ಕಲಬುರಗಿ | ಕೆಲಸದಿಂದ ಕೈಬಿಟ್ಟ ಹೊರಗುತ್ತಿಗೆ ನೌಕರರ ಮರು ಸೇರ್ಪಡೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

Date:

ಜೇವರ್ಗಿ ಪುರಸಭೆಯಲ್ಲಿ ಸುಮಾರು ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದಿಂದ ಜಂಟಿಯಾಗಿ ಕಲಬುರಗಿ ಮಿನಿ ವಿಧಾನಸಭೆ ಎದುರುಗಡೆ ಧರಣಿ ನಡೆಸುತ್ತಿದೆ.

ʼಕೆಲಸದಿಂದ ಕೈಬಿಟ್ಟ ನೌಕರರನ್ನು ಪುನಃ ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಕು. ಮುಂಬಡ್ತಿಯಲ್ಲಿ ಸೇವಾ ಹಿರಿತನ ಮತ್ತು ಅನುಭವ ಪರಿಗಣಿಸದೆ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ನೌಕರರನ್ನು ಕೆಲಸದಿಂದ ತೆಗೆದಿರುವ ಅಧಿಕಾರಿಗಳನ್ನು ಕೂಡಲೇ ಅಮಾನತ್ತುಗೊಳಿಸಬೇಕುʼ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ತಾಲ್ಲೂಕು ಸಂಚಾಲಕ ಸಿದ್ರಾಮ ಕಟ್ಟಿ ಮಾತನಾಡಿ, ʼಜೇವರ್ಗಿ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ನೌಕರರನ್ನು ಎರಡ್ಮೂರು ವರ್ಷಗಳಿಂದ ಸೇವಾ ಭದ್ರತೆ ಸೇರಿದಂತೆ ಇತರೆ ಸೌಲಭ್ಯ ಒದಗಿಸದೆ ದುಡಿಸಿಕೊಳ್ಳುತ್ತಿರುವ ಅಧಿಕಾರಿ ಶ್ರೀನಿವಾಸ ಸೂರ್ಯನ್ ಹಾಗೂ ಖಾಯಂ ಮತ್ತು ಹೊರಗುತ್ತಿಗೆ ನೌಕರರ ಸೇವಾ ಅವಧಿಯ ಮಾಹಿತಿಯನ್ನು ಸರಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿರುವ ಅಧಿಕಾರಿ ಪೀರಶೆಟ್ಟಿ ಅವರನ್ನು ತಕ್ಷಣ ಅಮಾನತ್ತುಗೊಳಿಸಬೇಕುʼ ಎಂದು ಒತ್ತಾಯಿಸಿದರು.

ʼ10 ಜನ ನೀರು ನಿರ್ವಾಹಕರ ಬಾಕಿ ವೇತನ ತಕ್ಷಣ ಪಾವತಿಸುವುದು ಹಾಗೂ ಎರಡು ವರ್ಷದಿಂದ ನೀರು ನಿರ್ವಾಹಕರಾಗಿ ಕೆಲಸ ಮಾಡಿರುವ ಶ್ರವಣಕುಮಾರ, ಬಲರಾಮ ಎಂಬ ಇಬ್ಬರ ಬಾಕಿ ವೇತನ ತಕ್ಷಣ ಪಾವತಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹೊಟ್ಟೆ ನೋವು; ಕುರಿ ಹೇನಿನ ಔಷಧಿ ಕುಡಿದು ಮಹಿಳೆ ಸಾವು

ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಶಿವಕುಮಾರ ಹೆಗಡೆ, ಸಂಗಣ್ಣ ಹೊಸಮನಿ, ಮಹೇಶ ಕ್ಷತ್ರಿ, ಶ್ರೀಹರಿ ಕರಕಳ್ಳಿ, ಸಿದ್ದು ಕೆರೂರ, ಶರಣಬಸಪ್ಪ ಲಖಣಾಪೂರ, ಜೈಭೀಮ್ ನರಿಬೋಳ‌ ಸೇರಿದಂತೆ ಮತ್ತಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...