ಕಲಬುರಗಿ | ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿದ ದಸಂಸ ಧರಣಿ

Date:

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲೂಕಾ ಸಮಿತಿ ಸೇಡಂ ನೇತೃತ್ವದಲ್ಲಿ ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ ನಡೆಸಿ ಸಹಾಯಕ ಆಯುಕ್ತರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕ ಮಾರುತಿ ಹುಳಗೋಳಕರ ಮಾತನಾಡಿ, ʼಭೂಮಿ ಒಂದು ಉತ್ಪಾದನಾ ಸಾಧನವಾಗಿದ್ದು, ಭೂಮಿ ಉಳ್ಳವರಿಗೆ ಸಾಮಾಜಿಕ ಘನತೆಯನ್ನು ಹಾಗೂ ಆಳುವ ವರ್ಗಗಳ ಸಮಾಜವನ್ನು ನಿಯಂತ್ರಿಸುವ ಅಧಿಕಾರವನ್ನು ನೀಡುತ್ತದೆ. ಆದರೆ ತಲಾತಲಾಂತರಗಳಿಂದ ದಲಿತರನ್ನು ಭೂಮಿ, ನೈಸರ್ಗಿಕ ಸಂಪತ್ತಿನಿಂದ ವಂಚಿಸುತ್ತಲೇ ಬಂದಿದ್ದಾರೆ, ಅಂಬೇಡ್ಕರ್ ಅವರ ಅಂದೋಲನದಿಂದಾಗಿ ದಲಿತ ದಮನಿತರಲ್ಲಿ ಬೆಳೆಯುತ್ತಿರುವ ಸಾಮಾಜಿಕ ಮತ್ತು ವರ್ಗ ಪ್ರಜ್ಞೆಯಿಂದ ಬ್ರಾಹ್ಮಣಶಾಹಿ ಬಂಡವಾಳಶಾಹಿಗಳಿಗೆ ನುಂಗಲಾರದ ತುತ್ತಾಗಿದೆʼ ಎಂದು ಆಕ್ರೋಶ ಹೊರಹಾಕಿದರು.

ʼಕಳೆದ ನಾಲ್ಕು ದಶಕಗಳಿಂದ ದಲಿತರ ಭೂಮಿ ಹಕ್ಕಿಗಾಗಿ ನಡೆಸಿದ ಹೋರಾಟದಲ್ಲಿ ದರಖಾಸ್ತು ಜಮೀನು ಮಂಜೂರು ಮಾಡುವ ಕಾಯ್ದೆ ಜಾರಿಗೆ ತಂದಿದ್ದರು ಸಹ ಸರ್ಕಾರದ ಅಧಿಕೃತ ಅಂಕಿ ಅಂಶಗಳ ಪ್ರಕಾರ ರಾಜ್ಯದ ಒಟ್ಟು ಭೂಮಿಯಲ್ಲಿ ದಲಿತರು ಕೇವಲ ಶೇ11ರಷ್ಟು ಭೂಮಿ ಮಾತ್ರ ಹೊಂದಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“70ರ ದಶಕದಲ್ಲಿ ಬಿ.ಬಸವಲಿಂಗಪ್ಪನವರ ದೂರದೃಷ್ಟಿಯ ಫಲದಿಂದ ಪಿಟಿಸಿಎಲ್ ಕಾಯ್ದೆ ಜಾರಿಗೆ ಬಂದರೂ ಸಹ ಜಾತಿವಾದಿಗಳು ಹಾಗೂ ಅಧಿಕಾರ ಶಾಹಿ ಕುತಂತ್ರದಿಂದ ಸರ್ಕಾರವು ಪಿಟಿಸಿಎಲ್ ಜಮೀನುಗಳ ಪ್ರಕರಣದಲ್ಲಿ ದಲಿತ ಸಮುದಾಯಗಳು ಕೋರ್ಟ್‌ಗೆ ಅಲೆದಾಡಿ ವಂಚನೆಗೆ ಒಳಗಾಗಿದ್ದಾರೆʼ ಎಂದು ದೂರಿದರು.

ʼಫಾರಂ 50, 53, 57ರ ಅಡಿ ಅರ್ಜಿ ಸಲ್ಲಿಸಿದ ಬಗರ್‌ ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು. ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್‌ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಮೂಲಸೌಕರ್ಯ ಒದಗಿಸಬೇಕು’ ಎಂದರು.

ಇದನ್ನೂ ಓದಿ : ಯಾದಗಿರಿ | ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ರಾಜು ಡಿ.ಟಿ, ನರಸಪ್ಪ ಸಕ್ಪಾಲ್, ಅಶೋಕ ಬೇಡಕಪಳ್ಳಿ, ನಾಗೇಶ ದೊಡ್ಡಮನಿ, ಪ್ರವೀಣ ಕುಮಾರ್ ಮಂತ್ರಿ, ಓಂಕಾರ ಸೂರವಾರ, ಗೌತಮಿ ಜಮಾದಾರ, ರಂಗಮ್ಮ ಜಾಪನೂರ, ತುಳಜಮ್ಮ ಆಡಿನ ಮನಿ, ಭಾಗ್ಯಶ್ರೀ ಜಾಪನೂರ, ಮಲ್ಲಮ್ಮ ಆಡಿನ, ಚಂದ್ರಕಲಾ ಕೊಡ ದೂರ, ಶೀಲಾ ಕೇರೋಳ್ಳಿ, ಅನುಸೂಯ ಕೋರವಾರ, ತುಳಜಮ್ಮ ಜಾಪನೂರ, ಮಮತಾ ಜಾಪನೂರ, ಸುನೀತಾ ಆಡಿನ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...