ಕಲಬುರಗಿ | ದೇವನಹಳ್ಳಿ ಭೂವಿವಾದ : ರೈತರ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಲಿ

Date:

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ರೈತರು ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ನ್ಯಾಯ ದೊರಕಿಸಿ ಕೊಡಬೇಕು ಎಂದು ಎದ್ದೇಳು ಕರ್ನಾಟಕ ಕಲಬುರಗಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ದೇವನಹಳ್ಳಿಯ ಭೂ ವಿವಾದ ಇದೀಗ ರಾಜ್ಯ ರಾಜಕೀಯದ ದಿಕ್ಕು ತಿರುಗಿಸುತ್ತಿರುವ ಇತ್ತೀಚಿನ ಬೆಳವಣಿಗೆಯಾಗಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳಲಿರುವ ತೀರ್ಮಾನಕ್ಕೆ ಇಡೀ ರಾಜ್ಯದ ಕಣ್ಣುಗಳು ನೆಟ್ಟಿವೆ. ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಭೂಮಿಯನ್ನು ಕೈಕೊಳ್ಳುವ ನಿರ್ಧಾರ ವಿರುದ್ಧ ರೈತರು ಹಾಗೂ ನಾಗರಿಕ ಚಳವಳಿಗಳು ಒಟ್ಟಾಗಿ ಬಿರುಸಾದ ವಿರೋಧ ವ್ಯಕ್ತಪಡಿಸುತ್ತಿವೆ. ಇದಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಜಿಲ್ಲಾ ಸಂಚಾಲಕರು ರಾಜೇಂದ್ರ ರಾಜವಾಳ, ಅಬ್ದುಲ್ ಖಾದರ್, ಲಕ್ಷ್ಮಣ್ ಮಂಡಲಗೇರಾ ಅವರು ಜಂಟಿ ಪ್ರಕಟಣೆ ಮೂಲಕ ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ ರೈತರ ಪರ ನಿಂತು ಭೂಹಕ್ಕು ರಕ್ಷಿಸಬೇಕಿದೆ. ಇಲ್ಲದಿದ್ದರೆ ನಂಬಿಕೆ ಪತನವಾಗುವುದು ಅನಿವಾರ್ಯ. ಇದೇ ಭೂ ಯೋಜನೆಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ನೋಟೀಸ್ ಮತ್ತು ಇದೀಗ ಕಾಂಗ್ರೆಸ್ ಸರ್ಕಾರ ಅದೇ ಮಾರ್ಗವನ್ನು ಅನುಸರಿಸುತ್ತಿರುವುದು ಜನರಲ್ಲಿ ಗೊಂದಲ ಮತ್ತು ಆಕ್ರೋಶ ಉಂಟುಮಾಡಿದೆ. ಅಧಿಕಾರದಿಂದ ದೂರವಿದ್ದಾಗ ರೈತರ ಪರ ನಿಂತಿದ್ದ ಪಕ್ಷ ಈಗ ಕಂಪನಿಗಳ ಪರವಾಗಿ ನಿಂತಿರುವುದು ಖಂಡನೀಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರೈತಪಕ್ಷೀಯ ತೀರ್ಮಾನ ಮಾಡಿ ಜನನಂಬಿಕೆ ಉಳಿಸಬೇಕು. ಲಾಭದಾಳುಗಳ ಒತ್ತಡಕ್ಕೆ ಮಣಿದು ನೈತಿಕ ಪತನವನ್ನೇ ಆಹ್ವಾನಿಸುವುದು ಸರ್ಕಾರದ ಮುಂದೆ ಇರುವ ಎರಡು ನಿರ್ಧಾರಗಳು. ಈ ತೀರ್ಮಾನವು ಕೇವಲ ದೇವನಹಳ್ಳಿ ಮಟ್ಟಿಗೆ ಸೀಮಿತವಲ್ಲ; ಇಡೀ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧದ ಭಾರಿ ಪ್ರತಿಕ್ರಿಯೆಗೆ ಕಾರಣವಾಗುವ ಸಾಧ್ಯತೆ ಇದೆ’ ಎಂದು ಹೇಳಿದರು.

‘ಸಿದ್ದರಾಮಯ್ಯನವರು ರೈತಪಕ್ಷೀಯ ತೀರ್ಮಾನ ಕೈಗೊಂಡರೆ, ಅದು ಕೇವಲ ಹೋರಾಟಗಾರರಿಗೆ ಸಿಹಿ ಸುದ್ದಿ ಮಾತ್ರವಲ್ಲ;
ಜನತೆಯ ವಿಶ್ವಾಸಕ್ಕೆ ತಕ್ಕ ಪ್ರತಿ ಉತ್ತರವೂ ಆಗುತ್ತದೆ. ಇಲ್ಲದಿದ್ದರೆ ಈ ನಿರ್ಧಾರವು ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೂ ದೊಡ್ಡ
ಧಕ್ಕೆಯಾಗಿ ಪರಿಣಮಿಸಲಿದೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...