ಕಲಬುರಗಿ | ಆಗಸ್ಟ್ 9, 10ರಂದು ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ

Date:

ಕಳೆದ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ನಡೆದ ಉದ್ಯೋಗ ಮೇಳದ ಮುಂದುವರಿದ ಭಾಗವಾಗಿ, ಆಗಸ್ಟ್ 9 ಮತ್ತು 10 ರಂದು ಕಲಬುರಗಿಯ ಶೆಟ್ಟಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮೊದಲ ಹಂತದಲ್ಲಿ 2,500ಕ್ಕೂ ಹೆಚ್ಚು STEM ವಿದ್ಯಾರ್ಥಿಗಳಿಗೆ ರಚನಾತ್ಮಕ ಉದ್ಯೋಗಾವಕಾಶ ಮೌಲ್ಯಮಾಪನ ಅಭಿಯಾನವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಪ್ರತಿ ಅಭ್ಯರ್ಥಿಯ ಸಾಮರ್ಥ್ಯ, ಸಂವಹನ ಕೌಶಲ್ಯ, ಡಿಜಿಟಲ್ ಸಾಕ್ಷರತೆ ಮತ್ತು ನಡವಳಿಕೆಯ ಸಿದ್ಧತೆಯನ್ನು ಸಮರ್ಪಕವಾಗಿ ಅರಿಯಲು ನಾವು ಪ್ರತಿದಿನ ನಾಲ್ಕು ಸ್ಲಾಟ್‌ಗಳಲ್ಲಿ ನಡೆಸುವ 90 ನಿಮಿಷಗಳ ಆನ್‌ಲೈನ್ ಪರೀಕ್ಷೆಯನ್ನು ಉಚಿತವಾಗಿ ಆಯೋಜಿಸಲಾಗುತ್ತದೆ. ಮೌಲ್ಯಮಾಪನದ ನಂತರ ಪ್ರತಿಯೊಬ್ಬ ವಿದ್ಯಾರ್ಥಿಯು ವೈಯಕ್ತಿಕಗೊಳಿಸಿದ ಕೌಶಲ್ಯ-ಅಂತರದ ವರದಿ ಮತ್ತು ಅವರ ತರಬೇತಿ ಹಾಗೂ ಉದ್ಯೋಗ ಪ್ರಯತ್ನಗಳಿಗೆ ಮಾರ್ಗದರ್ಶನಕ್ಕಾಗಿ ವೈಯಕ್ತಿಕ ಅಭಿವೃದ್ಧಿ ಯೋಜನೆಯನ್ನು ಪಡೆಯುತ್ತಾರೆ” ಎಂದು ಅಭಿಪ್ರಾಯ ಪಟ್ಟರು.

“ಇದು ನಮ್ಮ ಪ್ರಮುಖ ಮರುಕೌಶಲ್ಯ ಮತ್ತು ಉನ್ನತೀಕರಣ ಕಾರ್ಯಕ್ರಮವಾದ ‘ನಿಪುಣ ಕರ್ನಾಟಕ’ದ ಅಡಿಯಲ್ಲಿ ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಸಿದ್ಧತೆಯನ್ನು ನಿಜವಾದ ಉದ್ಯೋಗ ಅಗತ್ಯಗಳೊಂದಿಗೆ ಬೆಸೆಯಲು ಸಹಾಯ ಮಾಡುತ್ತದೆ. ಇಲ್ಲಿ ಪರೀಕ್ಷಿಸಿದ ನಂತರ, ನಮ್ಮ ಪದವೀಧರರು ಸೂಕ್ತ ಸ್ಥಾನವನ್ನು ಕಂಡುಕೊಳ್ಳಲು ಮತ್ತು ವೃತ್ತಿ ಫಲಿತಾಂಶಗಳನ್ನು ಸುಧಾರಿಸುವುದಕ್ಕಾಗಿ ವಿದ್ಯಾರ್ಥಿಗಳು ಹಾಗೂ ಉದ್ಯೋಗದಾತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಈ ಮಾದರಿಯನ್ನು ವಿಸ್ತರಿಸಲಾಗುವುದೆಂದು” ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

“ನೋಂದಣಿಗಳಿಗೆ ಈಗಾಗಲೇ https://unstop.com/o/xvCVUWP/?ref=KalaburgiAssessment ನಲ್ಲಿ ಅವಕಾಶವಿದ್ದು, ಇದು ಆಗಸ್ಟ್ 7 ರಂದು ಮುಕ್ತಾಯಗೊಳ್ಳಲಿದೆ. ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನಕ್ಕೆ ಉತ್ತಮವಾಗಿ ತಯಾರಿ ನಡೆಸಲು ಈ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...