯ ಬಹುಸಾಂಸ್ಕೃತಿಕ ಮೌಲ್ಯಗಳು ಈ ನೆಲದ ಗಟ್ಟಿ ಬೇರುಗಳು. ಚರಿತ್ರೆಯು ಹೀಗಿದ್ದಾಗ ಕೆಲ ಮತೀಯವಾದಿ ಮನಸುಗಳು ಇಂತಹ ಕುಕೃತ್ಯ ನಡೆಸುವುದನ್ನು ತಡೆಗಟ್ಟಲು ಜಿಲ್ಲಾ ಆಡಳಿತವು ಕೂಡಲೇ ಕ್ರಮ ವಹಿಸಬೇಕು. ಹಲ್ಲೆ ಮಾಡಿದ ಎಲ್ಲರನ್ನೂ ಬಂಧಿಸಿ ಶಿಕ್ಷೆಗೊಳಪಡಿಸುವಂತಾಗಬೇಕುಮತ್ತು ಇಂತಹ ಪ್ರಕರಣಗಳು ಮರುಕಳಿಸದಂತೆ ದೃಢ ಹೆಜ್ಜೆ ಇಡಬೇಕುʼ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕಲಬುರಗಿ | ಅನೈತಿಕ ಪೊಲೀಸ್‌ ಗಿರಿ ಮೆರೆದ ಆರು ಜನ ಯುವಕರ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...