ಕಲಬುರಗಿ | ಕವಲಗಾ ಗ್ರಾಮ ಪಂಚಾಯಿತಿ ಅಕ್ರಮ ಖಂಡಿಸಿ ದಲಿತ ಸೇನೆ ಆಗ್ರಹ

Date:

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕವಲಗಾ ಗ್ರಾಮ ಪಂಚಾಯತಿಯಲ್ಲಿ 2022-23-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಮೋಟಾರ್ ಖರೀದಿ ಮತ್ತು ದುರಸ್ತಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದೆ ಏಜೆನ್ಸಿಗಳ ಮುಖಾಂತರ ಹಣ ದುರ್ಬಳಕೆ ಮಾಡಿದ್ದಾರೆ ಎಂದು ದಲಿತ ಸೇನೆ ಆರೋಪಿಸಿದೆ.

ಕವಲಗಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮ ಖಂಡಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸೇನೆ ಆಳಂದ ತಾಲೂಕು ಸಮಿತಿ ವತಿಯಿಂದ ಕಲಬುರಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಕವಲಗಾ ಗ್ರಾಮ ಪಂಚಾಯಿತಿಯಲ್ಲಿ 2022, 2023-24ನೇ ಸಾಲಿನಲ್ಲಿ ಬಂದ 15ನೇ ಹಣಕಾಸು, ಶೇ.5 ಪ್ರತಿಶತ ಮನರೇಗಾ ಕರವಸೂಲಿ ಮತ್ತು ಎಸ್‌ಸಿ/ಎಸ್‌ಟಿ ಹಾಗೂ ವಸತಿ ಯೋಜನೆಯಲ್ಲಿ ಭಾರೀ ಅವ್ಯವಹಾರ ಮಾಡಿ ಲೂಟಿ ಹೊಡೆದಿರುವದನ್ನು ಖಂಡಿಸಿ ತನಿಖೆ ಮಾಡಿ ತಪ್ಪಿಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನರೇಗಾ ಕೂಲಿ ಕಾರ್ಮಿಕರಿಗೆ ವೇತನ ಪಾವತಿಸದೆ ಸತಾಯಿಸುತ್ತಿದ್ದು, 2019-20ನೇ ಸಾಲಿನ ವಸತಿ ಯೋಜನೆಯಲ್ಲಿ ಸರ್ಕಾರಿ ನೌಕರ ಕುಟುಂಬದ ಹೆಸರಿನಲ್ಲಿ ಫಲಾನುಭವಿ ಹೆಸರಿಗೆ ಹಂಚಿಕೆಯಾದ ಮನೆಗಳನ್ನು ಬೇರೊಬ್ಬರ ಜಾಗದಲ್ಲಿ ನಿರ್ಮಿಸಿದ್ದು, ಅರ್ಹ ಫಲಾನುಭವಿಗಳಿಗೆ ಅನ್ಯಾಯ ಮಾಡಿದ್ದಾರೆ” ಎಂದು ಆರೋಪಿಸಿದರು.

“ಅಕ್ರಮಗಳ ಕುರಿತಂತೆ ಹಲವು ಬಾರಿ ದೂರುಗಳನ್ನು ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಮನರೇಗಾ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಏಜೆನ್ಸಿಗಳ ಮುಖಾಂತರ ರಾಜೇಶ್ವರಿ ಗಣೇಶ ಹಾಗೂ ಇನ್ನಿತರ ಏಜೆನ್ಸಿ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿಸಿ ಹಣ ಎತ್ತಿಕೊಂಡಿದ್ದಾರೆ. ಹೀಗೆ ಬಹುತೇಕ ಅಕ್ರಮಗಳನ್ನು ನಡೆಸಿ ಅನುದಾನವನ್ನು ಲೂಟಿ ಮಾಡಿದ್ದಾರೆ. ಅಂಗವಿಕಲರಿಗಾಗಿ ಬಂದ ಶೇ.5ರಷ್ಟು ಅನುದಾನ ನೀಡದೆ ದುರ್ಬಳಕೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಗುಲ್ಬರ್ಗಾ ವಿವಿ ಉಪನ್ಯಾಸಕನಿಂದ ಮೊಬೈಲ್‌ನಲ್ಲೇ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ ಬಂದ ಆಡಿಯೋ

“ಎಸ್‌ಸಿ/ಎಸ್‌ಟಿ ಅನುದಾನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಬೇಕು, ಮನರೇಗಾ ಕೂಲಿ ಕಾರ್ಮಿಕರ ವೇತನ ಪಾವತಿಸಬೇಕು ಮತ್ತು ಕೂಡಲೇ ಕೆಲಸ ಪ್ರಾರಂಭಿಸಬೇಕು. ಅಂಗವಿಕಲರ ಶೇ.5ರಷ್ಟು ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ನೀಡಬೇಕು. ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಶರಣು ಕವಲಗಿ, ದತ್ತಾ ಕಡಗಂಚಿ, ದಲಿತ ಸೇನಾ ಉಪಾಧ್ಯಕ್ಷ ದಿಲೀಪ ಮಟಕಿ, ಹಣಮಂತ ಗಾಯಕವಾಡ, ಶಶಿಧರ ನವರಂಗ, ಸಂದೀಪ ಕಾಳೆಕಿಂಗೆ, ಗುಂಡಪ್ಪಾ ಅರಣೋದಯ, ಲಕ್ಷ್ಮಣ ನಿಂಬಾಳ, ನೀಲಪ್ಪಾ ಕಾಂಬಳೆ, ಜೈಭೀಮ್ ಕಂಟೆಕೊರೆ ಮುಸ್ತಾಫಾ ಹಕೀಮಜಿ, ಶಿವಲಿಂಗ ಮಾಡ್ಯಾಳಕರ, ಶಶಿ ನರೋಣೆ, ಧರ್ಮಾ ಜಿ ಬಂಗರಗಿ, ಮಹೇಶ ಕೋಚಿ, ಶಿವಲಿಂಗಪ್ಪಾ ಚನ್ನಗುಂಡ, ಮಂಜು ಸಿಂಗೆ, ವಸಂತ ಕುಮಸಿ, ಸಂದೀಪ ಕಾಂಬಳೆ, ಸಿದ್ದಾರ್ಥ ಗಾಯಕವಾಡ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...