ಕಲಬುರಗಿ | ದಲಿತರ ಓಣಿಗಿಲ್ಲ ನೀರಿನ ಭಾಗ್ಯ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಭೀಮಳ್ಳಿ ಗ್ರಾಮದ ದಲಿತ ಓಣಿಯಲ್ಲಿ ನೀರಿನ ಸೌಲಭ್ಯ ಸಿಕ್ಕಿಲ್ಲ. ಹಿಂದಿನ ಕಾಲಘಟ್ಟದಂತೆ ಪ್ರಸ್ತುತ ದಿನಗಳಲ್ಲಿಯೂ ಕೂಡ ಬಾವಿ ನೀರು ಸೇದುವ ಅನಿವಾರ್ಯತೆ ಎದುರಾಗಿದೆ.

ದಲಿತ(ಮಾದಿಗ ಸಮುದಾಯದ) ಕುಟುಂಬಗಳು ವಾಸವಾಗಿರುವ ಓಣಿಯಲ್ಲಿ ಸುಮಾರು ವರ್ಷಗಳಿಂದ ಕುಡಿಯಲು, ಬಳಸಲು ನೀರಿಲ್ಲ. ಸರ್ಕಾರದಿಂದ ನೀರಿನ ಟ್ಯಾಂಕ್, ಜಲಜೀವನ ಮಷೀನ್ ಮನೆಗೊಂದು ನಳ ಮಾಡಿದ್ದಾರೆ. ಅವುಗಳು ತೋರಿಕೆ ರೂಪದಲ್ಲಿವೆಯೇ ವಿನಃ ಒಂದು ದಿನವೂ ಅದರಲ್ಲಿ ನೀರು ಬಂದಿಲ್ಲ. ಟ್ಯಾಂಕ್‌ಗಳಿಂಗೆ ಪೈಪ್‌ಲೈನ್ ವ್ಯವಸ್ಥೆ ಕೂಡ ಆಗಿಲ್ಲ. ಸುಮನೆ ಕಟ್ಟಿ ಬಿಟ್ಟಿದ್ದಾರೆ ಅಷ್ಟೆ!

“ಬಳಸುವುದಕ್ಕೆ, ಕುಡಿಯುವುದಕ್ಕೆ ನಾವು ಪ್ರತಿನಿತ್ಯ ಬಾವಿಯಿಂದ ನೀರು ಸೇದಿ ಹೊತ್ತು ತರುವಂತಹ ಅನಿವಾರ್ಯತೆ ಎದುರಾಗಿದೆ. ತೆರೆದ ಬಾವಿಯಿಲ್ಲಿ ಕಸಕಡ್ಡಿ, ಮಳೆ ನೀರು ಸೇರಿಕೊಳ್ಳುತ್ತಿದೆ. ಇದರಿಂದ ಬಾವಿಯ ನೀರು ಕಲುಸಿತಕೊಂಡು ಅದೇ ಬಾವಿ ನೀರು ಸೇವಿಸಿದರೆ ರೋಗ ರುಜಿನಗಳು ಹರಡಬಹುದೆನ್ನುವ ಆತಂಕ ಮನೆಮಾಡಿದೆ. ಆದರೆ ದಲಿತರ ಓಣಿ ಅಂದ್ರೆ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷಿಸುತ್ತಾರೆ” ಎಂದು ಭೀಮಳ್ಳಿ ಗ್ರಾಮಸ್ಥರು ಆರೋಪಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇದುವ ಬಾವಿ 1

ಶ್ರೀದೇವಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಎಸ್‌ಸಿ ಜನರ ಬಗ್ಗೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯವಾಗಿದೆ. ನಾವು ಸತ್ತಿದ್ದೇವಾ ಬದುಕಿದ್ದೇವಾ ಎಂದೂ ಕೂಡ ನೋಡುವುದಿಲ್ಲ. ನೀರಿಗಾಗಿ ಬೀದಿ ಬೀದಿ ಅಲೆದು ನೀರು ತರುವ ಪರಿಸ್ಥಿತಿ ಇದೆ. ಅವರು ನೀರು ಕೊಡಲಿಲ್ಲ ಅಂದರೆ ಬಾವಿಯಿಂದ ನೀರು ಸೇದಿ ತರುವಷ್ಟರಲ್ಲಿ ಕೆಲಸದ ಸಮಯ ಮೀರಿ ಹೋಗಿರುತ್ತೆ. ಕೆಲಸ ಬಿಟ್ಟು ಕೂತರೆ ನಮ್ಮ ಹೊಟ್ಟೆ ಬಟ್ಟೆ ಹೇಗೆ ನಡೆಯಬೇಕು” ಎಂದು ಅಧಿಕಾರಿಗಳ, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರಿದರು.

ಸುಗಲಬಾಯಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಮ್ಮ ಮಕ್ಕಳು, ಸೊಸೆಯಂದಿರು ದುಡಿಯಲು ಬಾಂಬೆ, ಪೂನಾ ಹೋಗಿದ್ದಾರೆ. ನಾವು ವಯಸ್ಸಾದವರು ಬಾವಿಯಿಂದ ಹೇಗೆ ನೀರು ಸೇದಿ ತರಬೇಕು. ಅವರಿವರ ಮಕ್ಕಳಿಗೆ ಕೈ ಕಾಲು ಬಿದ್ದು ಒಂದು ಕೊಡ ನೀರು ತಂದು ಕೊಡಿರೆಂದು ಬೇಡಿಕೊಳ್ಳಬೇಕು. ನಮ್ಮ ಓಣಿಗೆ ನೀರಿನ ಸೌಲಭ್ಯ ಕಲ್ಪಿಸಿಕೊಡಿ” ಎಂದು ಮನವಿ ಮಾಡಿದರು.

ಬಾವಿ ನೀರು

ದೂಳಮ್ಮ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಟ್ಯಾಂಕ್ ಮತ್ತು ಜಲಜೀವನ ಮಷೀನ್ ಮನೆಗೊಂದು ನಳ ಮಾಡಿದ್ದಾರೆ. ಆದರೆ ಅದರಲ್ಲಿ ನೀರು ಬರುವುದಿಲ್ಲ. ಪೈಪ್‌ಲೈನ್‌ ವ್ಯವಸ್ಥೆ ಕೂಡ ಸರಿಯಾಗಿ ಆಗಿಲ್ಲ. ನಾಮಕಾವಸ್ತೆಗೆ ನೀರಿನ ಟ್ಯಾಂಕ್ ಕಟ್ಟಿ ಬಿಟ್ಟಿದ್ದಾರೆ. ನಾವು ಬಾವಿ ಮುಂದೆ ಒಬ್ಬರ ಮೇಲೊಬ್ಬರು ಬಿದ್ದು, ನೀರು ಹೊತ್ತು ತರುವ ಪರಿಸ್ಥಿತಿ ಇದೆ. ಎರಡ್ಮೂರು ದಿನಗಳಿಂದ ಶೇಖರಣೆ ಮಾಡಿಟ್ಟ ನೀರನ್ನೇ ಬಳಸುತ್ತಿದ್ದೇವೆ. ನಿತ್ಯ ನೀರು ಸೇದಿ ತರಲು ಆಗುವುದಿಲ್ಲ. ನೀರು ಹೊತ್ತು ತರುವಷ್ಟರಲ್ಲಿ ಕೂಲಿ ಕೆಲಸದ ಸಮಯ ಮೀರಿ ಹೋಗಿರುತ್ತೆ. ಇದೇ ರೀತಿಯಾದರೆ ನಮ್ಮ ಸಾಲ ಸವದ ಹೇಗೆ ಕಟ್ಟಿಕೊಳ್ಳಬೇಕು” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ದೇವದಾರಿಯಲ್ಲಿ ಗಣಿಗಾರಿಕೆಗಿಲ್ಲ ದಾರಿ; ಅನುಮತಿ ನಿರಾಕರಿಸಲು ಅರಣ್ಯ ಸಚಿವ ಖಂಡ್ರೆ ಸೂಚನೆ

ನಾಗಮ್ಮ ಗ್ರಾಮಸ್ಥರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನೀರಿನ ಸಮಸ್ಯೆ ತುಂಬಾ ಕಾಡುತ್ತಿದೆ. ನಾನು ವಯಸ್ಸಾದವಳು ನೀರು ಹೊತ್ತು ತರಲು ಆಗುವುದಿಲ್ಲ. ಯಾರಾದರೂ ನೀರು ತಂದುಕೊಟ್ಟರೆ ಮಾತ್ರ ನನಗೆ ನೀರು ಸಿಗುತ್ತದೆ. ನೀರು ಪ್ರತಿನಿತ್ಯ ಅತೀ ಮುಖ್ಯವಾಗಿ ಬೇಕು. ಅದರಿಂದ ನಮಗೆ ನೀರಿನ ಸವಲತ್ತು ಮಾಡಿಕೊಡಿ” ಎಂದು ಬೇಡಿಕೊಂಡರು.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...