ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಒಬ್ಬಂಟಿಯಾಗಿದ್ದ 75 ವರ್ಷದ ವೃದ್ಧೆಯ ಮನೆಗೆ ನುಗ್ಗಿದ ವ್ಯಕ್ತಿ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯ ಬಳಿಯಿದ್ದ ಹಣ ಮತ್ತು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.
ಈ ಕುರಿತು ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಘಟನೆ ಖಂಡಿಸಿ ಪ್ರತಿಭಟನೆ :
ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಕೂಡಲೇ ಬಂಧಿಸಿ ಗಲ್ಲು ವಿಧಿಸುವಂತೆ ಆಗ್ರಹಿಸಿ ಘಟನೆ ಚಿಂಚೋಳಿ ತಾಲೂಕು ಆಡಳಿತ ಕಚೇರಿ ಎದುರು ಭೋವಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ʼವೃದ್ಧೆಯ ಮೇಲಿನ ಅತ್ಯಾಚಾರ ಮಾನವ ಕುಲ ತಲೆತಗ್ಗಿಸುವ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಆರೋಪಿಯನ್ನು ಬಿಡಬಾರದು, ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಮತದಾರರಿಗೆ ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ನಾಯಕ; ವಿಡಿಯೋ ವೈರಲ್
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಜಗನಾಥ ಗುತ್ತೆದಾರ್, ಸಮಾಜದ ಜಿಲ್ಲಾಧ್ಯಕ್ಷ ಗುಂಡಪ್ಪ ಸಾಲಕುಂಕೆ, ಮುಖಂಡರಾದ ವಿಠ್ಠಲ ನೆಲೋಗಿ, ಮುಖಂಡರಾದ ಹಣಮಂತ ಗಾರಂಪಳ್ಳಿ, ಬಸವರಾಜ ವಾಡಿ, ರಾಮರೆಡ್ಡಿ ಪಾಟೀಲ್, ವಿಜಯಕುಮಾರ್ ಚೆಂಗಟಿ, ಮಾರುತಿ ಗಂಜಗಿರಿ, ಗೋಪಾಲ ಚಂದ್ರಂಪಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





