ಕಲಬುರಗಿ | ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಒದಗಿಸುವಂತೆ ಆಗ್ರಹ

Date:

ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ‌, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.

ಕಲಬುರಗಿ ಜಿಲ್ಲಾಧ್ಯಕ್ಷ ರಾಜು ಮೇತ್ರಿ ಮಾತನಾಡಿ, “ಸೇಡಂ ತಾಲೂಕಿನಲ್ಲಿ ನಾವು ಸುಮಾರು ನಾಲ್ಕೈದು ವರ್ಷಗಳಿಂದ ಬೆಳೆ ಸಮೀಕ್ಷೆಗಾರರಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇವೆ. ನಾವು ಸೇವೆ ಸಲ್ಲಿಸುತ್ತಿರುವಾಗ ಹಾವು, ಚೇಳು ಸೇರಿದಂತೆ ಇತರೆ ವಿಷಪೂರಿತ ಕ್ರಿಮಿಗಳು ಹಾಗೂ ಕಾಡು ಹಂದಿ, ತೋಳಗಳ ದಾಳಿಯಿಂದ ಗಾಯಗೊಂಡಿದ್ದೇವೆ. ಹೆಜ್ಜೇನುಗಳ ದಾಳಿಗೆ ಒಳಪಟ್ಟಿದ್ದೇವೆ” ಎಂದು ಹೇಳಿದರು.

“ಈ ಹಿಂದೆ ಮಳಖೇಡ ಮತ್ತು ಕೋಡ್ಲಾದಲ್ಲಿ ಇಬ್ಬರು ಬೆಳೆ ಸಮೀಕ್ಷದಾರರಿಗೆ ಹಾವು ಕಚ್ಚಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಆದರೂ ಕೂಡ ಈವರೆಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ನಾವು ಜೀವದ ಆಸೆ ಬಿಟ್ಟು ಶ್ರದ್ದೆಯಿಂದ ಸೇವೆ ಮಾಡುತ್ತಿದ್ದೇವೆ. ಸಮೀಕ್ಷ ಮಾಡುವಾಗ ಕೆಲವು ರೈತರು ನೀವು ಯಾರೆಂದು ಪ್ರಶ್ನೆ ಮಾಡುತ್ತಾರೆ. ಕೆಲವೊಮ್ಮೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿನಗೂಲಿ ಆಧಾರದ ಮೇಲೆ ನಮಗೆ ಪ್ರತಿದಿನವೂ ಕೆಲಸ ಒದಗಿದಬೇಕು. ಎಲ್ಲ ಬೆಳೆ ಸಮೀಕ್ಷದಾರರಿಗೆ ರೇನ್ ಕೋಟ್ ನೀಡಬೇಕು. ಈ ಹಿಂದೆ ನಾವು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ಈ ಕುರಿತು ಮಾಹಿತಿ ತಿಳಿಸಿದ್ದೇವೆ. ಆದರೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ತಾವಾದರೂ ನಮ್ಮ ಬಗ್ಗೆ ಗಮನ ಹರಿಸಬೇಕು” ಎಂದು ಮನವಿ ಮಾಡಿದರು.

“ನಮಗೆ ಒಂದು ವರ್ಷದಲ್ಲಿ ಮೂರು ಬಾರಿ ಮಾತ್ರ ಕೆಲಸ ನೀಡಲಾಗುತ್ತದೆ ಕಾರಣ ನಮಗೆ ಖಾಯಂ ಕೆಲಸ ಕೊಡಿಸಬೇಕು ಇಲ್ಲವಾದಲ್ಲಿ ಪ್ರತಿ ತಿಂಗಳು ಐದ ರಿಂದ ಹತ್ತು ಸಾವಿರ ಸಹಾಯ ಧನ ನೀಡಬೇಕು.ಒಬ್ಬ ಪಿ.ಆರ್‌ಗೆ ಹತ್ತುಲಕ್ಷ ಜೀವವಿಮೆ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ ಭವನ ನಿರ್ಮಾಣದ ನಿವೇಶನ ಅತಿಕ್ರಮಣ; ಆರೋಪ

ನಾಗರಾಜು ಮದಕಲ್, ಮೊಗಲಪ್ಪ ರಾಘಪೂರ, ಬಸಪ್ಪ ಮಲ್ಕಪಲ್ಲಿ, ಯಲೇಶ ದುಗನೂರ, ರವಿಕುಮಾರ ಕಾಚೂರ್, ನರೇಶ ಕುರುಕುಂಟಾ, ನರಸಿಂಗಹ ಗುಂಡೆಪಲ್ಲಿ, ರಾಮಕೃಷ್ಣ ಸೀಲಾರಕೋಟ್, ರವಿಕುಮಾರ ಪಾಕಲ್, ನಿಂಗಪ್ಪ ಹಂದರಕಿ, ನಾಗಪ್ಪ ಹಂದರಕಿ ಇದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...