ಕಲಬುರಗಿ | ದಲಿತರಿಗೆ ಕ್ಷೌರ ಮಾಡಲು ನಕಾರ; ಕ್ಷೌರಿಕನ ವಿರುದ್ಧ ಜಾತಿ ದೌರ್ಜನ್ಯ ಪ್ರಕರಣ ದಾಖಲು

Date:

ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಜೂನ್ 27ರಂದು, ಗ್ರಾಮದ ಶಾಲಾ ಮಕ್ಕಳು ಕ್ಷೌರ ಮಾಡಿಸಿಕೊಳ್ಳಲು ಕ್ಷೌರದ ಅಂಗಡಿಗೆ ಹೋಗಿದ್ದರು. ಈ ವೇಳೆ, ದಲಿತ ಮಕ್ಕಳಿಗೆ ಕ್ಷೌರ ಮಾಡಲು ಕ್ಷೌರಿಕ ನಿರಾಕರಿಸಿದ್ದು, ‘ನೀವು ಏನು ಬೇಕಾದರು ಮಾಡಿಕೊಳ್ಳಿ. ನಾನು ದಲಿತರಿಗೆ ಕ್ಷೌರ ಮಾಡುವುದಿಲ್ಲ’ ಎಂದು ಜಾತಿ ದರ್ಪ ಮೆರೆದಿರುವುದಾಗಿ ಆರೋಪಿಸಲಾಗಿದೆ.

ಕ್ಷೌರಿಕನನ್ನು ಕ್ಷೌರ ಮಾಡುವಂತೆ ಮನವೊಲಿಸರು ದಲಿತ ಮುಖಂಡರು ಪ್ರಯತ್ನಿಸಿದ್ದಾರೆ. “ಮಕ್ಕಳಿಗೆ ಕ್ಷೌರ ಮಾಡಿಸಿಕೊಂಡು ಬರುವಂತೆ ಶಿಕ್ಷಕರು ಸೂಚಿಸಿದ್ದಾರೆ. ಅದಕ್ಕಾಗಿ, ಮಕ್ಕಳು ಇಲ್ಲಿಗೆ ಬಂದಿದ್ದಾರೆ. ಮಕ್ಕಳಿಗೆ ಯಾಕೆ ಕ್ಷೌರ ಮಾಡಲ್ಲ. ಮಕ್ಕಳಿಗೆ ಕ್ಷೌರ ಮಾಡಿ” ಎಂದು ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕ್ಷೌರಿಕ, “ನಮ್ಮ ಹಿರಿಯರು ಹೊಲೆಯ-ಮಾದಿಗರಿಗೆ ಕ್ಷೌರ ಮಾಡಿಲ್ಲ. ನಾವೂ ಮಾಡುವುದಿಲ್ಲ” ಎಂದು ಜಾತಿಯ ಅಹಂನಲ್ಲಿ ಮಾತನಾಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗ್ರಾಮದ ದಲಿತ ಯುವಕ ಮಲ್ಲಿಕಾರ್ಜುನ್ ಶೃಂಗೇರಿ, “ಗ್ರಾಮದಲ್ಲಿ ಹಲವು ವರ್ಷಗಳಲ್ಲಿ ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು ನಿರಾಕರಿಸುತ್ತಲೇ ಬಂದಿದ್ದಾರೆ. ದಲಿತರು ಕ್ಷೌರಕ್ಕಾಗಿಯೂ 10 ಕಿ.ಮೀ ದೂರದ ಆಳಂದ ಪಟ್ಟಣ ಅಥವಾ ತಡಕಲ್ ಗ್ರಾಮಕ್ಕೆ ತೆರಳಬೇಕಾಗಿದೆ. ಗ್ರಾಮದ ಪ್ರಬಲ ಜಾತಿಗರ ಪ್ರಭಾವದಿಂದ ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು ನಿರಾಕರಿಸುತ್ತಿದ್ದಾರೆ. ಗ್ರಾಮದಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ. ಆದರೂ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದು ಗ್ರಾಮಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿದ್ದಾರೆ. ದಲಿತರಿಗೆ ಕ್ಷೌರ ಮಾಡುವಂತೆ ಕ್ಷೌರಿಕನಿಗೆ ಸೂಚಿಸಿದ್ದಾರೆ. ಆದರೂ, ಕ್ಷೌರಿಕ ನಿರಾಕರಿಸಿದ್ದು, ಪೊಲೀಸರು ಜಾತಿದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಳಿಕ, ಕ್ಷೌರ ಮಾಡಲು ಕ್ಷೌರಿಕ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ದಲಿತ ಸಮುದಾಯದ ಮುಖಂಡರೊಬ್ಬರು ಕ್ಷೌರಿಕನ ವಿರುದ್ದ ಜಾತಿ ತಾರತಮ್ಯ ಮತ್ತು ನಿಂದನೆ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...