ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದ್ಯಸ ಶಿವಶರಣಪ್ಪ ವಾಡಿ, “ಪದಾಧಿಕಾರಿಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾರ್ಗದರ್ಶನದಂತೆ ನಡೆಯುವ ಕೆಲಸ ಮಾಡಬೇಕು. ದಲಿತ, ಹಿಂದುಳಿದ, ಅಲ್ಪಸಂಖ್ಯಾರ ಆಶಾದಾಯಕ ಸಂಘಟನೆಯಾಗಿ ದಸಂಸ ಮುನ್ನುಗ್ಗುತ್ತಿದೆ. ಈ ಸಂಘಟನೆಗೆ ಕಾರ್ಯಕರ್ತರೇ ಜೀವಾಳ. ಇನ್ನು ಮುಂದೆ ಪ್ರತಿಯೊಂದು ಹಳ್ಳಿಗೂ ಸಂಚರಿಸಿ ಸಂಘಟನೆ ಬಲಿಷ್ಠ ಪಡಿಸುವ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಬೇಕು. ಯುವಕರನ್ನು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಂಘಟಿಸುವ ಉದ್ದೇಶದಿಂದಲೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ” ಎಂದರು.

ಕಲಬುರಗಿ ಸಂಚಾಲಕ ಕಾಶಿನಾಥ್ ಶೆಳ್ಳಗಿ ಇವರ ನೇತೃತ್ವದಲ್ಲಿ ತಾಲೂಕು ಸಮಿತಿ ರಚನೆ ಮಾಡಿ ರವಿಕುಮಾರ್ ಎಂ ಬೇರನಹಳ್ಳಿ ಇವರನ್ನು ತಾಲೂಕು ಸಂಚಾಲಕರಾಗಿ ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ
ಈ ಸಂದರ್ಭದಲ್ಲಿ ಬಸವಲಿಂಗ ಹಾಲು, ದೀಲಿಪ್ ಕುಮಾರ್ ಕಿರಸೌಳಗಿ, ಮಲ್ಲಿಕಾರ್ಜುನ ಹಿಪ್ಪರಗಿ, ಬಸವರಾಜ್ ಮೇಲಿಕೇರಿ, ಅಶ್ವಿನಿ ಬಾರಿಗಿಡ, ಪವಿತ್ರಾ ವಾಡಿ, ಸಂಗೀತಾ, ಗಿರೀಶ್ ಎಂ ಚಟ್ಟೇಕರ್ ಇನ್ನಿತರರು ಭಾಗವಹಿಸಿದ್ದರು.





