ಕಲಬುರಗಿ | ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಬಸವ ಪಂಚಮಿ ಆಚರಣೆ

Date:

ಕಲಬುರಗಿ ನಗರದ ಶಹಾಬಾದ ರಸ್ತೆಯ ನೃಪತುಂಗ ಕಾಲೋನಿಯ ತಳ ಸಮುದಾಯ ಬುಡುಗ ಜಂಗಮ ಬಡವಾಣೆಯಲ್ಲಿ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಬಸವ ಪಂಚಮಿ ಕಾರ್ಯಕ್ರಮ ಆಚರಿಸಲಾಯಿತು.

ದಿನೇಶ ದೊಡ್ಡಮನಿ ಅವರು ಮಾತನಾಡಿ, “ನಾಗರ ಪಂಚಮಿ ಹಬ್ಬ ಭಾರತ ದೇಶದ ಮೂಲ ನಿವಾಸಿಗಳಾದ ನಾಗಾ ಸಮುದಾಯ ಜನರನ್ನು ಕೊಂದಿರುವ ದಿನವನ್ನು ಹಾಗೂ ಸಾಂಸ್ಕೃತಿಕ ನಾಯಕ ವಿಶ್ವ ಗುರು ಬಸವಣ್ಣನವರ ಲಿಂಗೈಕ್ಯ ಆದ ದಿನದಲ್ಲಿ ಸಂಪ್ರದಾಯವಾದಿ ವೈದಿಕರು ಶತಮಾನಗಳಿಂದ ನಾಗರ ಹಾವಿಗೆ ಹಾಲು ಎರೆಯುವ ಮೂಲಕ ನಾಗರ ಪಂಚಮಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಇದನ್ನು ನೋಡಿದರೆ ನಮ್ಮ ಹಿರಿಯರನ್ನು ಕೊಂದಿರುವ ದಿನವನ್ನು ಖುಷಿ ಪಡುವಂತೆ ಮಾಡಿದ್ದಾರೆ. ಇದು ನಿಲ್ಲಬೇಕು. ನಿಜವಾದ ಇತಿಹಾಸ ಅರಿತು ಬಾಳಬೇಕು ಎಂದರು.

ಸುನಿಲ್ ಮಾರುತಿ ಮಾನ್ಪಡೆ ಮಾತನಾಡಿ, “ನಾಡಿನಲ್ಲಿ ಮೌಢ್ಯತೆ, ಕಂದಾಚಾರ, ನಂಬಿಕೆಗಳ ಹೆಸರಿನಲ್ಲಿ ಪೌಷ್ಠಿಕ ಆಹಾರವನ್ನು ನೆಲಕ್ಕೆ ಚೆಲ್ಲುವ ಮೂಲಕ ಅಜ್ಞಾನ ಬೆಳಸುವುದು ನಿಲ್ಲಿಸಬೇಕು. ವಿಜ್ಞಾನ, ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿರುವ ದಿನಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಬಸವಣ್ಣನವರು 12ನೇ ಕಾಯಕ ದಾಸೋಹದ ಮೂಲಕ ಆಹಾರದ ಮಹತ್ವ ಸಾರಿ ಹೇಳಿದ್ದಾರೆ. ಬಸವ ತತ್ವ ಚಿಂತನೆ ಮೈಗೂಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 10 at 7.01.04 PM

ವಿಠ್ಠಲ ಚಿಕಣಿ ಮಾತನಾಡಿ, “ಕಳೆದ 15 ವರ್ಷಗಳಿಂದ ಬಸವ ಪಂಚಮಿ ಹಬ್ಬ ಆಚರಿಸುತ್ತಾ ಬಡ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ಅಪೌಷ್ಟಿಕತೆ ನಿವಾರಣೆ ಹಾಗು ಮೌಢ್ಯತೆ ನಿವಾರಣೆಗೆ ಶ್ರಮಿಸುತ್ತಿದ್ದೇವೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭುಲಿಂಗ ಮಹಾಗಾಂವಕರ್ ವಹಿಸಿದ್ದರು. ಸಂತೋಷ ಮೇಲಿನಮನಿ ಪ್ರಾಸ್ತಾವಿಕ ಮಾತನಾಡಿದರು

ಮಾನವ ಬಂಧುತ್ವ ವೇದಿಕೆ ನಾಗೇಂದ್ರ ಜವಳಿ, ಮೈಲಾರಿ ದೊಡ್ಡಮನಿ, ಜಾಗತಿಕ ಲಿಂಗಾಯತ ಮಹಾ ಸಭಾದ ಸಂಗಮೇಶ ಗುಬ್ಬೇವಾಡ, ಶಶಿಕಾಂತ್, ಬುಡುಗ ಜಂಗಮ ಮುಖಂಡರಾದ ಮಾರೆಪ್ಪ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...