ಕಲಬುರಗಿ ಈಶಾನ್ಯ ವಲಯದ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ.ಅಶೋಕ ಸೋಮವಾರ ಆದೇಶ ಹೊರಡಿಸಿದ್ದಾರೆ.
2008ರ ಬ್ಯಾಚಿನ ಅಜಯ್ ಹಿಲೋರಿ ಅವರು ಈಶಾನ್ಯ ವಲಯದ ಐಜಿಪಿ ಆಗಿದ್ದರು. ಇದೀಗ ಬೆಂಗಳೂರು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರನ್ನಾಗಿ ಮಾಡಿ ವರ್ಗಾವಣೆ ಮಾಡಲಾಗಿದೆ.
2006ರ ಬ್ಯಾಚಿನ ಐಪಿಎಸ್ ಅಧಿಕಾರಿ ಚಂದ್ರಗುಪ್ತ ಅವರು ಈ ಹಿಂದೆ ಬೆಂಗಳೂರಿನ ಅಪರಾಧ ವಿಭಾಗದ ಐಜಿಪಿ ಆಗಿದ್ದರು.
ಇದನ್ನೂ ಓದಿ : ತಮಿಳು ಚಿತ್ರರಸಿಕರು ಮೆಚ್ಚಿದ ‘ಕನ್ನಡತ್ತು ಪೈಂಕಿಳಿ’ ಬಿ. ಸರೋಜಾದೇವಿ





