ಕಲಬುರಗಿ | ಬಿಹಾರದ ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡುವಂತೆ ಒತ್ತಾಯ

Date:

ಬಿ ಟಿ ಆ್ಯಕ್ಟ್ 1949 ರದ್ದುಗೊಳಿಸಿ, ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಲು ಒತ್ತಾಯಿಸಿ, ಬುದ್ಧ ಗಯಾದಲ್ಲಿ ನಡೆದಿರುವ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದಿಂದ ಪ್ರತಿಭಟನೆ ನಡೆಸಿದರು.

ಬೌದ್ಧ ಉಪಾಸಕ, ಉಪಾಸಕಿಯರ ಕಲಬುರಗಿ ಜಿಲ್ಲಾ ಸಮಿತಿ, ಸಮಸ್ತ ದಲಿತ ಸಂಘಟನೆಗಳು ಒಗ್ಗೂಡಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಬುದ್ಧ ಘೋಷ ದೇವಿಂದ್ರ ಹೆಗಡೆ ಮಾತನಾಡಿ, “ಆಡಳಿತ ಮಂಡಳಿಯನ್ನು ಸಂಪೂರ್ಣವಾಗಿ ಬೌದ್ಧರಿಗೇ ನೀಡಬೇಕೆಂದು ಒತ್ತಾಯಿಸಿ, ಫೆಬ್ರವರಿ 12ರಿಂದಲೂ ನಿರಂತರ ಅಮರಾಣಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದೇವೆ. ಈ ಹೋರಾಟವನ್ನು ಹತ್ತಿಕ್ಕಲು ನಾನಾ ವಿಧದ ತಂತ್ರಗಳನ್ನು ಅನುಸರಿಸಿದರು. ಆದರೂ ಬೌದ್ಧಭಿಕ್ಕು ಸಂಘ ತನ್ನ ಹೋರಾಟವನ್ನು ತೊರೆಯಲಿಲ್ಲ. ಇದರಿಂದ ಕ್ರೋಧಗೊಂಡ ಬಿಹಾರ ಸರ್ಕಾರ ಮತ್ತು ಕೇಂದ್ರದ ಮೋದಿ ಸರ್ಕಾರ ಫೆಬ್ರವರಿ 27ರ ರಾತ್ರಿ 12ರ ಸುಮಾರಿಗೆ ಸತ್ಯಾಗ್ರಹ ನಿರತ ಬೌದ್ಧ ಬಿಕ್ಕುಗಳ ಮೇಲೆ ಅಮಾನುಷನಾಗಿ ದೌರ್ಜನ್ಯ ಎಸಗಿದ್ದು, ಅಲ್ಲದೆ ಭಿಕ್ಕುಣಿಗಳೊಂದಿಗೂ ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ ರಾತೋರಾತ್ರಿ ಅವರನ್ನು ಬಂಧಿಸಿ ಮಡಿಕಲ್ ಕಾಲೇಜು ಗೇಟ್ ಮುಂದೆ ಬಿಟ್ಟ ಪೊಲೀಸರು ಪರಾರಿಯಾಗಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೃಢಸಂಕಲ್ಪ ಬಿಟ್ಟುಕೊಡದ ಭಂತೇಜಿಗಳು ಅಲ್ಲಿಯೇ ಸತ್ಯಾಗ್ರಹ ಮುಂದುವರೆಸಿದರು. ಇದರಿಂದ ರಾಜಿಗೆ ಬಂದ ಸರ್ಕಾರ ಮಹಾಬೋಧಿ ವಿಹಾರದಿಂದ 2 ಕೀಲೋ ಮೀಟರ್ ದೂರದ ದೋಮೋಹನ ಸ್ಥಳದಲ್ಲಿ ಧರಣಿ ಸತ್ಯಾಗ್ರಹಕ್ಕೆ ಪರವಾನಿಗೆ ನೀಡಿದ್ದರೂ ಅಡ್ಡಿ ಆಂತಂಕಗಳ ನಡುವೆ ಈ ಹೋರಾಟ ಮುಂದೆ ಸಾಗುತ್ತಿದೆ. ಈ ಹೋರಾಟಕ್ಕೆ ದೇಶಾದ್ಯಂತ ಮತ್ತು ವಿಶ್ವದ ನಾನಾ ಭಾಗಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ” ಎಂದು ಹೇಳಿದರು.

“ಬಿ ಟಿ ಆ್ಯಕ್ಟ್ 1949 ರದ್ದುಗೊಳಿಸಿ, ಮಹಾ ಬೋಧಿ ವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಲು ಒತ್ತಾಯಿಸಿ. ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ
ಒಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಬುದ್ಧನ ಅನುಯಾಯಿಗಳು ದೇಶಾದ್ಯಂತ ತೀವ್ರವಾದ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಬಸ್‌ನಲ್ಲಿ ಅತ್ಯಾಚಾರಕ್ಕೆ ಯತ್ನ; ಮೂವರ ಬಂಧನ

ಈ ಸಂದರ್ಭದಲ್ಲಿ ಮರೆಪ್ಪ ಹಳ್ಳಿ, ಹಣಮಂತ ಯಳಸಂಗಿ, ಸುರೇಶ ಮಂಗನ್, ಶಾಂತಪ್ಪ ಕೂಡಲಗಿ, ಸೂರ್ಯಕಾಂತ ನಿಂಬಾಳಕ‌ರ್,
ಸಂತೋಷ ಮೇಲಿನಮನಿ, ಅರ್ಜುನ ಭದ್ರೆ, ಬಸವರಾಜ ಬೆಣ್ಣೂರ, ಹಣಮಂತ ಬೋಧನರ್ಕ, ದಿನೇಶ ದೊಡ್ಡಮನಿ, ದಯಾನಂದ ದೊಡ್ಡಮನಿ, ಸೋಮಶೇಖರ ಮೇಲ್ಮನಿ, ದೇವಿಂದ್ರ ಸಿನೂರ, ಲಕ್ಷ್ಮೀಕಾಂತ ಹುಬಳಿ, ದೇವೆಂದ್ರ ಶಳ್ಳಗಿ, ಮಲ್ಲಪ್ಪ ಹೊಸ್ಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...