ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

Date:

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳರವರ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಸಚಿವ ಪ್ರಿಯಾಂಕ್ ಖರ್ಗೆ ‌ಅವರ ಹೆಸರನ್ನು ತಂದು ಅವರ ರಾಜಿನಾಮೆಗೆ ಒತ್ತಾಯಿಸಿ, ಮನೆಗೆ ಮುತ್ತಿಗೆ ಹಾಕಿರುವ ವಿಪಕ್ಷಗಳ ನಡೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜೇವರ್ಗಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ʼಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಯನ್ನು ಹಿಸಲಾರದೆ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಡವಿದ್ದು ಇದೇ ಬಿಜೆಪಿಗರು. ಅಲ್ಲದೆ ಗೃಹಮಂತ್ರಿ ಅಮಿತ್ ಶಾ, ರಾಜ್ಯ ಸಭೆಯ ಕಲಾಪದಲ್ಲಿ ಮಾತನಾಡುವಾಗ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ನಡೆಸಿದ ಜೇವರ್ಗಿ ಬಂದ್‌ ಕೂಡ ಯಶಸ್ವಿಯಾಗಿದೆ. ಬಿಜೆಪಿಗರು ಸಾಲು ಸಾಲು ಹಗರಣ ಮಾಡಿ ಕೈಯಲ್ಲಿ ಪ್ಲೇಟ್ ಹಿಡಿದುಕೊಂಡು ಪರಪ್ಪನ ಅಗ್ರಹಾರದಲ್ಲಿ ಹಾಕುವ ಅನ್ನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದೀರಿ. ಖರ್ಗೆ ಅವರದ್ದು ಏನಾದರೂ ಹಗರಣಗಳಿವೆಯೇ ತೋರಿಸಿ. ಯಾವ ಕಾರಣಕ್ಕಾಗಿ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಜಿಲ್ಲಾ ಉಸ್ತವಾರಿ ಸಚಿವರ ಮನೆಗೆ ಮುತ್ತಿಗೆ ಹಾಕಿ ಅವರ ಘನತೆಗೆ ದಕ್ಕೆ ತರುವ ಹುನ್ನಾರ ನಡೆಸಲಾಗಿದೆ. ಆ ಪುಂಡರ ಗುಂಪಿನವರ ಮೇಲೆ ಕಾನೂನಿನ ಕ್ರಮ ಜರುಗಿಸಬೇಕು ಇಲ್ಲವೆ ರಾಜ್ಯದ ದಲಿತ ಸಮುದಾಯದ ಬಹಿರಂಗ ಕ್ಷೇಮೆಯಾಚಿಸಬೇಕೆಂದು ರಾಜ್ಯ ಪಾಲರನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಚಂದ್ರಶೇಖರ್ ಹರನಾಳ್. ಶಾಂತಪ್ಪ ಕೂಡಲಗಿ. ಸುಭಾಷ್ ಚನ್ನೂರ್. ಅಯ್ಯಾಳಪ್ಪ ಗಂಗಾಕರ್. ಶಾಂತಪ್ಪ ಯಲಗೋಡ. ಬೆನ್ನಪ್ಪ ಕೊಂಬಿನ. ಚೆನ್ನಪ್ಪ ಮಂದೇವಾಲ. ಕರೆಪ್ಪ ಹಿಪ್ಪರಗಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...