ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣಕುಮಾರ್ ವಿರುದ್ಧ ಪ್ರಕಣ ದಾಖಲಾಗಿದೆ.
ಪಿಡಿಒ ಪ್ರವೀಣಕುಮಾರ್, ಆಗಸ್ಟ್ 21ರಂದು ತಮ್ಮ ಮೊಬೈಲ್ ವಾಟ್ಸಪ್ ಸ್ಟೇಟಸ್ನಲ್ಲಿ ʼಸಿದ್ರಾಮುಲ್ಲಾಖಾನ್ʼ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡಿದ್ದನ್ನು ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಗಮನಿಸಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಗ್ರಾಮದ ಮುಖಂಡರಾದ ಮಹಾಲಿಂಗಪ್ಪ ಹರವಾಳ, ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣ ಪೂಜಾರಿ ಸೇರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಕಲಬುರಗಿ | ಲಂಚ ಪಡೆದ ಕಲಬುರಗಿ ನಗರದ ದಕ್ಷಿಣ ವಿಭಾಗದ ಎಸಿಪಿ ಸೇರಿ ಐವರು ಲೋಕಾಯುಕ್ತ ಬಲೆಗೆ





