ಕಲಬುರಗಿ | ಕಬ್ಬು ಬೆಳೆ ಹಾನಿ; ಹಂದಿಗಳ ಹಾವಳಿಗೆ ಕಂಗಾಲಾದ ರೈತರು

Date:

ಸಾಕು ಹಂದಿಗಳು ಕಬ್ಬು ಬೆಳೆದ ಜಮೀನುಗಳಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿವೆ. ಹಂದಿಗಳ ಕಾಟದಿಂದ ರೈತರು ಕಂಗಲಾಗಿದ್ದಾರೆ. ಹಂದಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಕಲಬುರಗಿ ಜಿಲ್ಲಾಧಿಕಾರಿಗೆ ರೈತರು ಮನವಿ ಸಲ್ಲಿಸಿದರು.

“ನಾವು ನಮ್ಮ ಗ್ರಾಮದ ಬಹುತೇಕ ಜಮೀನುಗಳಲ್ಲಿ ಕಬ್ಬು ಬೆಳೆಯನ್ನು ಬೆಳೆದಿದೆ. ಈ ಬಾರಿ ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಕಬ್ಬು ಒಣಗಿ ಹೋಗಿದೆ. ಆದರೆ ಕೆಲವು ರೈತರು ಕೊಳವೆ ಬಾವಿ ನೀರು ಉಪಯೋಗಿಸಿಕೊಂಡು ಕಬ್ಬು ಬೆಳೆಯನ್ನು ಕಾಪಾಡಿಕೊಂಡು ಬಂದಿದ್ದಾರೆ” ಎಂದು ಕಲಬುರಗಿ ತಾಲೂಕಿನ ಸೀತನೂರು ಗ್ರಾಮಸ್ಥರು ತಿಳಿಸಿದ್ದಾರೆ.

“ಸಾಕು ಹಂದಿಗಳು ಹಾವಳಿ ಹೆಚ್ಚಾಗಿದ್ದು, ಚೆನ್ನಾಗಿ ಬೆಳೆದಿರುವ ಕಬ್ಬಿನ ಜಮೀನುಗಳಿಗೆ ನುಗ್ಗಿ ಫಸಲವನ್ನು ಹಾಳು ಮಾಡುತ್ತಿವೆ. ಈ ಕುರಿತು ಹಂದಿ ಸಾಕಾಣಿಕೆಗಾರರಿಗೆ ಹಲವು ಬಾರಿ ಮನವಿ ಮಾಡಿದರೂ ಅವರು ಬೇಜವಾಬ್ದಾರಿ ತೋರುತ್ತಿದ್ದಾರೆಯೇ ಹೊರತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಕಬ್ಬು ಬೆಳೆಗಾರರಿಗೆ ಬೇರೆ ದಾರಿ ಕಾಣದೆ ಕಂಗಾಲಾಗಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಂದಿಗಳು ಈಗಾಗಲೇ ಜಮೀನುಗಳಿಗೆ ನುಗ್ಗಿ ಬಹುತೇಕ ಫಸಲನ್ನು ಹಾಳು ಮಾಡಿದ್ದು, ಜಮೀನಿನ ಮಾಲೀಕರು ಹಂದಿ ಹಿಡಿಯುವವರನ್ನು ಕರೆಸಿ ಅವರಿಗೆ ಸಾವಿರಾರು ರೂಪಾಯಿ ನೀಡಿ ಹಂದಿಗಳನ್ನು ಹಿಡಿಸಿದ್ದರೂ ಯಾವುದೇ ಪ್ರಯೋಜನವಾಗದೆ ದಿನದಿಂದ ದಿನಕ್ಕೆ ಬೆಳೆಹಾನಿಯಾಗುತ್ತಿದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ” ಎಂದು ಅವಲತ್ತುಕೊಂಡರು.

“ಸೀತನೂರ್ ಗ್ರಾಮದ ಕಬ್ಬು ಬೆಳೆದ ಜಮೀನುಗಳಲ್ಲಿ ಉಂಟಾದ ಹಾನಿಯನ್ನು ಕಂಡು ಹಿಡಿಯಲು ಒಂದು ತಂಡವನ್ನು ರಚಿಸಲು ಕ್ರಮ ಕೈಗೊಳ್ಳಬೇಕು. ಸದರಿ ತಂಡದಿಂದ ತನಿಖೆ ಕೈಗೊಂಡು ದೃಢೀಕರಣ ನೀಡಿದಲ್ಲಿ ರೈತರಿಗೆ ನ್ಯಾಯಯುತವಾಗಿ ಬರಬೇಕಾದ ಪರಿಹಾರಧನ ಪಡೆಯಲು ಸಹಕಾರಿಯಾಗುತ್ತದೆ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್ ಹೆಸರಿನ ಆಯ್ಕೆ ಪ್ರಕ್ರಿಯೆ ಕೈಬಿಡಲು ಆಗ್ರಹ

“ಹಂದಿಗಳಲ್ಲಿ ಹೆಚ್ಚಾಗಿ ಸಾಕು ಹಂದಿಗಳಾಗಿದ್ದು, ಅದರ ಮಾಲೀಕರು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸುಗುತ್ತಿದ್ದಾರೆ. ಹಾಗಾಗಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಹಂದಿ ಸಾಕಾಣಿಕೆದಾರರ ವಿರುದ್ಧ ಕ್ರಮ ಕೈಗೊಂಡು ಸೂಕ್ತ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಮೀರ ಪಟೇಲ್ ಮಾಲಿ, ಶಿವಯ್ಯ ಸ್ವಾಮಿ, ವೀರಣ್ಣ ಮಲ್ಕೂಡ, ಪೀರ್ ಸಾಬ್ ಜಮಾದಾರ್, ಸಿದ್ದಣ್ಣ ಜಮ್ದಿ, ಮೈಬುಸಾಬ್ ಮಾಲಿ, ರಾಜು ಪೂಜಾರಿ, ಮೌಲಾಸಾಬ್ ಜಮಾದಾರ್, ಸಾಯಬ ಪಟೇಲ್ ಮಾಲಿ, ಶಿವಲಿಂಗಪ್ಪ ಜಮ್ದಿ, ಅಲಿಸಾ ದಂಗಾಪುರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...