ಕಲಬುರಗಿ | ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ಅನುದಾನ ನೀಡುವಂತೆ ಒತ್ತಾಯ

Date:

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಾಡಬೇಕೆಂದು ಭಾರತಿಯ ಬೌದ್ಧ ಮಹಾಸಭಾ ಜೇವರ್ಗಿ ತಾಲೂಕು ಸಮಿತಿಯಿಂದ ಆಗ್ರಹಿಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ದಂಡಾಧಿಕಾರಿಗೆ ಮನವಿ ನೀಡಿದ ಕಾರ್ಯಕರ್ತರು ಮಾತನಾಡಿ, “ಚಿತ್ತಾಪುರ ತಾಲೂಕಿನ ಸನ್ನತಿ(ಕನಗನಹಳ್ಳಿ) ಗ್ರಾಮದಲ್ಲಿ ಒಂದು ಮತ್ತು ಮೂರನೇ ಶತಮಾನದ ಶಾಸನಗಳು ದೊರಕಿವೆ. ಸಾಮ್ರಾಟ ಅಶೋಕ ಚಕ್ರವರ್ತಿ ಸಿಂಹಾಸನದ ಮೇಲೆ ಕುಳಿತ ಭಂಗಿ ಮತ್ತು ಅವರ ಪರಿವಾರದ ಶಿಲೆಗಳು ಹಾಗೂ ಐತಿಹಾಸಿಕ ಕುರುಹುಗಳು, ಪಾಳಿ, ಬ್ರಾಹ್ಮಿ ಭಾಷೆಗಳಲ್ಲಿ ಶಾಸನಗಳು ದೊರೆತ್ತಿದ್ದು, ಇವುಗಳ ರಕ್ಷಣೆ ಕಾರ್ಯವಾಗಬೇಕಾಗಿದೆ. ಈಗಾಗಲೇ ಕೋಟಿ ರೂಪಾಯಿ ವೆಚ್ಚದಲ್ಲಿ ಬೌದ್ಧ ವಾಸ್ತು ಶೈಲಿಯ ಮ್ಯೂಸಿಯಂ ಮತ್ತು ಗ್ರಂಥಾಲಯವನ್ನು ನಿರ್ಮಿಸಲಾಗಿದೆ. ಅದರಂತೆ ಅನೇಕ ಕಟ್ಟಡಗಳನ್ನು ಕಟ್ಟಲಾಗಿದ್ದು, ಸ್ವಾಧೀನಪಡಿಸಿಕೊಂಡು ಉದ್ಘಾಟಿಸಬೇಕು” ಎಂದು ಆಗ್ರಹಿಸಿದರು.

“ಕರ್ನಾಟಕದಲ್ಲಿರುವ ಪ್ರಮುಖ ಬೌದ್ಧ ಅವಶೇಷಗಳನ್ನ ಸನ್ನತಿಯ ಬೌದ್ಧ ವಸ್ತುಸಂಗ್ರಹಾಲಯದಲ್ಲಿ ಸಂಗ್ರಹಿಸಬೇಕು. ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿದ್ದರೂ ಅಭಿವೃದ್ಧಿ ಶೂನ್ಯವಾಗಿದೆ. ಇದರ ಜತೆಗೆ ರಚನೆಯಾದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಗಳಿಗೆ ಸರ್ಕಾರ ನೂರಾರು ಕೋಟಿ ರೂಪಾಯಿ ಬಿಡುಗಡೆ ಮಾಡಿ ಅಭಿವೃದ್ದಿ ಮಾಡಿದೆ. ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾತ್ರ ಸರ್ಕಾರ ತಾರತಮ್ಯ ಧೋರಣೆ ತೋರಿದೆ”‌ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲಬುರಗಿ ವಸ್ತು ಸಂಗ್ರಹಾಲಯ ಸೇರಿದಂತೆ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ, ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿಸಬೇಕು” ಎಂದು ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಾಡುನುಡಿ ಸಂಸ್ಕೃತಿ ಬಿಂಬಿಸುವಂತಹ ನಾಡಹಬ್ಬ ದಸರಾ: ಕರಿಯಪ್ಪ ಅರಳಿಕಟ್ಟಿ

ಸೂರ್ಯಕಾಂತ ನಿಂಬಾಳಕರ್, ರಾಜು ಕಪನೂರ, ಎಸ್ ಎಸ್ ತಾವಡೆ, ದಿನೇಶ್‌ ದೊಡ್ಡಮನಿ, ಸಂತೋಷ ಮೇಲಿನಮನಿ, ಮರೆಪ್ಪ ಬಡಿಗೇರ, ಶಾಂತಪ್ಪ ಕೂಡಲಗಿ, ಸುಭಾಷ್ ಚನ್ನೂರ, ಗುರಣ್ಣ ಬಡಿಗೇರ‌ ಐನಾಪೂರ, ತಾಲೂಕು ಅಧ್ಯಕ್ಷ ಮಲ್ಲಣ್ಣ ಕೊಡಚಿ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಬಡಿಗೇರ, ಉಪಾದ್ಯಕ್ಷ ರಾಜಶೇಖರ ಶಿಲ್ಪಿ, ಮಿಲಿಂದ ಸಾಗರ, ಸಿದ್ದು ಕೆರೂರ, ಭೀಮರಾಯ ನಗನೂರ, ಹರಿಚ್ಚಂದ್ರ ಕೊಡಚಿ, ಶಿವಶರಣ ಮಾರಡಗಿ, ರವಿ ಕೂಳಗೇರಿ, ಸಿದ್ರಾಮ ಕಟ್ಟಿ, ಶ್ರೀಹರಿ ಕರಕಳ್ಳಿ, ಸಿದ್ದು ಶರ್ಮಾ, ಯಶವಂತ ಬಡಿಗೇರ, ಸಂತೋಷ ಚನ್ನೂರ, ಸುನಿಲ್ ಚನ್ನೂರ, ಪ್ರಸನ್ ಸಿಂಗೆ, ವಿಶ್ವ ಆಲೂರ, ಸುನೀಲ್ ಬಡಿಗೇರ ಸೇರಿದಂತೆ ಇತರರು ಇದ್ದರು.

ವರದಿ: ವಾಲೆಂಟಿಯರ್- ಮಿಲಿಂದ್ ಸಾಗರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...