ಕಲಬುರಗಿ | ಒಂದು ವಾರದೊಳಗೆ ರೈತರಿಗೆ ಖಾತೆಗೆ ಬೆಳೆ ಪರಿಹಾರ : ಸಚಿವ ಪ್ರಿಯಾಂಕ್‌ ಖರ್ಗೆ

Date:

ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಪರಿಹಾರದ ಬಗ್ಗೆಯೂ ಮಾಹಿತಿ ನೀಡಲಾಗಿದೆ, ಮುಂದಿನ ಒಂದು ವಾರದೊಳಗೆ ಪರಿಹಾರ ರೈತರಿಗೆ ಜಮಾ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು.

ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎರಡನೆಯ ಸುತ್ತಿನ ಮಳೆ ನಿಲ್ಲದ‌ ಕಾರಣ‌ ಸರ್ವೆ ಮಾಡುವುದು ಕಷ್ಟವಾಗುತ್ತಿದೆ. ಮೊದಲ ಹಂತದಲ್ಲೇ 1.05 ಲಕ್ಷ ಹೆಕ್ಟೇರ್ ಹಾನಿಯಾಗಿದೆ. ಎರಡನೆಯ ಸುತ್ತಿನ ಸರ್ವೆ ಕೂಡ ಮಾಡಲಾಗುವುದು. ಈ ಬಗ್ಗೆ ನಾಳೆ ಸಚಿವ ಸಂಪುಟ ಸಭೆ ನಂತರ ಸಿಎಂ ಗಮನಕ್ಕೆ ತರಲಾಗುವುದುʼ ಎಂದರು.

ʼಕೋಲಿ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಬೇಡಿಕೆ ಬಳಹ ದಿನದಿಂದ ಇತ್ತು. ಕುರುಬ ಸಮಾಜದ ಸಭೆ ಕೂಡಾ ನಡೆಸಲಾಗುತ್ತಿದೆ.‌ ಕುರುಬ ಹಾಗೂ ಕೋಲಿ ಕಬ್ಬಲಿಗ ಸಮಾಜವನ್ನು ಎಸ್ ಟಿ ಸೇರಿಸುವ ವಿಚಾರದಲ್ಲಿ ಎಂಥ್ರಾಪಲಾಜಿ ವರದಿ ಸಲ್ಲಿಸಿದ ಸಮಿತಿಯ ಮುಂದೆ ಚರ್ಚೆ ನಡೆಲಾಗಿದೆ. ಸಾಂಸ್ಕೃತಿಕ ಹಾಗೂ ಐತಿಹಾಸಿಕ ದಾಖಲೆಗಳನ್ನು ಕೇಂದ್ರಕ್ಕೆ ಸಲ್ಲಿಸುವ ವಿಚಾರವಿದೆ. ಇದೇ 20 ರಂದು ವರದಿ ಸಲ್ಲಿಸಲಾಗುವುದು. ಯಾವುದೇ ಸಂಘಟನೆ ಪರ ಅಥವಾ ವಿರೋಧ ಮಾಡಿದ ತಕ್ಷಣ ಪಟ್ಟಿಗೆ ಸೇರಿಸುವುದು ಆಗುವುದಿಲ್ಲ. ಸಂವಿಧಾನದ ಪ್ರಕಾರ‌ ಎಲ್ಲ ನಡೆಯುತ್ತಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೋಲಿ ಸಮಾಜವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಭರವಸೆ ನೀಡಿದ್ದರು ಇದೂವರೆಗೆ ಯಾವುದೇ ಕ್ರಮವಾಗಿಲ್ಲ. ನಾನೇ ಸಮಾಜಕಲ್ಯಾಣ ಸಚಿವನಾಗಿದ್ದಾಗಲೂ ಕೂಡಾ ಕೆಲ ಕ್ಲಾರಿಫಿಕೇಷನ್ ಕೊಟ್ಟು ಬಂದಿದ್ದೆʼ ಎಂದರು.

ʼಸಾಲ‌ಮನ್ನಾ ವಿಚಾರ, ಜಂಟಿ ಸರ್ವೆ ನಂತರ ಬೆಳೆಹಾನಿ ಗೊತ್ತಾದಾಗ ಮುಂದಿನ ಕ್ರಮ ಕೈಗೊಳ್ಳಲಾಗುವುದು. 3.08 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಆಗಿದ್ದರು ಅವರಲ್ಲಿ 1.36 ಲಕ್ಷ ಜನ (45%) ಜನ ಹಾನಿಗೊಳಗಾಗಿದ್ದಾರೆ.‌ ಮೊದಲಿಗೆ ಅವರಿಗೆ ಪರಿಹಾರ ಒದಗಿಸಬೇಕಿದೆ. ಆನ್ ಲೈನ್ ನೋಂದಣಿ ವಿಚಾರದಲ್ಲಿ ಉದ್ಭವಿಸಿದ್ದ ಕೆಲ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲಾಗಿದೆ. ಸರ್ವೆ ಸಮಯದಲ್ಲಿ ರೈತರು ಬೆಳೆ‌ ಹಾನಿಯ ಸಂಪೂರ್ಣ ವಿವರನ್ನು ಒದಗಿಸಿದರೆ ಸರ್ವೆಗೆ ಅನುಕೂಲವಾಗುತ್ತದೆʼ ಎಂದರು.

