ಕಲಬುರಗಿ | ಅಘೋಷಿತ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡಿ: ಸ್ಲಂ ಜನಾಂದೋಲನದಿಂದ ಸಿಎಂಗೆ ಮನವಿ

Date:

ಕಲಬುರಗಿಯಲ್ಲಿ ಅಘೋಷಿತ ಸ್ಲಂಗಳಾದ ರಾಮ ನಗರ ಭಾಗ-2, ಸಂಜು ನಗರ ಭಾಗ-2 ಮತ್ತು ಯಾದಗಿರಿ ಅಘೋಷಿತ ಸ್ಲಂಗಳಾದ ಮೌನೇಶ್ವರ ನಗರ, ಮದನಪೂರ ಭಾಗ-2, ತಪ್ಪಡಗೇರಾ, ಗಂಗಾನಗರ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರ ಇವರನ್ನು ಅಮಾನತುಗೊಳಿಸಿ ಅತೀ ಶೀಘ್ರವಾಗಿ ಸ್ಲಂ ಎಂದು ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬುಧವಾರ ಕಲ್ಯಾಣ ಕರ್ನಾಟಕ ಉತ್ಸವ ನಿಮ್ಮಿತ್ತ ಕಲಬುರಗಿ ನಗರಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಮಾತನಾಡಿ, ‘ಸುಮಾರು ಮೂರು ವರ್ಷಗಳಿಂದ ಸದರಿ ಸ್ಲಂಗಳನ್ನು ಘೋಷಣೆ ಮಾಡಲು ಕಲಬುರಗಿ ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಕಲಬುರಗಿ ಮತ್ತು ಯಾದಗಿರಿ ಅಘೋಷಿತ ಸ್ಲಂಗಳನ್ನು ಸ್ಲಂ ಎಂದು ಘೋಷಣೆ ಮಾಡಲು ವಿಳಂಬಕ್ಕೆ ಕಾರಣರಾದ ಶ್ರೀಧರ ಸಾರವಾಡ ಮತ್ತು ದೇವಿಂದ್ರಕುಮಾರ ರವರನ್ನು ಕೂಡಲೇ ಅಮಾನತುಗೊಳಿಸುವಂತೆ ಒತ್ತಾಯಿಸಿ ಕಲಬುರಗಿ ಸ್ಲಂ ಬೋರ್ಡ್ ಕಚೇರಿ ಎದುರುಗಡೆ ಆರು ದಿನಗಳಿಂದ ನಿರಂತ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪ.ಜಾ/ಪ.ಪಂ ಅವಲಂಬಿತರಿಗೆ ಸರ್ಕಾರಿ ಹುದ್ದೆ: ಸಚಿವ ಸಂಪುಟ ನಿರ್ಣಯ

ಮನವಿ ಸ್ವೀಕರಿಸಿದ ಸಿಎಮ್ ಸಿದ್ಧರಾಮಯ್ಯನವರು ಆದಷ್ಟು ಬೇಗ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುತ್ತೇವೆಂದು ಭರವಸೆ ನೀಡಿದ ಬಳಿಕ ಅವರ ಆದೇಶದ ಮೇರೆಗೆ ಧರಣಿಯನ್ನು ಹಿಂಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಗೌರಮ್ಮ ಮಾಕಾ, ಯಾದಗಿರಿ ಜಿಲ್ಲಾಧ್ಯಕ್ಷ ಹಣಮಂತ ಶಹಾಪೂರಕರ್,
ಕಾರ್ಯದರ್ಶಿ ಶರಣು ಕಣ್ಣಿ, ಸ್ಲಂ ನಿವಾಸಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...