ಕಲಬುರಗಿ | ಕಾಂಗ್ರೆಸ್‌ ಭರವಸೆಯಂತೆ ಅಂಗನವಾಡಿ ನೌಕರರ ವೇತನ ಜಾರಿಗೆ ಆಗ್ರಹ

Date:

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನೀಡಿದ್ದ ಭರವಸೆಯಂತೆ ಅಂಗನವಾಡಿ ನೌಕರರಿಗೆ 15,000 ರೂ. ಸಂಬಳ ನೀಡಬೇಕು. ಹಿಂದಿನ ಸರ್ಕಾರ ಘೋಷಿಸಿದ್ದ 1,000 ರೂ. ಹೆಚ್ಚುವರಿ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

“ನಿವೃತ್ತಿ ಹೊಂದಿದ ಅಂಗನವಾಡಿ ನೌಕರರಿಗೆ ನಿವೃತ್ತಿ ಪರಿಹಾರ 2 ಲಕ್ಷ ನೀಡಬೇಕು. ನೌಕರರಿಗೆ ಉತ್ತಮ ಗುಣಮಟ್ಟದ ಹೊಸ ಮೊಬೈಲ್ ಹಾಗೂ ಇಂಟರನಟ್ ಒದಗಿಸಬೇಕು. ಚುನಾವಣೆಗಾಗಿ ಕೆಲಸ ಮಾಡಿದ ಬಿಎಲ್‌ಓ ಕಾರ್ಯಕರ್ತೆಯರಿಗೆ ಗೌರವಧನ ನೀಡಬೇಕು. ಐಸಿಡಿಎಸ್ ಕೆಲಸಗಳನ್ನು ಹೊರತು ಪಡಿಸಿ ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ಅಂಗನವಾಡಿ ನೌಕರರಿಗೆ ನೀಡಬಾರದು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ವಿ.ಜಿ ದೇಸಾಯಿ, “ಸುಮಾರು ದಶಕಗಳಿಂದ ರಾಜ್ಯದ ಬಡಜನರ ನಡುವೆ ಅಂಗನವಾಡಿ ನೌಕರರು ಅಮೂಲ್ಯವಾದ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ನೌಕರರ ಜೀವನಕ್ಕೆ ಪೂರಕವಾದ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿಲ್ಲ. 1975ರಿಂದ ಕೆಲಸ ಮಾಡುತ್ತಿದ್ದರೂ ಇವರನ್ನು ಖಾಯಂ ನೌಕರರು ಎಂದು ಪರಿಗಣಿಸಿಲ್ಲ. ಅವರನ್ನು ಸ್ಕೀಮ್ ನೌಕರರನ್ನಾಗಿ ಮುಂದುವರಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈಗಲಾದರೂ ಅವರನ್ನು ಡಿ ಗ್ರೂಪ್‌ ನೌಕರರೆಂದು ಸರ್ಕಾರ ಪರಿಗಣಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯೆ ನಾಗಮಣಿ, ಲಕ್ಷ್ಮೀ ಕದಲಾಪೂರ, ಶಿವಲೀಲಾ, ಭಾಗೀರತಿ, ತಾಲೂಕು ಅಧ್ಯಕ್ಷೆ ಮಾಹದೇವಿ, ಕಾರ್ಯದರ್ಶಿ ಲಕ್ಷ್ಮೀ ಕಡಚರ್ಲಾ, ನಾಜಿಯಾ, ಜಯಶ್ರೀ, ಶೇಖಮ್ಮ, ಪದ್ಮಾ, ಸರೋಜ, ಭವಾನಿ ಮೊದಲಾದವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...