ʼಕಂದಾಯ, ಕೃಷಿ ಹಾಗೂ ತೋಟಗಾರಿಕೆ‌ ಇಲಾಖೆ ಪ್ರತಿ ನಾಲ್ಕು ದಿನಕ್ಕೊಮ್ಮೆ ಸಭೆ ನಡೆಸಿದ ಪರಿಣಾಮ 600 ಕೋಟಿ ಪರಿಹಾರ ಸಿಕ್ಕಿದೆ. ಖಚಿತ ಮಾಹಿತಿ ದೊರಕಿದ‌ ಮೇಲೆ ಪರಿಹಾರ ವಿತರಣೆಗೆ ಸಹಕಾರಿಯಾಗಲಿದೆ. ಎನ್ ಡಿ ಆರ್ ಎಫ್ ನಿಯಮಾವಳಿಗಳ ಬಿಗಿಯಾಗಿದ್ದರಿಂದ ನಮಗೆ ಬೆಳೆ ವಿಮೆ‌ ಮಾಡಿಸುವುದು ಒಂದೇ ಪರಿಹಾರವಾಗಿದೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿರುವುದರಿಂದ ಗ್ರಾಮೀಣ ರಸ್ತೆಗಳ ರಿಪೇರಿಗೆ‌ಅನುದಾನ ಬಿಡುಗಡೆ ಮಾಡಲಾಗಿತ್ತು. ಆದರೂ ಕೂಡಾ‌ ಸಿಎಂ‌ ಅವರ ವಿಶೇಷ ಅನುದಾನವನ್ನು ಕೂಡಾ ತೆಗೆದಿರಿಸಲಾಗಿದೆ. ಜಿಲ್ಲೆಯಲ್ಲಿ 40 ಕೋಟಿ‌ ಪಿಡಿ ಖಾತೆಯಲ್ಲಿದೆ. ಅದನ್ನೂ ಕೂಡಾ ಬಳಸಿಕೊಳ್ಳಬಹುದು. ಮಳೆಗಾಲ ಮುಗಿದ‌ ನಂತರ ಜಿಲ್ಲೆಯ ರಸ್ತೆಗಳ ರಿಪೇರಿ ಮಾಡಲಾಗುವುದುʼ ಎಂದು ತಿಳಿಸಿದರು.

ʼಮಳೆಗಾಲದ ನಂತರ ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳ ರಿಪೇರಿಗೆ ಸಂಬಂಧಿಸಿದಂತೆ ರಸ್ತೆ ಆಡಿಟ್ ಮಾಡಲಾಗುವುದು. ರಸ್ತೆ ಗುಂಡಿ ಮುಚ್ಚುವ ಕುರಿತು ಬೆಂಗಳೂರು ಮೂಲಕ ಸಂಸ್ಥೆಯೊಂದಿಗೆ ಮಾತುಕತೆ ನಡೆದಿದ್ದು ಟೆಂಡರ್ ಕರೆಯುವ ಯೋಚನೆಯಿದೆ. ನವೆಂಬರ್ ವೇಳೆಗೆ ರಸ್ತೆ ರಿಪೇರಿ ಕೈಗೆತ್ತಿಕೊಳ್ಳಲಾಗುವುದು. ರಸ್ತೆಗಳ ಗುಣಮಟ್ಟ ಕಂಡುಹಿಡಿಯಲು ರಸ್ತೆ ಆಡಿಟ್ ಮಾಡುವ ಉದ್ದೇಶ ಹೊಂದಲಾಗಿದೆ. ನಗರ ಪ್ಲಾನಿಂಗ್ ಕುರಿತು ಏಜೆನ್ಸಿ ಯನ್ನು ಕೂಡಾ ಗುರುತಿಸಲಾಗಿದ್ದು ಸೆಪ್ಟೆಂಬರ್ 20 ರ ನಂತರ ಕಲಬುರಗಿ ಎಂಪಿ ಅವರು ಈ ಕುರಿತು ತಾವು ತಯಾರಿಸಿದ‌ ನೀಲಿ ನಕ್ಷೆ ಹಾಗೂ ಪ್ಲಾನಿಂಗ್ ಕುರಿತು ವಿವರಿಸಲಿದ್ದಾರೆʼ ಎಂದು ಮಾಹಿತಿ ನೀಡಿದರು.

ʼಹೆಸರು ಹಾಗೂ ಉದ್ದು ಖರೀದಿ ಕೇಂದ್ರ ಸ್ಥಾಪನೆ ಬೇಡಿಕೆ ಹಿನ್ನೆಲೆ, ಜುಲೈ 21 ರಂದು ಬಿತ್ತನೆ ಕಾರ್ಯ‌ಮುಗಿದ ನಂತರ‌ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಆದರೆ ಅವರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಮುಂದಿನ ವಾರ ಮತ್ತೊಮ್ಮೆ ಈ ಬಗ್ಗೆ ಮನವರಿಕೆ ಮಾಡಲಾಗುವುದು. ನಾಳೆ ನಡೆಯಲಿರುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದುʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...