ಕಲಬುರಗಿ | ವೃದ್ಧೆ ಕೊಲೆ ಪ್ರಕರಣ : ಅಪ್ರಾಪ್ತ ಬಾಲಕ ಸೇರಿ ಐವರ ಬಂಧನ

Date:

ಚಿತ್ತಾಪುರ ತಾಲ್ಲೂಕಿನ ಪೇಠಶಿರೂರ ಗ್ರಾಮದಲ್ಲಿ ನಡೆದಿದ್ದ ಒಂಟಿ ವೃದ್ಧೆ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಅಪ್ರಾಪ್ತ ಬಾಲಕ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೇಠಶಿರೂರ ಗ್ರಾಮದ ತಾನಾಜಿ ಮಾನಪ್ಪ ಬಂಡಗಾರ (25), ವಿಜಯಕುಮಾರ್ ರೇವಣಸಿದ್ದಪ್ಪ ಕರೆಗೋಳ(23), ಸಂಜೀವ್ ಕುಮಾರ್ ಹನುಮಂತರಾಯ ಕರೆಗೋಳ(25), ಅಲ್ದಿಹಾಳ ಗ್ರಾಮದ ಲಕ್ಷ್ಮಣ ಲಕ್ಷ್ಮೀಕಾಂತ್ ತಳವಾರ(24) ಹಾಗೂ 17 ವರ್ಷ ಬಾಲಕ ಬಂಧಿತರು.

ಬಂಧಿತರಿಂದ ಕಿವಿಯೋಲೆ, ಮಾಟನಿ, ಗುಂಡಿನ ಸರ, ಮೂಗುತ್ತಿ, ಲಿಂಗದ ಕಾಯಿ, ₹5,500 ಜಪ್ತಿ ಮಾಡಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪೇಠಶಿರೂರ ಗ್ರಾಮದಲ್ಲಿ ಜಗದೇವಿ ಲಾಳಿ (78) ಎಂಬುವರು ಒಂಟಿಯಾಗಿ ನೆಲೆಸಿದ್ದರು. ಆರೋಪಿಗಳು ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ, ನಗದು ಕದ್ದಿದ್ದರು. ಜೊತೆಗೆ ಇದೊಂದು ಸಹಜ ಸಾವು ಎಂಬಂತೆ ಬಿಂಬಿಸಿದ್ದರು. ಜಗದೇವಿ ಲಾಳಿ ಅವರು ಜುಲೈ10ರಂದು ಮೃತಪಟ್ಟಿದ್ದರು. ಅನುಮಾನಾಸ್ಪದ ಸಾವಿನ ದೂರು ದಾಖಲಾಗಿತ್ತು. ಸ್ಥಳ ಮಹಜರು ನಡೆಸಿದ್ದಾಗ ಅನುಮಾನ ಮೂಡಿತ್ತು. ಪ್ರಾಥಮಿಕ ತನಿಖೆ ನಡೆಸಿ, ತಾಂತ್ರಿಕ ಮಾಹಿತಿ ಕಲೆ ಹಾಕಿದಾಗ ಇದೊಂದು ಕೊಲೆ ಎಂಬ ಶಂಕೆಯಿಂದ ಕೊಲೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಯಿತು’ ಎಂದು ವಿವರಿಸಿದರು.

ʼಆರೋಪಿಗಳು ಮಧ್ಯಾಹ್ನದ ಹೊತ್ತಲ್ಲಿ ಮನೆಯನ್ನು ಹಿಂದಿನ ಬಾಗಿಲಿನಿಂದ ಹೊಕ್ಕಿದ್ದರು. ಮುಂಬಾಗಿಲಿನ ಒಳಕೊಂಡಿ ಹಾಕಿ, ಸೀರೆಯಿಂದ ಕುತ್ತಿಗೆಗೆ ಸುತ್ತಿ, ತಲೆಗೆ ರಾಡ್​ನಿಂದ ಹೊಡೆದಿದ್ದು, ಕೊಲೆ ಮಾಡಿದ್ದರು. ವೃದ್ಧೆಯ ಕೊರಳಲ್ಲಿದ್ದ ಗುಂಡಿನ ಸರ, ಅಲಮಾರಿಯಲ್ಲಿದ್ದ ₹21 ಸಾವಿರ, ಲಿಂಗದ ಕಾಯಿ ಕದ್ದು, ಅಜ್ಜಿಯನ್ನು ಸಹಜ ಸ್ಥಿತಿಯಲ್ಲಿ ಮಲಗಿಸಿ ಹಿಂದಿನ ಬಾಗಿಲಿನಿಂದ ಪರಾರಿಯಾಗಿದ್ದರು. ಸ್ಥಳ ಮಹಜರು ನಡೆಸಿದಾಗ ಮೂಡಿದ ಅನುಮಾನದಿಂದ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಪ್ರೇಕ್ಷಕರ ಮನಸೂರೆಗೊಂಡ ʼರಮಾಬಾಯಿ ಅಂಬೇಡ್ಕರ್‌ʼ ನಾಟಕ

ಈ ಸಂಬಂಧ ಮಾಡಬೂಳ ಠಾಣೆಯಲ್ಲಿ ಕೊಲೆ ಪ್ರಕರಣ​ ದಾಖಲಿಸಿ, ಅತ್ಯಂತ ಕ್ಲಿಷ್ಟಕರ, ಮುಚ್ಚಿಹೋಗಬಹುದಾದ ಪ್ರಕರಣ ಭೇದಿಸುವಲ್ಲಿ ಪೊಲೀಸರ​ ತಂಡ ಯಶಸ್ವಿಯಾಗಿದೆ. ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ಗೌತಮ ಸೇರಿದಂತೆ ಇತರ ಪೊಲೀಸ್‌ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...