ಕಲಬುರಗಿ | ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೆ ಡಿಎಂಎಸ್‌ಎಸ್‌ ಆಗ್ರಹ

Date:

ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್‌)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್‌ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ‌ಸಲ್ಲಿಸಿದರು.

ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, “ನ್ಯಾಯಮೂರ್ತಿ ಸದಾಶಿವ ಆಯೋಗದ ಆಸೆಯಂತೆ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಪರಿಶಿಷ್ಟ ಜಾತಿ ಜನಾಂಗಕ್ಕೆ ಒಳಮೀಸಲಾತಿ ನೀಡಿದರೆ ಸಮಾನತೆಗೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸಂವಿಧಾನದ ಆಶಯದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಸಾರವಾಗಿ ರಾಜ್ಯ ಸರ್ಕಾರವು ‌ಒಳಮೀಸಲಾತಿ ಜಾರಿ ಮಾಡುವುದಕ್ಕೆ ಯಾವುದೇ ತರಹದ ಕಾನೂನು ಉಲ್ಲಂಘನೆಯಾಗುವುದಿಲ್ಲವೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುತ್ತದೆ” ಎಂದು ತಿಳಿಸಿದರು.

“ಶಹಾಬಾದ್ ತಾಲೂಕಿನ ದಲಿತ ಮಾದಿಗ ಸಮನ್ವಯ ಸಮಿತಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇವೆ. ಸುಪ್ರಿಂ ಕೋರ್ಟ್‌ನ ಈ ಐತಿಹಾಸಿಕ ನಿರ್ಣಯವನ್ನು ಸ್ವಾಗತಿಸುತ್ತೇವೆ ಮತ್ತು ರಾಜ್ಯದಲ್ಲಿರುವ ಮಾದಿಗ ಸಮಾಜದ ಹೋರಾಟಗಾರರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸಬೇಕೆಂದು ಮೂರು ದಶಕಗಳ ಸತತವಾಗಿ ಹೋರಟ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಮಾದಿಗ ಸಮಾಜದ ಜನಾಂಗವಿದ್ದು, ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಯಾಗದ ಹೊರತು ಮಾದಿಗ ಸಮಾಜಕ್ಕೆ ನ್ಯಾಯ ದೊರಕಲಾರದು. ವರ್ಷಗಳಲ್ಲಿ ಸಾವು-ನೋವುಗಳಾಗಿವೆ ಮಾದಿಗ ಸಮಾಜದ ಸಹೋದರರ ರಕ್ತ ಹರಿದಿದೆ. ಹೋರಾಟವನ್ನು ನಿರಂತರವಾಗಿ ಮಾಡುತ್ತ ಬಂದಿರುತ್ತೇವೆ. ಅದರ ಪ್ರತಿಫಲವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಣಯವನ್ನು ಪ್ರಕಟಿಸುವ ಮೂಲಕ ಮಾದಿಗ ಸಮಾಜಕ್ಕೆ ನ್ಯಾಯ ನೀಡಿದೆ ಮತ್ತು ಹೋರಾಟಕ್ಕೆ ಬೆಲೆ ಬಂದಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

“ಕರ್ನಾಟಕ ರಾಜ್ಯದಲ್ಲಿರುವ ಹಲವಾರು ಇಲಾಖೆಯ ನೇಮಕಾತಿ ಹುದ್ದೆಗಳನ್ನು ಕೂಡಲೇ ತಡೆಹಿಡಿಯಬೇಕು. ಒಂದುವೇಳೆ ಒಳಮೀಸಲಾತಿ ಸುಗ್ರಿವಾಜ್ಞೆ ವಿಳಂಬವಾದಲ್ಲಿ ರಾಜ್ಯಾದ್ಯಂತ ದಲಿತ ಮಾದಿಗ ಸಮನ್ವಯ ಸಮಿತಿ ಸಂಘಟನೆ ಪರವಾಗಿ ತೀವ್ರ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಡಿಎಂಎಸ್‌ಎಸ್‌ ಕಾರ್ಯಾಧ್ಯಕ್ಷ ಶರಣು ಬಿ ಪಗಲಾಪೂರ, ಜಿಲ್ಲಾ ಪ್ರತಿನಿಧಿ ರವಿ ಬೆಳಮಗಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ಟಿ ರಾಯಚೂರಕ್, ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...