ಕಲಬುರಗಿ | ಡೆಂಘೀ ಹಾವಳಿ; ಅಗತ್ಯ ಕ್ರಮಕ್ಕೆ ಸಾರ್ಜನಿಕರ ಒತ್ತಾಯ

Date:

ಕಲಬುರಗಿ ಜಿಲ್ಲೆಯಲ್ಲಿ ಡೆಂಘೀ ಹಾವಳಿ ದಿನೇ ದಿನೆ ವ್ಯಾಪಕವಾಗುತ್ತಿದ್ದು, ದಿನ ಬೆಳಗಾದರೆ ವೈದ್ಯರು, ಶಾಸಕರು, ಮುಖ್ಯಮಂತ್ರಿಗಳು ಟಿವಿ ಮಾಧ್ಯಮ, ಪತ್ರಿಕೆಗಳ ಮೂಲಕ ಡೆಂಘೀ ಜ್ವರದ ಕುರಿತು ಸಲಹೆ ಸೂಚನೆ ನೀಡುತ್ತಿರುವುದನ್ನು ಕಾಣುತ್ತೇವೆ.

ಬಹುತೇಕ ಹಳ್ಳಿ, ಗ್ರಾಮ, ನಗರ ಪ್ರದೇಶಗಳಲ್ಲಿ ಸುಮಾರು ಕಡೆ ಮಳೆನೀರು ಮಡುಗಟ್ಟಿ ನಿಂತಿರುವುದು, ಕೊಳೆತು ನಾರುತ್ತಿರುವ ತೆರೆದ ಚರಂಡಿಗಳ ಮಧ್ಯ ಜನರು ಬದುಕುತ್ತಿರುವುದು ವಾಸ್ತವ ಸತ್ಯವಾಗಿದೆ. ಆದರೆ ಗ್ರಾಮ ಅಭಿವೃದ್ಧಿ ಅಧಿಕಾರಿಗಳು, ಜನಪ್ರತಿನಿಧಿಗಳು, ನಗರ ಅಭಿವೃದ್ಧಿ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸುತ್ತಿರುವುದು ದುರಂತವೇ ಸರಿ.

ಡೆಂಘೀ ಹಾವಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 2024ರಿಂದ ಜುಲೈ 23ರವರೆಗೆ ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೈನಂದಿನ ಡೆಂಘೀ ಪ್ರಕರಣಗಳ ವಿವರದ ಪ್ರಕಾರ ರಾಜ್ಯದಲ್ಲಿ ಒಟ್ಟು 1,03,921ರಷ್ಟು ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 15,101 ಪ್ರಕರಣಗಳು ದೃಢಪಟ್ಟಿವೆ. 640 ಪ್ರಕರಣಗಳು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಬಿಬಿಎಂಪಿ, ಶಿವಮೊಗ್ಗ, ಧಾರವಾಡ, ಹಾವೇರಿ, ಮೈಸೂರು, ಹಾಸನ ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ ಡೆಂಘೀ ಪ್ರಕರಣದಿಂದ ಹತ್ತು ಮಂದಿ ಸಾವ್ವನ್ನಪಿರುವುದು ದೃಢವಾಗಿದೆ.

ಡೆಂಘೀ ಹಾವಳಿ

ಕಲಬುರಗಿ ಡಿಎಚ್‌ಒ ಡಾ. ರತಿಕಾಂತ ಸ್ವಾಮಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಜನವರಿಯಿಂದ ಜುಲೈ 23ರವರೆಗಿನ ಮಾಹಿತಿ ಪ್ರಕಾರ ಕಲಬುರಗಿ ಜಿಲ್ಲೆಯಲ್ಲಿ 3,167
ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, 323 ಪ್ರಕರಣಗಳು ದೃಢಪಟ್ಟಿವೆ. ಎರಡು ಪ್ರಕರಣಗಳು ಆಸ್ಪತ್ರೆಯಲ್ಲಿ ದಾಖಲಾಗಿವೆ. ಆದರೆ ಜಿಲ್ಲೆಯ ಡೆಂಘೀಯಿಂದ ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಭಾರೀ ಮಳೆ; ಹೊಸೂರಿನ ಆಸ್ಪತ್ರೆ ಕಾಂಪೌಂಡ್ ಕುಸಿತ 

“ಡೆಂಘೀ ಜ್ವರ ವ್ಯಾಪಕವಾಗಿ ಹರಡುವ ಮೊದಲೇ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯಲು ಅವಕಾಶ ಮಾಡಿಕೊಡಬೇಕು. ಜತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...