ಕಲಬುರಗಿ | ಮುಂದುವರೆದ ಧರಣಿ ಸತ್ಯಾಗ್ರಹ; ಅತಿವೃಷ್ಟಿ ಹಾನಿಗೆ ಶೀಘ್ರ ಪರಿಹಾರಕ್ಕೆ ಪ್ರಗತಿಪರರ ಆಗ್ರಹ

Date:

ಕಲಬುರಗಿ ಜಿಲ್ಲೆಯ ರೈತರ ಬೇಡಿಕೆಗಳಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ, ನಗರದ ಜಗತ್ ಸರ್ಕಲ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ.

ಜಿಲ್ಲೆಗೆ ತಕ್ಷಣವೇ ಬರಗಾಲ ಘೋಷಣೆ, ಅತಿವೃಷ್ಟಿಯಿಂದ ಉಂಟಾದ ಹಾನಿಗೆ ತುರ್ತು ಪರಿಹಾರ, ಹಿಂಗಾರು ಬಿತ್ತನೆಗಾಗಿ ಉಚಿತವಾಗಿ ಬೀಜ ಮತ್ತು ರಸಗೊಬ್ಬರ ವಿತರಣೆ, ಅತಿವೃಷ್ಟಿಯಿಂದ ಬೆಳೆ ನಾಶವಾದ ಪರಿಣಾಮ ದಿನೇ ದಿನೇ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಸಾಲ ಮನ್ನಾ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ರೈತ ಸಂಘಟನೆಗಳ ಮುಖಂಡರು ಮತ್ತು ಸಮಾಜದ ಪ್ರಗತಿಪರ ಚಿಂತಕರು ಮನವಿ ಮಾಡಿದ್ದಾರೆ.

ಧರಣಿಯಲ್ಲಿ ಮಾತನಾಡಿದ ಶಿವುಪ್ರಭು ಪಾಟೀಲ್, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು, ರೈತರ ಸಂಕಷ್ಟಗಳಿಗೆ ಸರ್ಕಾರ ಕಿವಿಗೊಡದಿರುವುದನ್ನು ಖಂಡಿಸಿದರು ಮತ್ತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

KPRS ಜಿಲ್ಲಾಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ, KRRS ಅಧ್ಯಕ್ಷ ದಯಾನಂದ ಪಾಟೀಲ, ಉಪಾಧ್ಯಕ್ಷ ಉಮಾಪತಿ ಪಾಟೀಲ್, ಭೀಮಾಶಂಕರ ಮಾಡಿಯಾಳ (AIKS), ಮೌಲಾ ಮುಲ್ಲಾ (AIKS), KRRHS ಅಧ್ಯಕ್ಷ ಮಹಾಂತ ಗೌಡಾ ನಂದಿಹಳ್ಳಿ ಮತ್ತು ನಾಗಲಿಂಗಯ್ಯ ಮಠಪತಿ (ಪ್ರಗತಿಪರ ಚಿಂತಕರು ಮತ್ತು ಬಸವಣ್ಣನ ಅನುಯಾಯಿ) ಧರಣಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಇದನ್ನೂ ಓದಿ: ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ಇದೆ ವೇಳೆ ರೈತ ಮಹಿಳೆಯರಾದ ಸುಶೀಲಾ ಬಿ ಮತ್ತು ಶಾಂತಾಬಾಯಿ ರಾಠೋಡ, ಜೊತೆಗೆ ಕರೆಪ್ಪಾ ಕರಗೋಂಡ ಮತ್ತು ಶರಣ ಗೌಡ ಪಾಟೀಲ್ ಭಣಮಗಿ ಕೂಡ ಸತ್ಯಾಗ್ರಹ ವೇದಿಕೆಯಲ್ಲಿ ಹಾಜರಾಗಿ ಬೆಂಬಲ ಸೂಚಿಸಿದರು.

ರೈತರ ಹೋರಾಟ ಮುಂದುವರಿದಂತೆ, ಜಿಲ್ಲೆಯಾದ್ಯಂತ ಸರ್ಕಾರದ ವಿರುದ್ಧ ಅಸಮಾಧಾನದ ಧ್ವನಿ ಗಟ್ಟಿಯಾಗುತ್ತಿದೆ. ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...