ಕಲಬುರಗಿ | ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಟಗಾರರ ಶ್ರಮವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

Date:

ಕೇಂದ್ರದ ಮಾಜಿ ಗೃಹಮಂತ್ರಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ರ ದಿಟ್ಟತನದ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ಪ್ರದೇಶ ಭಾರತ ಒಕ್ಕೂಟ ಸೇರಲು‌ ಅನುಕೂಲವಾಗಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ
ಉತ್ಸವ ಹಾಗೂ ಸಾಂಸ್ಕೃತೀಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ರಮಾನಂದ ತೀರ್ಥ, ಬಸಪ್ಪ ಸಜ್ಜನಶೆಟ್ಟಿ, ಶರಣಗೌಡ ಇನಾಮದಾರ ಸೇರಿದಂತೆ ಅನೇಕ ಹೋರಾಟಗಾರರ ಶ್ರಮದಿಂದ ಇಂದಿನ ಕಲ್ಯಾಣ ಕರ್ನಾಟಕ ಅಭಿವೃದ್ದಿಯಾಗುತ್ತಿದೆ. ರಾಜ್ಯಸಭೆ ವಿರೋಧಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಧರ್ಮಸಿಂಗ್ ಅವರ ಯಶಸ್ಸಿನಿಂದ 371(ಜೆ) ಜಾರಿಗೊಳಿಸಿದ್ದಾರೆ. ಇದರ ಪ್ರತಿಫಲವಾಗಿ ನಾನು ತಹಶೀಲ್ದಾರ್ ಆಗಿ ನೇಮಕವಾಗಿದ್ದೇನೆ. ಕಡ್ಡಾಯವಾಗಿ ಪ್ರತಿಯೊಬ್ಬರೂ ಶಿಕ್ಷಣ ಕಲಿಯಬೇಕು. ತಮ್ಮ ಎಲ್ಲ ಮಕ್ಕಳನ್ನೂ ಶಾಲೆಗೆ ಕಳುಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿ, “ಮುಂಬಡ್ತಿಯಲ್ಲಿ ದೋಷಗಳು ಇರುವುದರಿಂದ 371(ಜೆ) ಕಾಯ್ದೆಯಲ್ಲಿ ತಿದ್ದುಪಡಿ ಮಾಡಬೇಕಾಗಿದೆ” ಎಂದರು.

ಇದೇ ವೇಳೆ ಕ್ಷೇತ್ರ ಶಿಕ್ಷಣ ಇಲಾಖೆಯ ಮಲಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗೀತಾ ಯಡ್ರಾಮಿ, ಆಶಾ ಕಾರ್ಯಕರ್ತೆ ವಿಜ್ಜುಬಾಯಿ, ಪಿಡಬ್ಲ್ಯೂಡಿ ಇಲಾಖೆಯ ಮಹ್ಮದ್ ಮೌಸೀನ್ ಅವರನ್ನು ಉತ್ತಮ ಸರ್ಕಾರಿ ನೌಕರರೆಂದು ಸನ್ಮಾನಿಸಿ ಗೌರವಿಸಿದರು. ‌

ಈ ಸುದ್ದಿ ಓದಿದ್ದೀರಾ? ಮಂಡ್ಯ | ನಗರಸಭೆಯ ನಿರ್ಲಕ್ಷ್ಯಕ್ಕೆ ಮುಚ್ಚಿದ ಶೌಚಾಲಯ; ಸಾರ್ವಜನಿಕರ ಪರದಾಟ

ತಾ.ಪಂ ಇಒ ಆಕ್ರಂ ಪಾಶಾ, ಪಿಎಸ್‌ಐ ಚಂದ್ರಾಮಪ್ಪ, ತಾಲೂಕಿನ ವಿವಿಧ ಅಧಿಕಾರಿಗಳಾದ ಪಂಡಿತ್ ಸಿಂಧೆ, ಶಶಿಧರ ಬಿರಾದಾರ್, ಸವಿತಾ ಗೋಣಿ, ವಿಜಯಕುಮಾರ ಬಡಿಗೇರ, ಮಲ್ಲಿಕಾರ್ಜುನ ಸೇಡಂ, ಪ್ರಲ್ಹಾದ ವಿಶ್ವಕರ್ಮ, ಅಶ್ವಥನಾರಾಯಣ ಕುಲಕರ್ಣಿ,
ಸುನಿಲ ಯನಗುಂಟಿಕರ್, ಲಕ್ಷ್ಮೀನಾರಾಯಣ, ವಿಠಲ ಬಂಡಗಾರ ಸೇರಿದಂತೆ ಇತರರು ಇದ್ದರು.

ವರದಿ : ಸಂತೋಷಕುಮಾರ್‌ ಕಟ್ಟಿಮನಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...