ಕಲಬುರಗಿ | ಸಾವಿರ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಕೈಬಿಡುವಂತೆ ಆಗ್ರಹ

Date:

ರಾಜ್ಯ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಮಹಿಳೆಯರು ಮಹಾತ್ಮಾಗಾಂಧಿ ಪ್ರತಿಮೆ ‌2 ದಿನಗಳ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುವುದರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಶರಣಗೌಡ ರಾಜ್ಯ ಅಧ್ಯಕ್ಷ ಮಾತನಾಡಿ, “ಕಳೆದ 7 ವಷಗಳಿಂದ ರಾಜ್ಯಾದ್ಯಂತ ಮದ್ಯ ನಿಷೇಧವಾಗಬೇಕೆಂದು ಮಹಿಳೆಯರ ನೇತೃತ್ವದಲ್ಲಿ ಬಹಳಷ್ಟು ವಿಭಿನ್ನ ರೀತಿಯ ಚಳವಳಿಗಳನ್ನು ನಡೆಸುತ್ತಿದ್ದೇವೆ. ಕಳೆದ 4 ವಷಗಳಿಂದ ಅಕ್ರಮ ಮದ್ಯಮಾರಾಟ ನಿಲ್ಲಿಸಲು ಸರ್ಕಾರಗಳ ಮೇಲೆ ಒತ್ತಡ ಹೇರುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ನಾವು ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮೊರೆ ಹೋಗಲಾಗಿ ಉಚ್ಚ ನ್ಯಾಯಾಲಯವೂ ಸಹ ಅಕ್ರಮ ಮದ್ಯಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದೆ. ಆದರೂ ಸಹ ಆಡಳಿತ ಸರ್ಕಾರಗಳು ಆದಾಯದ ಮೂಲ ಹೆಚ್ಚಳ ಮುಂದಿಟ್ಟುಕೊಂಡು ಮಹಿಳೆಯರ ಆಂದೋಲನಕ್ಕೆ ಅಗೌರವ ತೋರಿಸುತ್ತಿವೆ” ಎಂದು ಆರೋಪಿಸಿದರು.

“ಈಗ ಆಡಳಿತದಲ್ಲಿರುವ ಸರ್ಕಾರವು ತನ್ನ ಆದಾಯವನ್ನು ಹೆಚ್ಚಿಸಲು ಮತ್ತು ಜನರಿಗೆ ಇದರಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ನೆಪದಲ್ಲಿ ರಾಜ್ಯದಲ್ಲಿ ಮತ್ತೆ ಸಾವಿರ ಮದ್ಯದಂಗಡಿಗಳಿಗೆ ಪರವಾನಗಿ ನೀಡಲು ಆಲೋಚಿಸುತ್ತಿದ್ದು, 3000 ಜನಸಂಖ್ಯೆಯಿರುವ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಿರುವುದು, 10 ವರ್ಷದ ಹಿಂದಿನ ಪರವಾನಗಿಗಳನ್ನು ನವೀಕರಿಸುವುದು ಹೀಗೆ ಕುಡುಕರ ಸಮಾಜವನ್ನೇ ನಿರ್ಮಿಸಿ ಮಹಿಳೆ ಮತ್ತು ಮಕ್ಕಳ ನೆಮ್ಮದಿ ಕೆಡಿಸಲು ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಹೊಸ ಮದ್ಯದಂಗಡಿ ಪ್ರಸ್ತಾವನೆ ವಿರೋಧಿಸಿ ಮೌನ ಪ್ರತಿಭಟನೆ

“ಸರ್ಕಾರ ಕೂಡಲೇ ಈ ಪ್ರಸ್ತಾಪವನ್ನು ಹಿಂಪಡೆಯಬೇಕು. ಒಂದು ವೇಳೆ ಈ ಪ್ರಸ್ತಾಪ ಹಿಂಪಡೆಯದಿದ್ದರೆ ನಾವು ಮತ್ತೆ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾಧ್ಯಕ್ಷ ಶಿವರೆಡ್ಡಿ, ಅಹಿಂದ ಚಿಂತಕರ ವೇದಿಕೆ ಸೈಬಣ್ಣ ಜಮಾದಾರ್, ನೀಲಮ್ಮ, ನಿರ್ಮಲ, ಈರಮ್ಮ, ರೇಷ್ಮಾ, ಪ್ರಕಾಶ್, ಮಲ್ಲಿಕಾರ್ಜುನ ಜಾನೆ, ಶೃತಿ, ರತ್ನಮ್ಮ ಸೇರಿದಂತೆ ಇರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...