ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿ ದಾನಿಗೆ ಪ್ರಭಾರ ಮುಖ್ಯ ಶಿಕ್ಷಕ ಸುರೇಶ ಅವರು ಕೃತಜ್ಞತೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ರಾಮತೀರ್ಥ ಶಾಲೆಗೆ ಸ್ಥಳೀಯ ದಾನಿಗಳು ಹಾಗೂ ಶಿಕ್ಷಣ ಪ್ರೇಮಿಗಳಾದ ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಪಾಟೀಲ್ ಅವರು ಶಾಲೆಯ ಅಭಿವೃದ್ಧಿಗಾಗಿ ಅನೇಕ ಕೊಡುಗೆಗಳನ್ನು ನೀಡುತ್ತ ಬಂದಿದ್ದಾರೆ” ಎಂದು ಶ್ಲಾಘಿಸಿದರು.

“2023-24ನೇ ಸಾಲಿನಲ್ಲಿ ಲಕ್ಷ್ಮೀಕಾಂತ ರೆಡ್ಡಿ ಪೊಲೀಸ್ ಪಾಟೀಲ್ ಅವರು ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮುರಮ್(ಮಣ್ಣು) ಹಾಕಿಸಿ ಮೈದಾನದಲ್ಲಿ ಸುಂದರವಾದ ಪರಿಸರ ನಿರ್ಮಿಸಲು ಹಾಗೂ ಶಾಲೆಯು ಸುಂದರವಾಗಿ ಕಾಣಲು ಮುಖ್ಯ ಪಾತ್ರ ವಹಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು
ದಾನಿಗಳ ಕೊಡುಗೆಗೆ ಶಾಲೆಯ ಶಿಕ್ಷಕರಾದ ವಿಶ್ವನಾಥ, ವಿಶ್ವ ಕೊರಬ್, ಮಲ್ಲಿಕಾರ್ಜುನ, ಅಂಬಿಕಾ, ಭಾಗ್ಯಲಕ್ಷ್ಮೀಯವರು ಸಂತಸ ವ್ಯಕ್ತಪಡಿಸಿದ್ದಾರೆ.





