ಕಲಬುರಗಿ | ವಾಟ್ಸ್ಯಾಪ್‌ಗೆ ಬಂದ ʼಪಿಎಂ ಕಿಸಾನ್‌ʼ ಲಿಂಕ್:‌ ₹3.93 ಲಕ್ಷ ಕಳೆದುಕೊಂಡ ವ್ಯಾಪಾರಿ

Date:

ವಾಟ್ಸ್ಯಾಪ್‌ಗೆ ಬಂದ ಪಿಎಂ ಕಿಸಾನ್ ಹೆಸರಿನ ಲಿಂಕ್‌ ಒತ್ತಿ ಕಲಬುರಗಿ ನಗರದ ಪಾನಿಪುರ ವ್ಯಾಪಾರಿಯೊಬ್ಬರು ₹3.93 ಲಕ್ಷ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.

ಅಪ್ಪಾರಾವ ಸೋಪುರೆ ಹಣ ಕಳೆದುಕೊಂಡ ವ್ಯಾಪಾರಿಯಾಗಿದ್ದಾರೆ. ಅಪಾರಾವ ಅವರು ಮೂಲತಃ ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ತೇಲಗಾಂವ ಗ್ರಾಮದವರು. ಸದ್ಯ ನಗರದ ಬಡೇಪುರ ಕಾಲೊನಿಯಲ್ಲಿ ವಾಸವಾಗಿದ್ದು, ಕಳೆದ 10 ವರ್ಷಗಳಿಂದ ಬಡೇಪುರ ಕಾಲೊನಿಯಲ್ಲಿ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದಾರೆ.

ʼ2025ರ ಜುಲೈ 15ರಂದು ಸಂಜೆ 6 ಗಂಟೆ ಹೊತ್ತಿಗೆ ಮನೆಯಲ್ಲಿದ್ದಾಗ ನನ್ನ ವಾಟ್ಸ್ಆ್ಯಪ್‌ಗೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಪಿಎಂ ಕಿಶಾನ್ ಯೋಜನೆಯ ಲಿಂಕ್ ಬಂದಿತ್ತು. ನಮ್ಮ ಹೊಲಗಳಿಗೆ ಸಂಬಂಧಿಸಿದ ವಿಮೆ ಹಣ ಅಥವಾ ಸರ್ಕಾರದ ಹಣಕ್ಕೆ ಸಂಬಂಧಿಸಿದ ಲಿಂಕ್ ಇರಬಹುದು ಎಂದುಕೊಂಡು ಅದನ್ನು ಕ್ಲಿಕ್ ಮಾಡಿದೆ. ತಕ್ಷಣ ನನ್ನ ಮೊಬೈಲ್ ಹ್ಯಾಕ್‌ ಆಗಿ ನನಗೆ ವಿವಿಧ ಬಗೆಯ ಒಟಿಪಿಗಳು ಬಂದವು. ಗಾಬರಿಯಿಂದ ನನ್ನ ಮೊಬೈಲ್ ಫೋನ್‌ ಬಂದ್‌ ಮಾಡಿದ್ದೇನೆ. ಮರುದಿನ ಮೊಬೈಲ್ ಫೋನ್‌ ಸ್ವೀಚ್‌ ಆನ್ ಮಾಡಿ ನೋಡಿದಾಗ ಅದರಲ್ಲಿ ಹಲವು ಒಟಿಪಿಗಳು ಬಂದಿದ್ದವು. ನನ್ನ ಮೊಬೈಲ್ ಫೋನ್‌ ಕೂಡ ಬಂದ್‌ ಆಗಿತ್ತು. ಮೊಬೈಲ್ ಹ್ಯಾಕ್ ಆಗಿದ್ದರಿಂದ ಮೊಬೈಲ್ ನೆಟ್‌ವರ್ಕ್‌ ಬಂದಿಲ್ಲ ಎಂದುಕೊಂಡು ಸುಮ್ಮನಿದ್ದೆ’ ಎಂದು ಅಪ್ಪಾರಾವ ಸೋಪುರೆ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಹಿಂದೆ ನಾನು ನಿವೇಶನ ಖರೀದಿ ಸಂಬಂಧ ಪರಿಚಯಸ್ಥರೊಬ್ಬರಿಗೆ ₹3.91 ಲಕ್ಷದ ನನ್ನ ಹೆಸರಿನ ಚೆಕ್‌ ನೀಡಿದ್ದೆ. ಈ ಮಧ್ಯೆ ಅವರು ನನಗೆ ಕರೆ ಮಾಡಿ, ನಿಮ್ಮ ಖಾತೆಯಲ್ಲಿ ಹಣವಿಲ್ಲ, ನೀವು ನೀಡಿದ ಚೆಕ್‌ ಬೌನ್ಸ್‌ ಆಗಿದೆ ಎಂದು ತಿಳಿಸಿದ್ದರು. ನಾನು ಜುಲೈ 22ರಂದು ಎಸ್‌ಬಿಐ ಬ್ಯಾಂಕ್‌ಗೆ ಹೋಗಿ ಪರಿಶೀಲಿಸಿದೆ. ಆವಾಗ ಜುಲೈ 16ರಿಂದ ಜುಲೈ 20ರ ತನಕ ₹3,93,500 ನನ್ನ ಬ್ಯಾಂಕ್‌ ಖಾತೆಯಿಂದ ಯುಪಿಐ ಮೂಲಕ ವರ್ಗಾಯಿಸಿದ ವಿಷಯ ತಿಳಿಯಿತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಜುಲೈ 16ರಂದು ₹99,500, ಜು.17ರಂದು ₹99,500, ಜು.18ರಂದು ₹98,500 ಹಾಗೂ ಜು.20ರಂದು ₹96,000 ಸೇರಿ ಒಟ್ಟು ₹3,93,500 ಹಣ ಯುಪಿಐ ಮೂಲಕ ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮೋಸ, ವಂಚನೆ ಮಾಡಿ ಸೈಬರ್‌ ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ನಾನು ಕಳೆದುಕೊಂಡಿರುವ ಹಣ ಮರಳಿ ಕೊಡಿಸಬೇಕೆಂದು ವ್ಯಾಪಾರಿ ಅಪಾರಾವ ಅವರು ನೀಡಿದ ದೂರಿನ ಮೇರೆಗೆ ನಗರದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಆ.25ರಂದು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...