ಕಲಬುರಗಿ | ಪುರಸಭೆ ಸಿಬ್ಬಂದಿ ಯಂಕಪ್ಪರನ್ನು ಮೂಲಹುದ್ದೆಗೆ ವರ್ಗಾಯಿಸಿ: ದಸಂಸ ಆಗ್ರಹ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಯಂಕಪ್ಪ ಇವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಖಂಡನೀಯ ಎಂದು ದಸಂಸ ಮುಖಂಡ ಸಿದ್ದು ಕೆರೂರು ತಿಳಿಸಿದರು.

ಸರಕಾರದ ಆದೇಶದ ಪ್ರಕಾರ ಅವರನ್ನು ಮೂಲ ಹುದ್ದೆಗೆ ಕಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ತಾಲೂಕ ಸಮಿತಿ ಜೇವರ್ಗಿ ವತಿಯಿಂದ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸಲ್ಲಿಸಿ ದಸಂಸ ತಾಲೂಕು ಸಮಿತಿಯ ಸಂಚಾಲಕ ಸಿದ್ದು ಕೆರೂರವರು ಮಾತನಾಡಿ, “ಪುರಸಭೆ ಮುಖ್ಯ ಅಧಿಕಾರಿಗಳಾದ ಶಂಭುಲಿಂಗ ದೇಸಾಯಿ ರವರು. ಸರಕಾರದ ಆದೇಶವನ್ನು ಪಾಲಿಸಲು ವಿಫಲರಾಗಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪುರಸಭೆಯಲ್ಲಿ ಲೋಡರ್ ಆಗಿ ಸರಕಾರದ ನಿಯಮನುಸಾರ ಸೇವೆ ಸಲ್ಲಿಸಬೇಕು ಆದರೆ ಸದರಿ ರವರು ತಮ್ಮ ಮೂಲಹುದ್ದೆ ಬಿಟ್ಟು ಬೇರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರನು ಮೂಲ ಹುದ್ದೆಗೆ ಕಳಿಸಿಕೊಡಬೇಕು. ಅದರಲ್ಲಿ ಕೆಲವರನ್ನು ಅವರ ಮೂಲ ಹುದ್ದೆಗೆ ಕಳಿಸಿದ್ದೀರಿ. ಆದರೆ ಯಂಕಪ್ಪ (ಲೋಡರ್) ಇವರನ್ನು ಇನ್ನೂ ಅವರ ಮೂಲ ಹುದ್ದೆಗೆ ಕಳಿಸಿರುವುದಿಲ್ಲ. ಆದಕಾರಣ ಅವರನ್ನು ಮೂಲ ಹುದ್ದೆಗೆ ಕಳಿಸಬೇಕೆಂದು ಮತ್ತೊಮ್ಮೆ ತಮ್ಮ ಗಮನಕ್ಕೆ ಸಮಿತಿಯು ತರಬಯಸುತ್ತದೆ. ಇಲ್ಲವಾದರೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಬೆಳಗಾವಿ ಅಧಿವೇಶನ | ನೇಕಾರ ಮಾಲೀಕರಷ್ಟೆ ಅಲ್ಲ, ಕೂಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಸಹ ಚರ್ಚೆಗೆ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾ ಸಂ.ಸಂಚಾಲಕ ಶ್ರೀಹರಿ ಕರಕಿಹಳ್ಳಿ, ಶರಣಬಸಪ್ಪ ಲಖಣಾಪೂರ, ಜೈಭೀಮ ನರಿಬೋಳ, ರೇವಣ ಸಿದ್ದಪ್ಪ ಬಿರಾಳ, ಯಶವಂತ ಬಡಿಗೇರ, ಲಕ್ಷ್ಮಣ ಡೊಳ್ಳೆ, ಬಸವರಾಜ ವರ್ಚನಳ್ಳಿ, ಭೀರಲಿಂಗ ಕೆಲ್ಲೂರ, ಶ್ರೀಮಂತ ಕಿಲೆದಾರ, ಸಭಾಷ ಭಂಡಾರಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...