ಕಲಬುರಗಿ | ಕುಸಿಯುತ್ತಿರುವ ಶಾಲಾ ಕಟ್ಟಡ, ಆತಂಕದಲ್ಲಿ ಪಾಠ ಕೇಳುವ ಮಕ್ಕಳು

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ ಕೂತು ಊಟಮಾಡುತ್ತಾರೆ.

ಈ ಕಟ್ಟಡ ಯಾವಾಘ ಮೇಲೆ ಬಿಳುತ್ತದೆಯೋ ಗೊತ್ತಿಲ್ಲ ಎಂಬ ಆತಂಕದಲ್ಲಿ ಶಿಕ್ಷಕರು, ಮಕ್ಕಳು ದಿನಾ ಶಾಲೆಗೆ ಬರುತ್ತಾರೆ. ತಾಲೂಕು ಆಡಳಿತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಶಾಲೆಯ ಬಗ್ಗೆ ಗಮನಹರಿಸಬೇಕು ಎಂದು ಮಕ್ಕಳು ಶಾಲೆಯ ಶಿಕ್ಷಕರು ಆಗ್ರಹಿಸುತ್ತಿದ್ದಾರೆ.

ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗಿನ 100ಮಕ್ಕಳು ಓದುತ್ತಿದ್ದಾರೆ. ಮೂರು ಜನ ಶಿಕ್ಷಕರಿದ್ದಾರೆ. ಶಾಲೆಯಲ್ಲಿರುವ ಒಟ್ಟು ಐದು ಕೋಣೆಗಳಲ್ಲಿ ಮೂರು ಕೋಣೆಗಳು ಸಂಪೂರ್ಣ ಹಾಳಾಗಿವೆ. ಉಳಿದ ಎರಡು ಕೋಣೆಗಳಲ್ಲಿ ಮಾತ್ರ ಮಕ್ಕಳಿಗೆ ಪಾಠ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಎಲ್ಲ ಕೋಣೆಗಳು ಸೋರುತ್ತವೆ. ಮಳೆಗಾಲದಲ್ಲಿ ಶಾಲೆಗೆ ಒಂದುವಾರಗಳಕಾಲ ರಜೆಸಹ ನೀಡಿದ ಉದಾಹರಣೆಗಳಿವೆ ಎನ್ನುತ್ತಾರೆ ಗ್ರಾಮಸ್ಥರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ಶಾಲೆಯ ಕಟ್ಟಡ ದುರಸ್ತಿ ಮಾಡಲಾರದಷ್ಟು ಹಾಳಾಗಿದೆ. ಅದಕ್ಕಾಗಿ ಈ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಮತ್ತು ಶಾಲೆಗೆ ಮೂಲ ಸೌಲಭ್ಯ ಕಲ್ಪಿಸಬೇಕು.ಶಾಲಾ ಕಟ್ಟಡವನ್ನು ಹೊಸದಾಗಿ ನಿರ್ಮಾಣ ಮಾಡುವ ಬಗ್ಗೆ ಈ ಹಿಂದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಶಾಸಕರಿಗೂ ತಿಳಿಸಿದ್ದೇವೆ ಆದರೆ ಯಾವುದೇ ರಯೋಜನವಾಗಿಲ್ಲ. ಮತ್ತೆ ಮಳೆಗಾಲ ಬರುತ್ತೆ, ಶಾಲೆ ಸೋರುತ್ತದೆ. ಅದಕ್ಕಾಗಿ ಮಳೆಗಾಲದೊಳಗಾಗಿ ಸರ್ಕಾರ ಆರು ಕೊಠಡಿಗಳನ್ನು ನಿರ್ಮಾಣ ಮಾಡಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಾಯಪ್ಪ ಪೂಜಾರಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...