ಕಲಬುರಗಿ | ಪಿಎಸ್‌ಐ ಪರಶುರಾಮ ಪ್ರಕರಣ: ತಪ್ಪಿತಸ್ಥರನ್ನು ಬಂಧಿಸಿ, ಆಸ್ತಿ ಮುಟ್ಟುಗೋಲು ಹಾಕಲು ದಲಿತ ಸೇನೆ ಆಗ್ರಹ

Date:

ಯಾದಗಿರ ಜಿಲ್ಲೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದವರನ್ನು ಬಂಧಿಸಿ ಆಸ್ತಿ ಮುಟ್ಟುಗೋಲು ಹಾಕುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದಲಿತ ಸೇನೆಯ ಮುಖಂಡರು ಪ್ರತಿಭಟನೆ ನಡೆಸಿದರು.

ಪಿ.ಎಸ್.ಐ ಪರಶುರಾಮ ರವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಹಾಗಯ ಆಳಂದ ತಾಲೂಕಿನಲ್ಲಿರುವ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯನ್ನು ಅವಮಾನಿಸಿದ ಕುಲಪತಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಒತ್ತಾಯಿಸಿದ್ದಾರೆ.

ಬಳಿಕ ದಲಿತ ಸೇನೆಯ ಮುಖಂಡರು ತಹಶೀಲ್ದಾರ್ ಅವರ ಮುಖಾಂತರ ರಾಜ್ಯಪಾಲ‌ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಪತ್ರ ಸಲ್ಲಿಸಿದ ಬಳಿಕ ಅಧ್ಯಕ್ಷ ಧರ್ಮಾ ಜಿ. ಬಂಗರಗಿ ಮಾತನಾಡಿ, “ಕರ್ನಾಟಕದಲ್ಲಿ 1.4 ಕೋಟಿ ದಲಿತರು ಇದ್ದರೂ ಕೂಡಾ ದಲಿತರರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರನ್ನು ತಮಗೆ ಬೇಕಾದ ಹಾಗೆ ರಾಜಕಾರಣಿಗಳು ಬಳಸಿಕೊಳ್ಳುತ್ತಿದ್ದಾರೆ‌. ದಲಿತರ ಯೋಜನೆಗಳು ಹಾಗೂ ದಲಿತರ ಅನುದಾನ ದುರ್ಬಳಕೆ ಮಾಡಿಕೊಂಡು ದಲಿತರ ದಮನ ಮಾಡುವ ಕುತಂತ್ರ ನಡೆಯುತ್ತಿದೆ” ಎಂದು ದೂರಿದರು‌.

ಪಿ.ಎಸ್.ಐ ಪರಶುರಾಮ ಅವರನ್ನು ಮಾನಸಿಕ ಹಿಂಸೆ ನೀಡಿ ವರ್ಗಾವಣೆಗಾಗಿ ಅಲ್ಲಿನ ಶಾಸಕ ಮತ್ತು ಅವನ ಮಗನ ಹಿಂಸೆ ತಾಳಲಾರದೆ ಮಾನಸಿಕ ಒತ್ತಡಕ್ಕೆ ಸಿಲುಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಅವರ ಆಸ್ತಿ ಮುಟ್ಟುಗೋಲು ಹಾಕಬೇಕು ಎಂದು ಆಗ್ರಹಿಸಿದರು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಕುಲಪತಿಯವರು ಬೀಳ್ಕೊಡುಗೆ ಸಮಾರಂಭದಲ್ಲಿ ದಲಿತ ವಿದ್ಯಾರ್ಥಿಯಾದ ನಂದಪ್ಪಾ ಅವರನ್ನು ದ್ವಾರದಲ್ಲಿಯೇ ತಡೆದು ಜಾತಿ ನಿಂದನೆ ಮಾಡಿರುವುದು ಖಂಡನೀಯ. ಕುಲಪತಿ, ಪ್ರೊಫೆಸರ್ ಮೇಲೆ ಕೇಸು ದಾಖಲಾಗಿದ್ದರೂ ಕೂಡ ಅವರನ್ನು ಬಂಧಿಸಿಲ್ಲ ಎಂದ ಅವರು, ವಿಶ್ವ ವಿದ್ಯಾಲಯದಲ್ಲಿ ಆಗುತ್ತಿರುವ ಅನಾಹುತಗಳನ್ನು ತಡೆಗಟ್ಟುವಂತೆ ಆಗ್ರಹಿಸಿದರು.

ಎಲ್ಲ ಬೇಡಿಕೆಗಳನ್ನು ಈಡೇರಿಸಲು ದಲಿತ ಸೇನೆ ರಾಮ ವಿಲಾಸ ಸಂಘಟನೆ ತಾಲೂಕು ಸಮಿತಿಯ ವತಿಯಿಂದ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟಿಸಿ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭೀಮಾಶಂಕರ ತಳಕೇರಿ, ಶರಣು ಕವಲಗಾ, ದಿಲೀಪ್ ಮಂಟಗಿ, ರೇವಣಸಿದ್ಧ ಮಂಡ್ಲೆ, ಅಶೋಕ್ ಮೋಘಾ, ಮಲ್ಲಿನಾಥ್ ಚಿಂಚೋಳಿ, ಲಕ್ಷ್ಮಣ ನಿಂಬಾಳಕರ, ಮಂಜು ಸಿಂಗೆ, ಲಕ್ಷ್ಮಣ ಸಂಗೋಳಗಿ, ಸಂದೀಪ್ ಆಯಾ ಜಂಗಲ್, ಶಾಂತಪ್ಪಾ ಜಿಡಾಗ, ಶಶಿಕಾಂತ್ ಮುನ್ನೊಳ್ಳಿ, ಕಾರ್ತಿಕ್ ಕಟ್ಟಿಮನಿ, ಕೃಷ್ಣಪ್ಪ ರಂಜುಣಗಿ, ಬಾಬುರಾವ ಅರುಣೋದಯ, ಮಾದೇವ ಕಾಂಬಳೆ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...